ಸಮಾಜಕ್ಕಾಗಿ ಸೇವೆ ಸಲ್ಲಿಸಿದವರನ್ನು ದೇವರಂತೆ ಪೂಜಿಸುವರು: ಶಾಸಕ ಜಿ.ಎಚ್.ಶ್ರೀನಿವಾಸ್

KannadaprabhaNewsNetwork |  
Published : Sep 08, 2025, 01:00 AM IST
ಶ್ರೀ ಬ್ರಹ್ಮಶ್ರೀ ನಾರಾಯಣ ಗುರುಗಳ 171ನೇ ಜಯಂತ್ಯೋತ್ಸವ ಸಮಾರಂಭ | Kannada Prabha

ಸಾರಾಂಶ

ತರೀಕೆರೆ, ಸಮಾಜಕ್ಕಾಗಿ ಸೇವೆ ಸಲ್ಲಿಸಿದ ಮಹನೀಯರನ್ನು ಜನರು ದೇವರಂತೆ ಪೂಜಿಸುತ್ತಾರೆ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದ್ದಾರೆ.

- ಶ್ರೀ ಬ್ರಹ್ಮಶ್ರೀ ನಾರಾಯಣ ಗುರುಗಳ 171ನೇ ಜಯಂತ್ಯುತ್ಸವ ಸಮಾರಂಭ

ಕನ್ನಡಪ್ರಭ ವಾರ್ತೆ, ತರೀಕೆರೆ

ಸಮಾಜಕ್ಕಾಗಿ ಸೇವೆ ಸಲ್ಲಿಸಿದ ಮಹನೀಯರನ್ನು ಜನರು ದೇವರಂತೆ ಪೂಜಿಸುತ್ತಾರೆ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದ್ದಾರೆ.ಭಾನುವಾರ ತಾಲೂಕು ಕಚೇರಿ ಆವರಣದಲ್ಲಿ ನಡೆದ ಶ್ರೀ ಬ್ರಹ್ಮಶ್ರೀ ನಾರಾಯಣ ಗುರುಗಳ 171ನೇ ಜಯಂತ್ಯುತ್ಸವ ಉದ್ಘಾಟಿಸಿ ಮಾತನಾಡಿ, ಕನಕದಾಸರು, ಸರ್ವಜ್ಞರು, ಗುರುನಾನಕ್, ಮಹಾತ್ಮಾ ಗಾಂಧೀಜಿ, ಶ್ರೀ ಬ್ರಹ್ಮಶ್ರೀ ನಾರಾಯಣ ಗುರುಗಳಂತ ಅನೇಕ ಮಹನೀಯರು ಜಾತಿ, ಅಸ್ಪೃಶ್ಯತೆ ಹೋಗಲಾಡಿಸಲು, ಸಮ ಸಮಾಜ ಕಟ್ಟಲು ಹೋರಾಡಿದವರು ಹಾಗೂ ಸಮಾಜಕ್ಕೆ ಸೇವೆ ಸಲ್ಲಿಸಿದವರನ್ನು ಜನರು ಸದಾ ನೆನಪಿಸಿ ಕೊಳ್ಳುತ್ತಾರೆ ಎಂದು ಹೇಳಿದರು.

ಲಿಂಗದಹಳ್ಳಿ ಹೋಬಳಿ ಅಭಿವೃದ್ಧಿಗೆ ಹೆಚ್ಚು ಅನುದಾನ ನೀಡಲಾಗಿದೆ. ನಿಮ್ಮ ಸಮುದಾಯದಲ್ಲಿ ಒಗ್ಗಟ್ಟಿದೆ. ಸಮುದಾಯದ ಬೇಡಿಕೆ ಈಡೇರಿಸಲು ಕ್ರಮ ವಹಿಸಲಾಗುವುದು. ಶ್ರೀ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತ್ಯುತ್ಸ ವವನ್ನು ಪ್ರತಿ ವರ್ಷ ಚೆನ್ನಾಗಿ ಆಚರಿಸಿ ಎಂದು ಸಲಹೆ ಮಾಡಿದರು.

ಪುರಸಭೆ ಅಧ್ಯಕ್ಷ ವಸಂತಕುಮಾರ್ ಮಾತನಾಡಿ ಸಮಾಜ ದೊಡ್ಡದಾಗಿ ಬೆಳೆದಿದೆ. ರಾಜಕೀಯವಾಗಿಯೂ ಬೆಳೆಯಲಿ ಎಂದು ಶುಭ ಕೋರಿದರು.ಪುರಸಭೆ ಮಾಜಿ ಅಧ್ಯಕ್ಷ ಟಿ.ಎಸ್.ಪ್ರಕಾಶ್ ವರ್ಮ ಮಾತನಾಡಿ ನಾರಾಯಣ ಗುರುಗಳ ಜಯಂತ್ಯುತ್ಸವವನ್ನು ಅದ್ಧೂರಿಯಿಂದ ಮಾಡಿದ್ದೀರಿ ಎಂದು ಶ್ಲಾಘಿಸಿದರು. ರಾಜ್ಯದ ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ, ಶಿವಮೊಗ್ಗದ ಗಾಂಧಿ ಎಂದೇ ಹೆಸರಾದ ಕಾಗೋಡು ತಿಮ್ಮಪ್ಪ, ಹಾಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ರಾಜ್ಯಕ್ಕೆಅಪಾರ ಕೊಡುಗೆ ನೀಡಿದ್ದಾರೆ ಎಂದರು.

ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಧ್ಯಾಪಕ ಪ್ರತಿಭಾ ಶಂಕರ್ ಮಾತನಾಡಿ ಬ್ರಹ್ಮಶ್ರೀ ನಾರಾಯಣ ಗುರು ಗಳು ಸರ್ವಶ್ರೇಷ್ಠ ಸಂತರು. ಎಲ್ಲರಿಗೂ ದೇವಸ್ಥಾನ ಪ್ರವೇಶಿಸಲು ಶ್ರಮಿಸಿದ್ದಲ್ಲದೆ, ಶಿಕ್ಷಣಕ್ಕಾಗಿ ರಾತ್ರಿ ಶಾಲೆಗಳನ್ನು ತೆರೆದು ಶಿಕ್ಷಣದ ಮಹತ್ವ ತಿಳಿಸಿಕೊಟ್ಟರು. ಎಲ್ಲ ಧರ್ಮಗಳ ಸಾರ ಒಂದೇ ಎಂದು ಸಾರಿದರು ಎಂದು ಹೇಳಿದರು.

ದಸಂಸ ರಾಜ್ಯ ಸಂಚಾಲಕ ತರೀಕೆರೆ ಎನ್.ವೆಂಕಟೇಶ್ ಮಾತನಾಡಿ ನಾರಾಯಣ ಗುರುಗಳು ಮಹಿಳೆಯರ ಶೋಷಣೆ ವಿರುದ್ಧ ಹೋರಾಡಿ, ಒಂದೇ ಜಾತಿ ಒಂದೇ ಮತ ಒಂದೇ ದೇವರು ಎಂದು ಸಾರಿದರು. ಮೂಡ ನಂಬಿಕೆಗಳನ್ನು ಹೋಗಲಾಡಿಸಲು ಪ್ರಾಣಿ ಬಲಿ, ದೇವದಾಸಿ ಪದ್ಧತಿ, ಬೆತ್ತಲೆ ಸೇವೆ ನಿಲ್ಲಿಸಿದರು. ಬಾಲ್ಯವಿವಾಹ ನಿಷೇಧಿಸಿದರು, ದಲಿತರೊಂದಿಗೆ ಸಹಬೋಜನ ಸ್ವೀಕರಿಸಿದರು ಎಂದು ತಿಳಿಸಿದರು.ಆರ್ಯ ಈಡಿಗ ಸಮಾಜದ ಉಪಾಧ್ಯಕ್ಷ ಮನೋಜ್ ಕುಮಾರ್ ಮಾತನಾಡಿ ಶ್ರೀ ಬ್ರಹ್ಮಶ್ರೀ ನಾರಾಯಣ ಗುರುಗಳು ಸಮಾಜಕ್ಕಾಗಿ ಉತ್ತಮ ಮಾರ್ಗದರ್ಶನ ನೀಡಿದ್ದಾರೆ ಎಂದು ಹೇಳಿದರು.ಸಮಾಜದ ಮುಖಂಡ ಟಿ.ಟಿ.ರಾಘವೇಂದ್ರ, ಮನೋಜ್ ಕುಮಾರ್, ಚಂದ್ರಶೇಖರ್ ಅಮೃತಾಪುರ, ಅಜಯ್ ಬಳ್ಳಾವರ ಅವರು ಸಮುದಾಯದ ಕೋರಿಕೆ ಕುರಿತು ಶಾಸಕ ಜಿ.ಎಚ್.ಶ್ರೀನಿವಾಸ್ ಗೆ ಮನವಿ ಸಲ್ಲಿಸಿದರು. ಮುಖಂಡರನ್ನು ಸನ್ಮಾನಿಸಲಾಯಿತು.

ಈಡಿಗ ಸಮಾಜದ ಮುಖಂಡ ಪುರಸಭೆ ಉಪಾಧ್ಯಕ್ಷೆ ಪಾರ್ವತಮ್ಮ ತಿಮ್ಮಯ್ಯ, ಟಿ.ಟಿ.ರಾಘವೇಂದ್ರ, ಮಧು ಸೂದನ್, ಸುರೇಶ್, ಟಿ.ಜೆ.ರಂಗನಾಥ್, ತಹಸೀಲ್ದಾರ್ ವಿಶ್ವಜೀತ್ ಮೇಹತ, ಕೃಷ್ಣಮೂರ್ತಿ ಡಿ.ಎನ್. ನರಸಿಂಹಮುೂರ್ತಿ, ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎ.ಪರುಶುರಾಮಪ್ಪ, ಪ್ರಮೋದ್, ತೇಜಸ್ವಿ, ಸಮಾಜದ ಮುಖಂಡರು ಭಾಗವಹಿಸಿದ್ದರು.-

7ಕೆಟಿಆರ್.ಕೆ.4ಃ

ತರೀಕೆರೆಯಲ್ಲಿ ನಡೆದ ಶ್ರೀ ಬ್ರಹ್ಮಶ್ರೀ ನಾರಾಯಣ ಗುರುಗಳ 171ನೇ ಜಯಂತ್ಯುತ್ಸವವನ್ನು ಶಾಸಕ ಜಿ.ಎಚ್.ಶ್ರೀನಿವಾಸ್ ಉದ್ಘಾಟಿಸಿದರು. ಪುರಸಭೆ ಅಧ್ಯಕ್ಷ ವಸಂತಕುಮಾರ್, ಉಪಾಧ್ಯಕ್ಷೆ ಪಾರ್ವತಮ್ಮ ತಿಮ್ಮಯ್ಯ, ಆರ್ಯ ಈಡಿಗ ಸಮಾಜದ ಉಪಾಧ್ಯಕ್ಷ ಮನೋಜ್ ಕುಮಾರ್, ಮುಖಂಡರಾದ ಟಿ.ಟಿ.ರಾಘವೇಂದ್ರ, ತಹಸೀಲ್ದಾರ್ ವಿಶ್ವಜೀತ ಮೇಹತ ಮತ್ತಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಭರ್ಜರಿ ಯಶಸ್ಸು ಕಂಡ ಕೆಪೆಕ್‌ ವಾಣಿಜ್ಯ ಮೇಳ
ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ಮೆಟ್ರೋ ದರ ಏರಿಕೆಗೆ ತಾತ್ಕಾಲಿಕ ತಡೆ : ತೇಜಸ್ವಿ ಸೂರ್ಯ