ಕನ್ನಡಪ್ರಭ ವಾರ್ತೆ ಚಿತ್ರದುರ್ಗ
ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಯಾವುದೇ ಕಾರಣಕ್ಕೂ ಉಪ ಸಮಿತಿ ರಚನೆ ಅಥವಾ ಮತ್ತೊಂದು ಸಚಿವ ಸಂಪುಟದ ಸಭೆಗೆ ಮುಂದೂಡದೆ ಆ.16ರಂದು ಮಾದಿಗರು ಮತ್ತಿತರ ನೊಂದ ಜನರಿಗೆ ಸ್ವತಂತ್ರ ನೀಡುವ ಕ್ರಮಕೈಗೊಳ್ಳಬೇಕು ಈ ವಿಷಯದಲ್ಲಿ ಸಂಶಯವೇ ಬೇಡ ಎಂದರು.
ಮೊದಲು ಒಳಮೀಸಲಾತಿ ಜಾರಿಗೊಳಿಸುವ ಬದ್ಧತೆ ಇಲ್ಲವೆಂದರು ನಾಗಮೋಹನ್ ದಾಸ್ ಆಯೋಗ ರಚನೆ ವೇಳೆ ವಿರೋಧಿಸಿದರು. ಜಾತಿಗಣತಿ ಸಮೀಕ್ಷೆ ಕೈಗೊಳ್ಳುತ್ತಿದ್ದಂತೆ ಷಡ್ಯಂತ್ರ ಎಂದು ಕುಹುಕುವಾಡಿದರು ಈಗ ವರದಿ ಸರ್ಕಾರದ ಕೈ ಸೇರಿ ಸಚಿವ ಸಂಪುಟದಲ್ಲಿ ಮಂಡನೆ ಆಗುತ್ತಿದ್ದಂತೆ ಕೆಲವರು ಭೀತಿಗೆ ಒಳಗಾಗಿ ಜ್ಞಾನ ಸಂವಿಧಾನದ ಅರಿವು ಇಲ್ಲದೆ ಟೀಕಿಸುತ್ತಿದ್ದಾರೆ ಎಂದು ತಿಳಿಸಿದರು.ಈ ವಿಷಯದಲ್ಲಿ ಕಾಂಗ್ರೆಸ್ ಪಕ್ಷ ಏಕತೆ ಬದ್ಧತೆಯಿಂದ ಮುನ್ನಡೆಯುತ್ತಿದೆ ಚಿತ್ರದುರ್ಗದಲ್ಲಿ ಈ ಹಿಂದೆ ಎಸ್ಸಿ, ಎಸ್ಟಿ ಸಮಾವೇಶದಲ್ಲಿ ಘೋಷಣೆ ಮಾಡಿದಂತೆ ಹಾಗೂ ಪಕ್ಷದ ಪ್ರಣಾಳಿಕೆಯಲ್ಲಿ ಹೇಳಿದಂತೆ ನಡೆದುಕೊಳ್ಳುತ್ತಿದ್ದೇವೆ ಎಂದರು.
ಆದಿ ಆಂಧ್ರ, ಆದಿ ಕರ್ನಾಟಕ, ಆದಿ ದ್ರಾವಿಡ ಎಂದು ಕೆಲವರು ಗುರುತಿಸಿಕೊಂಡಿದ್ದು ಅವರಿಗೆ ಶೇ.1ರಷ್ಟು ಮೀಸಲಾತಿ ನೀಡಿರುವುದನ್ನು ಕೆಲವರು ವಿರೋಧಿಸುತ್ತಿದ್ದಾರೆ. ಆದರೆ ಸಂವಿಧಾನತ್ಮಕವಾಗಿ ಎಎ, ಎಕೆ, ಎಡಿ ಎಂದು ಗುರುತಿಸಿಕೊಳ್ಳಲು ಹಕ್ಕು ನೀಡಲಾಗಿದೆ. ಆದ್ದರಿಂದ ಈ ಗುಂಪನ್ನು ಉಳಿಸಿಕೊಳ್ಳಬೇಕು ಜತೆಗೆ ಅವರೆಲ್ಲರಿಗೂ ಗುರುತಿನ ಚೀಟಿ ನೀಡಿ ಶೇ.1ರ ಮೀಸಲಾತಿಯಡಿಯೇ ಸೌಲಭ್ಯ ಪಡೆಯಲು ಕ್ರಮ ಕೈಗೊಳ್ಳಬೇಕು. ಯಾವುದೇ ಕಾರಣಕ್ಕೂ ಛಲವಾದಿಯನ್ನು ಮಾದಿಗರ ಗುಂಪಿಗೆ ನುಸಳಲು ಅವಕಾಶ ನೀಡಬಾರದು
ಎಂದು ತಿಳಿಸಿದರು.ರಾಜ್ಯದಲ್ಲಿ ಮಾದಿಗರ ಸಂಖ್ಯೆ ಹೆಚ್ಚು ಇರುವುದರ ಜತೆಗೆ ಉದ್ಯೋಗ ಶಿಕ್ಷಣ ಆಸ್ತಿ ಗಳಿಸಿ ಸಾಮಾಜಿಕ ಸ್ಥಾನದ ಸೇರಿ ವಿವಿಧ ಕ್ಷೇತ್ರದಲ್ಲಿ ಅತ್ಯಂತ ಹಿಂದುಳಿದಿದ್ದಾರೆಂಬ ನಿಖರ ಮಾಹಿತಿ ಸಮೀಕ್ಷೆ ವೇಳೆ ದೊರೆತಿದೆ. ಆದ್ದರಿಂದ ಶೇ.6ರಷ್ಟು ಮೀಸಲಾತಿ ನೀಡಲಾಗಿದೆ. ಇದು 7ಕ್ಕೆ ಏರಿಸಬೇಕಾಗಿತ್ತು ಆದರೂ ನಾವು ವರದಿಯನ್ನು ಸ್ವಾಗತಿಸಿದ್ದೇವೆ ಆದರೆ ಕೆಲವರು ಅನಗತ್ಯ ಗೊಂದಲ ಏರ್ಪಡಿಸುವ ಹುನ್ನಾರು ನಡೆಸುತ್ತಿದ್ದಾರೆ ಇದಕ್ಕೆ ಸರ್ಕಾರ ಕಿವಿಕೊಡಬಾರದು ಎಂದು ಆಗ್ರಹಿಸಿದರು.ಸುದ್ದಿಗೋಷ್ಠಿಯಲ್ಲಿ ಲಿಡ್ಕರ್ ಮಾಜಿ ಅಧ್ಯಕ್ಷ ಒ.ಶಂಕರ್, ವಕೀಲ ಶರಣಪ್ಪ, ರವೀಂದ್ರ ತಾಪಂ ಮಾಜಿ ಸದಸ್ಯ ಸಮರ್ಥರಾಯ, ಅನಿಲ್ ಕೋಟಿ, ಎಂ.ಜೆ.ಪ್ರಸನ್ನ ಇತರರಿದ್ದರು.