ಹುಬ್ಬಳ್ಳಿ:
ಬುಧವಾರ ಕನ್ನಡಪ್ರಭ ಕಚೇರಿಗೆ ಆಗಮಿಸಿ ಮಾಧ್ಯಮ ಬಳಗಕ್ಕೆ ಆಮಂತ್ರಣ ಪತ್ರಿಕೆ ನೀಡುವ ಮೂಲಕ ಆಹ್ವಾನಿಸಿ ಅವರು ಮಾತನಾಡಿದರು.
ಕಾಂಗ್ರೆಸ್ ಸರ್ಕಾರ ಬಡವರ ಪರವಾಗಿದೆ ಎಂಬುದಕ್ಕೆ ಇಷ್ಟೊಂದು ಮನೆ ಹಂಚಿಕೆ ಮಾಡುತ್ತಿರುವುದೇ ಸಾಕ್ಷಿಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿಶೇಷ ಕಾಳಜಿಯಿಂದಾಗಿ ಬಡವರ ಸೂರಿನ ಕನಸು ನನಸಾಗುತ್ತಿದೆ. ಜ.24ರಂದು ನಡೆಯುವ ಕಾರ್ಯಕ್ರಮ ಅತ್ಯಂತ ಐತಿಹಾಸಿಕ ಕಾರ್ಯಕ್ರಮವಾಗಲಿದೆ. ಮನೆಗಳನ್ನು ಅತ್ಯಂತ ಹೈಟೆಕ್ ಆಗಿ ನಿರ್ಮಿಸಲಾಗಿದೆ. ಶಾಪಿಂಗ್ ಮಾಲ್, ಆಸ್ಪತ್ರೆ, ಉದ್ಯಾನವನ ಹೀಗೆ ಅತ್ಯಂತ ಸುಸಜ್ಜಿತವಾಗಿವೆ. ಯಾವುದೇ ಖಾಸಗಿ ಸೊಸೈಟಿಗೂ ಕಮ್ಮಿಯಿಲ್ಲದಂತೆ ಬಡವರ ನಿರ್ಮಿಸಿರುವ ತೃಪ್ತಿ ತಮಗಿದೆ ಎಂದರು.ಈ ಸಂದರ್ಭದಲ್ಲಿ ಸಚಿವರನ್ನು ಸನ್ಮಾನಿಸಲಾಯಿತು. ಹುಬ್ಬಳ್ಳಿ-ಧಾರವಾಡ ಮಹಾನಗರ ಜಿಲ್ಲಾಧ್ಯಕ್ಷ ಅನಿಲಕುಮಾರ ಪಾಟೀಲ, ಕಾಂಗ್ರೆಸ್ ಜಿಲ್ಲಾ ವಕ್ತಾರ ಶಿವಾನಂದ ಮುತ್ತಣ್ಣವರ, ಕನ್ನಡಪ್ರಭದ ಹುಬ್ಬಳ್ಳಿ ಬ್ಯೂರೋ ಮುಖ್ಯಸ್ಥ ಮಲ್ಲಿಕಾರ್ಜುನ ಸಿದ್ದಣ್ಣವರ, ಸುದ್ದಿ ಸಂಪಾದಕ ಮಧುಕೇಶ್ವರ ಯಾಜಿ, ಪ್ರಸಾರಂಗ ವಿಭಾಗದ ಮುಖ್ಯಸ್ಥ ಶ್ರೀಪಾದ ಕುಲಕರ್ಣಿ ಸೇರಿದಂತೆ ಸಿಬ್ಬಂದಿ ಪಾಲ್ಗೊಂಡಿದ್ದರು.