ನಲುವತ್ತೆಕ್ರೆ ಗ್ರಾಮದ ಜನರ ಸಂಕಷ್ಟ । ಕಾಡು ಪ್ರಾಣಿಗಳ ಹಾವಳಿಯಿಂದಲೂ ಸಮಸ್ಯೆಕನ್ನಡಪ್ರಭ ವಾರ್ತೆ ಮಡಿಕೇರಿ
ಸುಮಾರು 150ಕ್ಕೂ ಅಧಿಕ ಮಂದಿ ವಾಸವಿರುವ ಇಲ್ಲಿಗೆ ತೆರಳುವ ರಸ್ತೆ ಅಭಿವೃದ್ಧಿಗೆ ಹಲವು ಬಾರಿ ಗ್ರಾಮಸ್ಥರು ಮನವಿ ಮಾಡಿಕೊಂಡಿದ್ದರು. ಗ್ರಾಮ ಪಂಚಾಯಿತಿಯಾಗಲಿ, ಜನ ಪ್ರತಿನಿಧಿಗಳಾಗಲಿ ಈವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿರುವ ಸ್ಥಳೀಯರು, ಇಲ್ಲಿನ ವಿದ್ಯಾರ್ಥಿಗಳು, ವಿಕಲಚೇತನರು, ಕಾರ್ಮಿಕರು ಸೇರಿದಂತೆ ಸಾರ್ವಜನಿಕರು, ಕಾಡುಪ್ರಾಣಿಗಳ ಆತಂಕದ ನಡುವೆ ನಡೆದಾಡಲು ಕೂಡ ಯೋಗ್ಯವಲ್ಲದ ಇದೇ ರಸ್ತೆಯನ್ನೇ ಅವಲಂಬಿಸಬೇಕಾಗಿದೆ.ಈ ವ್ಯಾಪ್ತಿಯಲ್ಲಿ ಕಾಡು ಪ್ರಾಣಿಗಳ ಹಾವಳಿ ಹೆಚ್ಚಿದ್ದು, ಇತ್ತೀಚೆಗಷ್ಟೆ ಕಾಡಾನೆ ದಾಳಿಗೆ ಓರ್ವ ಕಾರ್ಮಿಕ ಮಹಿಳೆ ಗಂಭೀರ ಗಾಯಗೊಂಡು ಮೈಸೂರಿನ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು.ಇಲ್ಲಿನ ಹದಗೆಟ್ಟಿರುವ ಕಿರಿದಾದ ರಸ್ತೆಯಲ್ಲಿ ಬಾಡಿಗೆ ವಾಹನಗಳು ಕೂಡ ಬರಲು ನಿರಾಕರಿಸುತ್ತಿದ್ದು, ಅನಾರೋಗ್ಯ ತುರ್ತು ಸಂದರ್ಭಗಳಲ್ಲಿ ಸಮಯಕ್ಕೆ ಸರಿಯಾಗಿ ರೋಗಿಯನ್ನು ಆಸ್ಪತ್ರೆಗೆ ಕೊಂಡೊಯ್ಯಲು ಕೂಡ ಜನ ಸಂಕಷ್ಟ ಎದುರಿಸುವಂತಾಗಿದೆ. ಹೀಗಾಗಿ ಸ್ಥಳೀಯ ಶಾಸಕರು, ಸಂಬಂಧಪಟ್ಟ ಇಲಾಖೆ ಇತ್ತ ಗಮನ ಹರಿಸಿ ಇಲ್ಲಿನ ಜನರಿಗೆ ಓಡಾಡಲು ಅನುಕೂಲವಾಗುವಂತಹ ಯೋಗ್ಯ ರಸ್ತೆಯನ್ನು ನಿರ್ಮಿಸಿಕೊಡಬೇಕೆಂಬುವುದು ಸ್ಥಳೀಯ ನಿವಾಸಿಗಳ ಆಗ್ರಹವಾಗಿದೆ.
---------------------ನಾವು ನಮ್ಮ ತಾತನ ಕಾಲದಿಂದಲೂ ಇಲ್ಲೇ ವಾಸವಿದ್ದೇವೆ. ನಾವು ದೊಡ್ಡವರಾಗಿ ನಮ್ಮ ಮಕ್ಕಳಿಗೂ ಮಕ್ಕಳಿದ್ದಾರೆ. ಆದರೆ ನಮ್ಮ ಊರಿಗೆ ತೆರಳುವ ರಸ್ತೆ ಮಾತ್ರ ಅಂದಿನಿಂದಲೂ ಹಾಗೇ ಉಳಿದಿದೆ. ಹಲವು ಬಾರಿ ಮನವಿ ಸಲ್ಲಿಸಿದ್ದು, ನಾವು ಕೂಡ ಇಂದೋ ನಾಳೆಯೋ ಅಭಿವೃದ್ಧಿ ಆಗುತ್ತದೆ ಎಂದು ಕಾದು ಕಾದು ಸಾಕಾಗಿದೆ. ಇನ್ನಾದರು ಜನ ಪ್ರತಿನಿಧಿಗಳು ಇತ್ತ ಗಮನ ಹರಿಸಿ ಯೋಗ್ಯವಾದ ರಸ್ತೆ ನಿರ್ಮಿಸಿಕೊಡಲಿ.। ಪ್ರಕಾಶ್ ಮಣಿ, ಸ್ಥಳೀಯ ನಿವಾಸಿ------------------
। ನಂಜುಂಡಸ್ವಾಮಿ, ಪಿಡಿಒ