ಕಾರವಾರ: ಲೋಕಸಭಾ ಚುನಾವಣೆಯಂದು ಮತಗಟ್ಟೆಗಳಲ್ಲಿ ಕರ್ತವ್ಯ ನಿರ್ವಹಿಸುವ ಮತಗಟ್ಟೆ ಸಿಬ್ಬಂದಿ ತಮ್ಮ ಮನೆ ತೊರೆದು ಶಾಲೆಗಳಲ್ಲಿರುವ ಮತಗಟ್ಟೆಗಳಲ್ಲಿ ತಂಗುವ ಸಮಯದಲ್ಲಿ ದೈನಂದಿನ ಬಳಕೆಗೆ ಬಳಸುವ ಅಗತ್ಯ ವಸ್ತುಗಳ ಯಾವುದೇ ಕೊರೆತೆಯಾಗದಂತೆ ಇದೇ ಮೊದಲ ಬಾರಿಗೆ ವಿಶೇಷ ಕಿಟ್ನ್ನು ಜಿಲ್ಲಾಡಳಿತ ಸಿದ್ಧಪಡಿಸುತ್ತಿದೆ.
ಕಿಟ್ ಮಾತ್ರವಲ್ಲದೇ ಸಿಬ್ಬಂದಿ ಆರೋಗ್ಯದ ಕುರಿತು ವಿಶೇಷ ಕಾಳಜಿ ವಹಿಸುತ್ತಿರುವ ಜಿಲ್ಲಾಡಳಿತ ಮತಗಟ್ಟೆಗಳಿಗೆ ತೆರಳುವ ಎಲ್ಲಾ ಸಿಬ್ಬಂದಿಗೆ ಶುದ್ಧ ಕುಡಿಯವ ನೀರಿನ ವ್ಯವಸ್ಥೆ ಒದಗಿಸುತ್ತಿದ್ದು, ಸಿಬ್ಬಂದಿಗಾಗಿಯೇ 30 ಲೀ. ಶುದ್ಧ ನೀರಿನ ಕ್ಯಾನ್ ಗಳನ್ನು ಪ್ರತಿಯೊಂದು ಮತಗಟ್ಟೆಗಳಿಗೆ ತಲುಪಿಸುವ ವ್ಯವಸ್ಥೆ ಮಾಡಿಕೊಂಡಿದೆ.
ಮತಗಟ್ಟೆಯಲ್ಲಿ ತಂಗುವ ಸಿಬ್ಬಂದಿಗೆ ಯಾವುದೇ ಕೊರತೆಯಾಗದಂತೆ ಶಾಲೆಯಲ್ಲಿರುವ ಶೌಚಾಲಯಗಳಲ್ಲಿ ಸ್ವಚ್ಛತೆ ಮತ್ತು ಸಮರ್ಪಕ ನೀರಿನ ಸೌಲಭ್ಯ ಇರುವ ಬಗ್ಗೆ ಮತ್ತೊಮ್ಮೆ ಪರಿಶೀಲಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.ಶುಚಿ- ರುಚಿ ಅಡುಗೆ: ಸಿಬ್ಬಂದಿಗೆ ಕಾಲ ಕಾಲಕ್ಕೆ ಶುದ್ಧ ಮತ್ತು ರುಚಿಕರ ಆಹಾರ ಒದಗಿಸಲು ಜಿಲ್ಲಾಡಳಿತ ಕ್ರಮ ಕೈಗೊಂಡಿದ್ದು, ಶಾಲೆಗಳಲ್ಲಿನ ಬಿಸಿಯೂಟ ತಯಾರಕರ ಮೂಲಕ ಆಹಾರ ಸಿದ್ಧಪಡಿಸಿ, ಸರಬರಾಜು ಮಾಡಲು ವ್ಯವಸ್ಥೆಗಳನ್ನು ಕೈಗೊಂಡಿದೆ. ಸಿಬ್ಬಂದಿಗೆ ವೈವಿಧ್ಯಮಯವಾದ ರುಚಿಕರ ಊಟ ಮತ್ತು ಉಪಹಾರ ನೀಡುವ ಸಲುವಾಗಿ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ವಿಶೇಷ ಮುತುವರ್ಜಿ ವಹಿಸಿದ್ದು, ಎಲ್ಲ ಸಿಬ್ಬಂದಿ ಮೆಚ್ಚುವಂತೆ ತಾವೇ ಪ್ರತ್ಯೇಕ ಮೆನು ನೀಡುವುದಾಗಿ ತಿಳಿಸಿದ್ದಾರೆ. ಆಹಾರ ತಯಾರಿಕೆಯ ಬೇಕಾದ ಗುಣಮಟ್ಟದ ಪದಾರ್ಥಗಳನ್ನು ಹೊರಗಿನಿಂದಲೇ ಖರೀದಿಸಿ ನೀಡಲಾಗುತ್ತಿದ್ದು, ಇದಕ್ಕಾಗಿ ಬಿಸಿಯೂಟ ಯೋಜನೆಯ ಪದಾರ್ಥಗಳನ್ನು ಬಳಸಿಕೊಳ್ಳದೇ ಇರಲು ನಿರ್ಧರಿಸಲಾಗಿದೆ. ಸಿಬ್ಬಂದಿಗೆ ಮೊದಲ ದಿನ ಮಧ್ಯಾಹ್ನ ಮತ್ತು ರಾತ್ರಿಯ ಭೋಜನ, ಮರುದಿನ ಬೆಳಗಿನ ಉಪಹಾರ ಮತ್ತು ಮಧ್ಯಾಹ್ನದ ಭೋಜನ ವ್ಯವಸ್ಥೆ ಮಾಡಲಾಗುತ್ತಿದೆ.ಮಹಿಳಾ ಸಿಬ್ಬಂದಿಗೆ ಭದ್ರತೆ