- 2000 ನೇ ಮದ್ಯ ವರ್ಜನ ಶಿಬಿರದ 5 ನೇ ದಿನದ ಮಾಹಿತಿ, ಮಾರ್ಗದರ್ಶನ ಕಾರ್ಯಕ್ರಮ
ಮದ್ಯ ವರ್ಜನ ಶಿಬಿರದಲ್ಲಿ ಭಾಗವಹಿಸಿದ ಶಿಬಿರಾರ್ಥಿಗಳು ಮುಂದೆ ನಿಮಗೆ ಇಷ್ಟವಾದ ಒಳ್ಳೆಯ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು ಎಂದು ರೋಟರಿ ಕ್ಲಬ್ ಅಧ್ಯಕ್ಷ ಕಣಿವೆ ವಿನಯ್ ಸಲಹೆ ನೀಡಿದರು.
ಸೋಮವಾರ ಮಹಾವೀರ ಭವನದಲ್ಲಿ ಧ.ಗ್ರಾ.ಯೋಜನೆ ಹಮ್ಮಿಕೊಂಡಿರುವ 2000ನೇ ಮದ್ಯ ವರ್ಜನ ಶಿಬಿರದ 5 ನೇ ದಿನದ ಮಾಹಿತಿ, ಮಾರ್ಗದರ್ಶನ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಕೆಲವರು ಸಂತೋಷಕ್ಕೆ , ಕೆಲವರು ದುಖಃ ಬಂದಾಗ ಕುಡಿತ ಶುರು ಮಾಡುತ್ತಾರೆ. ಮುಂದೆ ಅದು ಚಟವಾಗಿ ಪರಿಣಮಿಸಿ ತಮ್ಮ ಕುಟುಂಬ , ಸಮಾಜವನ್ನು ಹಾಳು ಮಾಡುತ್ತಾರೆ ಎಂದರು.ಅತಿಥಿಯಾಗಿದ್ದ ಹಿರಿಯ ಪತ್ರಕರ್ತ ಯಡಗೆರೆ ಮಂಜುನಾಥ್ ಮಾತನಾಡಿ, ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಮಾರ್ಗದರ್ಶನದಲ್ಲಿ ಧ.ಗ್ರಾ.ಯೋಜನೆಯವರು ಇಡೀ ಸಮಾಜವನ್ನು ಸಂಸ್ಕಾರಯುತವಾಗಿ ಬೆಳೆಸುತ್ತಿದ್ದಾರೆ. ದ್ವಾಪರ ಯುಗದಲ್ಲೂ ಅಧರ್ಮ ಹೆಚ್ಚಾದಾಗ ಧರ್ಮದ ರಕ್ಷಣೆಗಾಗಿ ಶ್ರೀ ಕೃಷ್ಣ ಪರಮಾತ್ಮ ಪ್ರತ್ಯಕ್ಷನಾಗುತ್ತಿದ್ದ. ಕಲಿಯುಗ ದಲ್ಲಿ ಧರ್ಮದ ರಕ್ಷಣೆಗೆ, ಆರೋಗ್ಯವಂತ ಸಮಾಜದ ನಿರ್ಮಾಣಕ್ಕೆ ಧರ್ಮಸ್ಥಳದ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ದೇವರ ರೂಪದಲ್ಲಿ ಬಂದಿದ್ದಾರೆ ಎಂದರು.
ಸಭೆಯಲ್ಲಿ ಮದ್ಯ ವರ್ಜನ ವ್ಯವಸ್ಥಾಪನಾ ಸಮಿತಿ ಗೌರವಾಧ್ಯಕ್ಷ ಪ್ರಶಾಂತಶೆಟ್ಟಿ, ಎನ್.ಎಂ.ಕಾಂತರಾಜ್, ಮುಖಂಡರಾದ ಅರುಣಕುಮಾರ್, ಆಶೀಶ್ ಕುಮಾರ್, ರಶ್ಮಿ ದಯಾನಂದ್, ಎಂ.ಎನ್.ನಾಗೇಶ್, ಜ್ವಾಲಾಮಾಲಿನಿ ಬಾಲಿಕಾ ಪ್ರೌಢ ಶಾಲೆಯ ಶಿಕ್ಷಕ ಗುಣಪಾಲ್ ಜೈನ್, ಜಿಲ್ಲಾ ಜನ ಜಾಗೃತಿ ವೇದಿಕೆ ಸದಸ್ಯೆ ಭಾಗ್ಯ ನಂಜುಂಡಸ್ವಾಮಿ, ಕರವೇ ಮಹಿಳಾ ಘಟಕದ ಅಧ್ಯಕ್ಷೆ ಪ್ರೇಮ ಶ್ರೀನಿವಾಸ್, ವಿಪತ್ತು ನಿರ್ವಹಣಾ ಘಟಕದ ದೇವೇಂದ್ರ, ಧ.ಗ್ರಾ.ಯೋಜನೆ ಕೊಪ್ಪ ತಾ. ಯೋಜನಾಧಿಕಾರಿ ರಾಜೇಶ್ ಇದ್ದರು. ಇದೇ ಸಂದರ್ಭದಲ್ಲಿ ರೋಟರಿ ಕ್ಲಬ್ ನಿಂದ ಧ.ಗ್ರಾ.ಯೋಜನೆಯವರಿಗೆ ನೆನಪಿನ ಕಾಣಿಕೆ ವಿತರಿಸಲಾಯಿತು. ತೀರ್ಥೇಶ್ ಸ್ವಾಗತಿಸಿದರು.ರುದ್ರೇಶ್ ವಂದಿಸಿದರು.