ರಾಷ್ಟ್ರೀಯ ವಿಚಾರಧಾರೆಯಲ್ಲಿ ಈ ಬಾರಿಯ ಚುನಾವಣೆ: ಸತೀಶ್ ಕುಂಪಲ

KannadaprabhaNewsNetwork |  
Published : Mar 05, 2024, 01:33 AM IST
ಫೊಟೋ: ೪ಪಿಟಿಆರ್-ಬಿಜೆಪಿಪುತ್ತೂರಿನಲ್ಲಿ ಬಿಜೆಪಿ ಗ್ರಾಮ ಚಲೋ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. | Kannada Prabha

ಸಾರಾಂಶ

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮತ್ತು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಸಾಧನೆಗಳನ್ನು ಜನರಿಗೆ ತಿಳಿಸುವ ನಿಟ್ಟಿನಲ್ಲಿ ಬಿಜೆಪಿ ಪುತ್ತೂರು ಮಂಡಲದ ವತಿಯಿಂದ ಸೋಮವಾರ ಪುತ್ತೂರಿನ ಕಲ್ಲೇಗ ಭಾರತ್ ಮಾತಾ ಸಮುದಾಯ ಭವನದಲ್ಲಿ ಗ್ರಾಮ ಚಲೋ ಕಾರ್ಯಾಗಾರ ನಡೆಯಿತು. ದ.ಕ. ಬಿಜೆಪಿ ಅಧ್ಯಕ್ಷ ಸತೀಶ್‌ ಕುಂಪಲ ಉದ್ಘಾಟಿಸಿದರು.

ಕನ್ನಡಪ್ರಭ ವಾರ್ತೆ ಪುತ್ತೂರುವಿಶ್ವಕ್ಕೆ ನಾಯಕತ್ವ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರೀಯ ವಿಚಾರಕ್ಕೆ ಒತ್ತು ಕೊಟ್ಟು ಕೆಲಸ ಮಾಡಿದ್ದಾರೆ. ಬಿಜೆಪಿಯು ಯಾವ ದಿಕ್ಕಿನಲ್ಲಿ ಹೋಗಬೇಕೋ ಆ ದಿಕ್ಕಿನಲ್ಲಿ ಸಾಗಿ ಕೆಲಸ ಕಾರ್ಯ ಮಾಡಿದ ಓರ್ವ ಸಮರ್ಥ ಪ್ರಧಾನಿ ನರೇಂದ್ರ ಮೋದಿಯಾಗಿದ್ದು, ಈ ಬಾರಿಯ ಚುನಾವಣೆ ಒಂದು ರಾಷ್ಟ್ರೀಯ ಚುನಾವಣೆಯಾಗಿದೆ. ರಾಷ್ಟ್ರೀಯ ವಿಚಾರಧಾರೆ ಮತ್ತು ನರೇಂದ್ರ ಮೋದಿ ಅವರನ್ನು ದೇಶದ ಪ್ರಧಾನಿ ಮಾಡಬೇಕೆಂಬ ನಿಟ್ಟಿನಲ್ಲಿ ಈ ಬಾರಿಯ ಚುನಾವಣೆ ನಡೆಯಲಿದೆ ಎಂದು ಬಿಜೆಪಿ ಜಿಲ್ಲಾ ಅಧ್ಯಕ್ಷ ಸತೀಶ್ ಕುಂಪಲ ಹೇಳಿದ್ದಾರೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮತ್ತು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಸಾಧನೆಗಳನ್ನು ಜನರಿಗೆ ತಿಳಿಸುವ ನಿಟ್ಟಿನಲ್ಲಿ ಬಿಜೆಪಿ ಪುತ್ತೂರು ಮಂಡಲದ ವತಿಯಿಂದ ಸೋಮವಾರ ಪುತ್ತೂರಿನ ಕಲ್ಲೇಗ ಭಾರತ್ ಮಾತಾ ಸಮುದಾಯ ಭವನದಲ್ಲಿ ನಡೆದ ಗ್ರಾಮ ಚಲೋ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಪುತ್ತೂರಿನಲ್ಲಿ ಅಧ್ಯಕ್ಷರ ಘೋಷಣೆ ಆಗಿಲ್ಲ, ಕ್ಷೇತ್ರಮಟ್ಟದ ತಂಡ ಘೋಷಣೆ ಆಗಿಲ್ಲ ಎಂದು ಕಾರ್ಯಕರ್ತರಿಗೆ ಗೊಂದಲ ಬೇಡ. ರಾಜ್ಯದಲ್ಲಿ ೧೦ ಕಡೆ ಜಿಲ್ಲಾಧ್ಯಕ್ಷರನ್ನೇ ಘೋಷಣೆ ಮಾಡಿಲ್ಲ. ಈಗಿರುವ ತಂಡವೇ ಅಲ್ಲಿ ಕೆಲಸ ಮಾಡುತ್ತಿದೆ. ಪುತ್ತೂರಿನಲ್ಲೂ ಈಗಿರುವ ತಂಡವೇ ಕೆಲಸ ಮಾಡಬೇಕು ಎಂಬ ರಾಜ್ಯ ನಾಯಕರ ಅಪೇಕ್ಷೆಯಂತೆ ತಂಡವನ್ನು ಮುಂದುವರಿಸಿದ್ದಾರೆ ಹೊರತು ಬೇರೆ ಯಾವುದೇ ಕಾರಣಕ್ಕೂ ಹೊಸ ಸಮಿತಿ ಘೋಷಣೆ ಮಾಡದೆ ಇರುವುದಲ್ಲ. ಈ ಸಮಿತಿಯ ಅನುಭವದ ಆಧಾರದ ಮೇಲೆ ಮುಂದೆ ಚುನಾವಣೆಯ ಕೆಲಸ ಕಾರ್ಯ ನಡೆಯಲಿದೆ ಎಂದರು. ಬಿಜೆಪಿ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಮಾಜಿ ಶಾಸಕ ಸಂಜೀವ ಮಠಂದೂರು, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮತ್ತು ಪುತ್ತೂರು ಉಸ್ತುವಾರಿ ಪ್ರೇಮಾನಂದ್, ಜಿಲ್ಲೆಯ ಉಪಾಧ್ಯಕ್ಷರಾದ ಪುತ್ತೂರು ಮಂಡಲದ ಪ್ರಭಾರಿ ಸುನಿಲ್ ಆಳ್ವ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಯತೀಶ್ ಅರುವಾರ್ ಮತ್ತು ಕಿಶೋರ್ ಕುಮಾರ್ ಬೊಟ್ಯಾಡಿ, ರಾಜ್ಯ ಬಿಜೆಪಿ ಸಾಮಾಜಿಕ ಜಾಲತಾಣ ಸಂಚಾಲಕ ವಿಕಾಸ್ ಪುತ್ತೂರು, ಜಿಲ್ಲಾ ಸಹಪ್ರಭಾರಿ ಗೋಪಾಲಕೃಷ್ಣ ಹೇರಳೆ, ಜಿಲ್ಲಾ ಕಾರ್ಯದರ್ಶಿ ವಿದ್ಯಾ ಆರ್ ಗೌರಿ, ರಾಜ್ಯ ಹಿಂದುಳಿದ ಮೋರ್ಚಾ ಕಾರ್ಯದರ್ಶಿ ಆರ್.ಸಿ. ನಾರಾಯಣ, ಎಸ್.ಟಿ. ಮೋರ್ಚಾ ಜಿಲ್ಲಾಧ್ಯಕ್ಷ ಹರೀಶ್ ಬಿಜತ್ರೆ, ಬಿಜೆಪಿ ಪುತ್ತೂರು ಚುನಾವಣಾ ಉಸ್ತುವಾರಿ ಸುಲೋಚನಾ ಭಟ್ ಇದ್ದರು. ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ನಿತೀಶ್ ಕುಮಾರ್ ಶಾಂತಿವನ ನಿರ್ವಹಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!