ಜ್ಞಾನ ಹೊಂದಿದವರು ಜಗತ್ತನ್ನೇ ಗೆಲ್ಲಬಲ್ಲರು

KannadaprabhaNewsNetwork |  
Published : Oct 10, 2024, 02:33 AM IST
ಪೋಟೋ: 09ಎಸ್‌ಎಂಜಿಕೆಪಿ01ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ಮಹಾನಗರ ಪಾಲಿಕೆ‌ ಹಾಗೂ ಸಮನ್ವಯ ಟ್ರಸ್ಟ್ ಸಹಯೋಗದಲ್ಲಿ‌ ಜ್ಞಾನ ದಸರಾ ಪ್ರಯುಕ್ತ ಬುಧವಾರ ಆಯೋಜಿಸಿದ್ದ ಬದುಕಿನ ಅವಕಾಶಗಳ ಕುರಿತ ಕಾರ್ಯಾಗದಲ್ಲಿ ಗಣ್ಯರು ಶಾರದಾ ದೇವಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. | Kannada Prabha

ಸಾರಾಂಶ

ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ಮಹಾನಗರ ಪಾಲಿಕೆ‌ ಹಾಗೂ ಸಮನ್ವಯ ಟ್ರಸ್ಟ್ ಸಹಯೋಗದಲ್ಲಿ‌ ಜ್ಞಾನ ದಸರಾ ಪ್ರಯುಕ್ತ ಬುಧವಾರ ಆಯೋಜಿಸಿದ್ದ ಬದುಕಿನ ಅವಕಾಶಗಳ ಕುರಿತ ಕಾರ್ಯಾಗದಲ್ಲಿ ಗಣ್ಯರು ಶಾರದಾ ದೇವಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ಪ್ರಸ್ತುತ ಜಗತ್ತಿನಲ್ಲಿ ಜ್ಞಾನಕ್ಕೆ ಹೆಚ್ಚಿನ ಪ್ರಾಮುಖ್ಯತೆ ಇದ್ದು, ಜ್ಞಾನ ಹೆಚ್ಚು ಹೊಂದಿರುವ ಜನರು ಜಗತ್ತನ್ನೇ ಗೆಲ್ಲಬಲ್ಲರು ಎಂದು ಜಿಲ್ಲಾ ಪೊಲೀಸ್ ‌ವರಿಷ್ಠಾಧಿಕಾರಿ‌ ಜಿ.ಕೆ.ಮಿಥುನ್ ಕುಮಾರ್ ಹೇಳಿದರು.

ನಗರದ ಕುವೆಂಪು ರಂಗಮಂದಿರದಲ್ಲಿ ಮಹಾನಗರ ಪಾಲಿಕೆ‌ ಹಾಗೂ ಸಮನ್ವಯ ಟ್ರಸ್ಟ್ ಸಹಯೋಗದಲ್ಲಿ‌ ಜ್ಞಾನ ದಸರಾ ಪ್ರಯುಕ್ತ ಬುಧವಾರ ಆಯೋಜಿಸಿದ್ದ ಬದುಕಿನ ಅವಕಾಶಗಳ ಕುರಿತ ಕಾರ್ಯಾಗಾರದಲ್ಲಿ ಮಾತನಾಡಿದರು.

ಕಾಲೇಜು ಶಿಕ್ಷಣ ಪಡೆಯುತ್ತಿರುವಾಗಲೇ ನಿಮ್ಮ ಇಷ್ಟದ ಕ್ಷೇತ್ರದಲ್ಲಿ ಸಾಧನೆ‌ ಮಾಡುವ ಸಂಕಲ್ಪ ಹೊಂದಬೇಕು. ಪದವಿ ಪಡೆಯುವ ಅವಧಿಯು ಜೀವನದ ಅಮೂಲ್ಯ ಸಮಯ. ಈ ಹಂತದಲ್ಲಿ ನೀವು ಸರಿಯಾದ ಮಾರ್ಗದಲ್ಲಿ ಮುನ್ನಡೆದು ಉನ್ನತ ಸಾಧನೆ‌ ಮಾಡಬೇಕು ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಮಾತನಾಡಿ, ಬದುಕಿನಲ್ಲಿ ಯಶಸ್ಸು ಸಾಧಿಸಲು ಆತ್ಮವಿಶ್ವಾಸ ಅತ್ಯಂತ ಮುಖ್ಯ. ಎಂತಹ ಕಠಿಣ ಸನ್ನಿವೇಶ‌ ಎದುರಾದರೂ ಸಮರ್ಥವಾಗಿ ನಿಭಾಯಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ನಾವು ಕಂಡಿರುವ ಕನಸು ನನಸು ಮಾಡಿಕೊಳ್ಳಲು ಹಂತ ಹಂತವಾಗಿ ಯೋಜನೆ ಮಾಡಿ‌ ಪೂರ್ಣಗೊಳಿಸುವ ಮೂಲಕ ಗುರಿ ತಲುಪಬೇಕು ಎಂದು ಅಭಿಪ್ರಾಯಪಟ್ಟರು.

ಮಹಾನಗರ ಪಾಲಿಕೆ ಆಯುಕ್ತೆ ಡಾ.ಕವಿತಾ ಯೋಗಪ್ಪನವರ್ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಗ್ರಹಿಸುವ ಶಕ್ತಿ ಹೆಚ್ಚಿರುತ್ತದೆ. ಅದನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಶಿಕ್ಷಣ ಪಡೆಯುವ ಹಂತದಲ್ಲಿ ಧನಾತ್ಮಕ ಹಾಗೂ ಋಣಾತ್ಮಕ ಸಂಗತಿಗಳು ನಮ್ಮನ್ನು ಸೆಳೆಯುತ್ತವೆ. ಧನಾತ್ಮಕ ವಿಷಯಗಳ ಕಲಿಕೆಗೆ ಆದ್ಯತೆ ನೀಡಬೇಕು ಎಂದರು.

ವಿಧಾನ ಪರಿಷತ್ ಮಾಜಿ‌ ಸದಸ್ಯ, ಉದ್ಯಮಿ ಎಸ್.ರುದ್ರೇಗೌಡ, ತರಬೇತುದಾರ ಸಾಧನಾ ಮಂಜುನಾಥ್, ಮನೋವೈದ್ಯೆ ಡಾ.ಪ್ರೀತಿ.ವಿ‌.ಶಾನಭಾಗ್, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ರೈತ ದುರ್ಗಪ್ಪ ಅಂಗಡಿ, ಅಂತರಾಷ್ಟ್ರೀಯ ತರಬೇತುದಾರ ಎಸ್.ವಿ.ವೆಂಕಟೇಶ್ ಅವರು ಬದುಕಿನ ಅವಕಾಶಗಳ ಕುರಿತು ವಿಶೇಷ ಉಪನ್ಯಾಸ ನೀಡಿದರು.

ಕೌಶಲ್ಯ ಇಲಾಖೆ ಜಿಲ್ಲಾ ಅಧಿಕಾರಿ‌ ಸುರೇಶ್, ಸಮನ್ವಯ ಟ್ರಸ್ಟ್ ನಿರ್ದೇಶಕ ಸಮನ್ವಯ ಕಾಶಿ ,‌ ಶಶಿಧರ್, ಸಮನ್ವಯ ಟ್ರಸ್ಟ್ ಪದಾಧಿಕಾರಿಗಳು, ವಿವಿಧ ಕಾಲೇಜಿನ ಉಪನ್ಯಾಸಕ ವರ್ಗ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ