ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ
ಪಟ್ಟಣದ ತಹಸೀಲ್ದಾರ್ ಕಚೇರಿ ಆವರಣದಲ್ಲಿ ಬರ ಘೋಷಣೆಗೆ ಆಗ್ರಹಿಸಿ ನಡೆದಿರುವ ಬಿಜೆಪಿ ಹಮ್ಮಿಕೊಂಡಿರುವ ಎರಡನೇ ದಿನದ ಧರಣಿ ಸತ್ಯಾಗ್ರಹವನ್ನುದ್ದೇಶಿಸಿ ಮಂಗಳವಾರ ಅವರು ಮಾತನಾಡಿದರು.ನಿಯಮಾವಳಿ ಪ್ರಕಾರ ಎಲ್ಲ ಅಂಶಗಳು ಬರ ಘೋಷಣೆಗೆ ಅರ್ಹ ತಾಲೂಕು ಎಂದು ಹೇಳುತ್ತಿದ್ದರೂ ರೈತರ ಬದುಕಿನೊಂದಿಗೆ ಚೆಲ್ಲಾಟ ಆಡುತ್ತಿರುವುದೇಕೆ ಎಂದು ಪ್ರಶ್ನಿಸಿದರು.
ಉಸ್ತುವಾರಿ ಸಚಿವರು-ಕ್ಷೇತ್ರದ ಶಾಸಕರು ನಿಮ್ಮ ರಾಜಕೀಯ ಜಗಳವನ್ನು ರಾಹುಲ್ ಗಾಂಧಿ, ಮುಖ್ಯಮಂತ್ರಿಗಳ ಮುಂದೆ ಮಾಡಿ. ರೈತರಿಗೆ ಪರಿಹಾರ ಕೊಡಿಸುವ ಕೆಲಸ ಮಾಡಿ. ಅದು ಉಸ್ತುವಾರಿ ಮಂತ್ರಿಗಳು, ಶಾಸಕರ ಜವಾಬ್ದಾರಿ. ರೈತರ ಹೋರಾಟ ಆರಂಭವಾದ ನಂತರ ಅಪ್ಪಾಜಿ ನಾಡಗೌಡರು ಹಸಿ ಸುಳ್ಳು ಹೇಳುತ್ತಿದ್ದಾರೆ. ಮುಖ್ಯಮಂತ್ರಿಗಳ ಜತೆಗೆ ಮಾತನಾಡಿದ್ದೇನೆ. ಆದಷ್ಟು ಶೀಘ್ರ ಬರಗಾಲ ಘೊಷಣೆ ಆಗುತ್ತದೆ ಎಂದು ಒಂದು ಕಡೆ ಹೇಳಿದರೆ ಸತ್ಯಾಗ್ರಹ ಮಾಡುತ್ತೇನೆ ಎಂದು ಮತ್ತೊಮ್ಮೆ ಹೇಳುತ್ತಾರೆ ಎಂದು ಟೀಕಿಸಿದರು.ರೈತರು ಸಾಲ ಕಟ್ಟಲು ಹೋಗಬೇಡಿ. ಬೆಳೆ ಬೆಳೆಯುವುದಕ್ಕೆ ನಮ್ಮ ರೈತ ಸಾಲ ಮಾಡಿದ್ದಾನೆ. ಅದನ್ನು ಕಟ್ಟುವ ಅವಶ್ಯಕತೆ ಇಲ್ಲ. ಸರ್ಕಾರ ₹5 ಲಕ್ಷದವರೆಗೆ ಬೆಳೆಸಾಲ ಮನ್ನಾ ಮಾಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ ನಡೆದಿರುವ ಪಾದಯಾತ್ರೆಯಲ್ಲಿ ಹಕ್ಕೊತ್ತಾಯ ಮಾಡಲಾಗಿದೆ. ರೈತರಿಗೆ ಹೆಕ್ಟೇರ್ಗೆ ₹50 ಸಾವಿರ ಪರಿಹಾರ ನೀಡಬೇಕು ಎಂದು ನಡಹಳ್ಳಿ ಆಗ್ರಹಿಸಿದರು.
ಹೋರಾಟದಲ್ಲಿ ಯುವಕರು ಭಾಗಿಯಾಗಲು ಭರತಗೌಡ ಕರೆ: ಬೆಂಗಳೂರಿನಿಂದ ಆಗಮಿಸಿದ್ದ ಯುವ ಉದ್ಯಮಿ ಭರತಗೌಡ ಪಾಟೀಲ ನಡಹಳ್ಳಿ ಮಾತನಾಡಿ, ದೇಶದ ಬೆನ್ನೆಲುಬು ರೈತ. ಅವರಿಗೆ ಸಂಕಷ್ಟ ಎದುರಾದಾಗ ಅವರ ಬೆನ್ನಿಗೆ ನಿಲ್ಲುವ ಕೆಲಸವನ್ನು ಯುವ ಸಮೂಹ ಮಾಡಬೇಕು. ಕ್ಷೇತ್ರದ ಶಾಸಕರು ರೈತರ ಸಂಕಷ್ಟಕ್ಕೆ ಸ್ಪಂದಿಸುತ್ತಿಲ್ಲ. ಸರ್ಕಾರವನ್ನು ಎಚ್ಚರಿಸಲು ಯುವ ಸಮೂಹ ರೈತರ ಹೋರಾಟದಲ್ಲಿ ಭಾಗಿಯಾಗಬೇಕು ಎಂದು ಕರೆ ನೀಡಿದರು.
-ಎ.ಎಸ್. ಪಾಟೀಲ ನಡಹಳ್ಳಿ ಅಧ್ಯಕ್ಷರು ಬಿಜೆಪಿ ರಾಜ್ಯ ಯುವ ಮೋರ್ಚಾ ಘಟಕ