ಈ ಸಲ ವಾಡಿಕೆಗಿಂತ ದುಪ್ಪಟ್ಟು ಪೂರ್ವ ಮುಂಗಾರು : ಒಂದೂವರೆ ತಿಂಗಳಲ್ಲಿ ಶೇ.98ರಷ್ಟು ಹೆಚ್ಚು ಮಳೆ

KannadaprabhaNewsNetwork |  
Published : Apr 17, 2025, 12:04 AM ISTUpdated : Apr 17, 2025, 07:43 AM IST
mp monsoon forecast 2025 heavy rainfall

ಸಾರಾಂಶ

ರಾಜ್ಯದಲ್ಲಿ ಈ ಬಾರಿ ಪೂರ್ವ ಮುಂಗಾರು ಮಳೆ ಅಬ್ಬರ ತೀವ್ರಗೊಂಡಿದ್ದು, ವಾಡಿಕೆಗಿಂತ ದುಪ್ಪಟ್ಟು ಮಳೆಯಾದ ವರದಿಯಾಗಿದೆ.

 ಬೆಂಗಳೂರು : ರಾಜ್ಯದಲ್ಲಿ ಈ ಬಾರಿ ಪೂರ್ವ ಮುಂಗಾರು ಮಳೆ ಅಬ್ಬರ ತೀವ್ರಗೊಂಡಿದ್ದು, ವಾಡಿಕೆಗಿಂತ ದುಪ್ಪಟ್ಟು ಮಳೆಯಾದ ವರದಿಯಾಗಿದೆ.

ಮಾರ್ಚ್‌ನಿಂದ ಆರಂಭಗೊಳ್ಳುವ ಪೂರ್ವ ಮುಂಗಾರು ಮಳೆ ಜೂನ್‌ ವರೆಗೂ ಮುಂದುವರಿಯಲಿದೆ. ಕಳೆದ ಒಂದೂವರೆ ತಿಂಗಳಲ್ಲಿ ರಾಜ್ಯದಲ್ಲಿ ವಾಡಿಕೆ ಪ್ರಕಾರ 25 ಸೆಂ.ಮೀ. ನಷ್ಟು ಮಳೆಯಾಗಬೇಕು. ಆದರೆ, 48.9 ಸೆಂ.ಮೀ. ನಷ್ಟು ಮಳೆ ಸುರಿದಿದೆ. ಈ ಮೂಲಕ ವಾಡಿಕೆಗಿಂತ ಶೇ.98ರಷ್ಟು ಹೆಚ್ಚಿನ ಮಳೆಯಾಗಿದೆ.

ಕರಾವಳಿಯ ಮೂರು ಜಿಲ್ಲೆಗಳಲ್ಲಿ ವಾಡಿಕೆಯಂತೆ ಈ ಅವಧಿಗೆ 22.7 ಸೆಂ.ಮೀ. ಮಳೆಯಾಗಬೇಕು. ಆದರೆ, 43.1 ಸೆಂ.ಮೀ. ಮಳೆಯಾಗಿದೆ. ಅಂದರೆ ಶೇ.90ರಷ್ಟು ಮಳೆ ಹೆಚ್ಚಾಗಿದೆ. ದಕ್ಷಿಣ ಒಳನಾಡಿನಲ್ಲಿ 30.5 ಸೆಂ.ಮೀ. ಮಳೆಯಾಗಬೇಕು. ಆದರೆ, 62.7 ಸೆಂ.ಮೀ. ನಷ್ಟು ಮಳೆ ಸುರಿಯುವ ಮೂಲಕ ಮಳೆ ಪ್ರಮಾಣ ಶೇ.106ರಷ್ಟು ಹೆಚ್ಚಾಗಿದೆ.

ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ 19.2 ಸೆಂ.ಮೀ. ಮಳೆಯಾಗಬೇಕು. ಆದರೆ, ಈ ಬಾರಿ 33.8 ಸೆಂ.ಮೀ. ಮಳೆಯಾಗಿದ್ದು, ವಾಡಿಕೆಗಿಂತ ಶೇ.76ರಷ್ಟು ಹೆಚ್ಚು ಮಳೆ ಸುರಿದಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಉಷ್ಣ ಅಲೆ, ಸೆಕೆ ಕಡಿಮೆ: ಬೇಸಿಗೆ ಅವಧಿಯಾಗಿರುವುದರಿಂದ ಭಾರೀ ಬಿಸಿಲಿಂದ ಸೆಕೆ ಹಾಗೂ ಉಷ್ಣ ಅಲೆ ಭೀತಿ ಉಂಟಾಗುತ್ತಿತ್ತು. ಈ ಬಾರಿ ಪೂರ್ವ ಮುಂಗಾರು ಅವಧಿಯಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಸೆಕೆ ಮತ್ತು ಉಷ್ಣ ಅಲೆ ಭೀತಿ ಕಡಿಮೆಯಾಗಿದೆ. ಮಳೆ ವಾತಾವರಣ ಇರುವುದರಿಂದ ಗರಿಷ್ಠ ಉಷ್ಣಾಂಶವೂ ಕಡಿಮೆಯಾಗಿದೆ.

ಪೂರ್ವ ಮುಂಗಾರು ಮಳೆಯೂ ರಾಜ್ಯದಲ್ಲಿ ಇನ್ನೂ ಒಂದು ವಾರ ಕಾಲ ಮುಂದುವರೆಯುವ ಸಾಧ್ಯತೆ ಇದೆ. ಏ.20ರಿಂದ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಸ್ವಲ್ಪಮಟ್ಟಿಗೆ ಹೆಚ್ಚಾಗುವ ಸಾಧ್ಯತೆ ಇದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಗೆಹರಿಸಿಕೊಳ್ಳಲು ನಮ್ಮಲ್ಲಿ ಸಮಸ್ಯೆಗಳೇ ಇಲ್ಲ : ಡಿಕೆಶಿ!
ರಾಜಣ್ಣ ನೇಮಿಸಿದ್ದು ನಾನೇ ಎಂದ ಡಿಕೆಗೆ ಸಿದ್ದು ಟಾಂಗ್‌