ಸಂಸ್ಕೃತ ತಿಳಿದವರು ಸಂಸ್ಕೃತದಲ್ಲೇ ಮಾತನಾಡಿ: ಡಾ. ಸಚಿನ್ ಕಠಾಳೆ

KannadaprabhaNewsNetwork |  
Published : Apr 08, 2024, 01:08 AM IST
ಸಂಸ್ಕೃತ ಸಮ್ಮೇಳನ ಉದ್ಘಾಟಿಸುತ್ತಿರುವುದು. | Kannada Prabha

ಸಾರಾಂಶ

ಡೊಂಗರಕೇರಿಯ ಕೆನರಾ ಹೈಸ್ಕೂಲ್‌ನ ಶ್ರೀ ಸುಧೀಂದ್ರ ಸಭಾ ಭವನದಲ್ಲಿ ಭಾನುವಾರ ಸಂಸ್ಕೃತ ಮಹೋದಧಿಃ ಜನಪದ ಸಮ್ಮೇಳನ ನಡೆಯಿತು.

ಕನ್ನಡಪ್ರಭ ವಾರ್ತೆ ಮಂಗಳೂರು

ಸಂಸ್ಕೃತ ಭಾಷೆಯನ್ನು ಅಧ್ಯಯನ ಮಾಡುವುದರಿಂದ ಅಪರಿಮಿತ ಜ್ಞಾನ ಸಿದ್ಧಿಯಾಗುತ್ತದೆ. ಸಂಸ್ಕೃತ ಭಾಷೆಯ ಸಂಭಾಷಣೆಯಿಂದ ಮನಸ್ಸಿನ ಸ್ಥಿತಿ ಅತ್ಯಂತ ಶುದ್ಧವಾಗುತ್ತದೆ. ಸಂಸ್ಕೃತ ತಿಳಿದವರು ಎಲ್ಲರ ಜತೆ ಸಂಸ್ಕೃತದಲ್ಲೇ ಸಂಭಾಷಣೆ ಮಾಡುವ ಮೂಲಕ ಭಾಷೆಯನ್ನು ಎಲ್ಲೆಡೆ ಪಸರಿಸಲು ಪ್ರಯತ್ನಿಸಬೇಕು ಎಂದು ಸಂಸ್ಕೃತ ಭಾರತಿಯ ಅಖಿಲ ಭಾರತ ಸಹಪ್ರಶಿಕ್ಷಣ ಪ್ರಮುಖ ಡಾ.ಸಚಿನ್ ಕಠಾಳೆ ಹೇಳಿದ್ದಾರೆ.

ಸಂಸ್ಕೃತ ಭಾರತೀ ಮಂಗಳೂರು ವತಿಯಿಂದ ನಗರದ ಡೊಂಗರಕೇರಿಯ ಕೆನರಾ ಹೈಸ್ಕೂಲ್‌ನ ಶ್ರೀ ಸುಧೀಂದ್ರ ಸಭಾ ಭವನದಲ್ಲಿ ಭಾನುವಾರ ನಡೆದ ಸಂಸ್ಕೃತ ಮಹೋದಧಿಃ ಜನಪದ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.ನಮ್ಮ ಸಂಸ್ಕೃತಿ ಮತ್ತು ಪರಂಪರೆ ಸಂಸ್ಕೃತದಲ್ಲಿದೆ. ಭಾರತದಲ್ಲಿ ಯಾವುದೆಲ್ಲ ಉತ್ತಮವಾದುದು ಇದೆಯೋ ಅದನ್ನು ರಕ್ಷಿಸಬೇಕು. ಯಾವುದು ಕೆಡುಕು ಬಯಸುತ್ತದೋ ಅದನ್ನು ನಾಶ ಮಾಡಬೇಕು. ಧರ್ಮ ಪಾಲನೆಯೇ ಧರ್ಮ ರಕ್ಷಣೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಮಂಗಳೂರು ನಗರ ಸಂಸ್ಕೃತ ಭಾರತೀ ಅಧ್ಯಕ್ಷ ಎಂ.ಆರ್. ವಾಸುದೇವ ಮಾತನಾಡಿ, ಸಂಸ್ಕೃತ ಭಾಷೆಯು ಭಾರತೀಯ ಭಾಷೆಗಳಿಗೆ ತಾಯಿ ಸ್ಥಾನದಲ್ಲಿದೆ. ಎಲ್ಲ ಕಲೆಗಳಿಗೂ, ವಿಜ್ಞಾನಕ್ಕೂ ಸಂಸ್ಕೃತದ ಕೊಡುಗೆ ಇದೆ ಎಂದರು.

ಕಾರ್ಯಕ್ರಮ ಉದ್ಘಾಟಿಸಿದ ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ದ.ಕ. ಜಿಲ್ಲಾಧ್ಯಕ್ಷ ಪಿ.ಬಿ.ಹರೀಶ್ ರೈ ಮಾತನಾಡಿ, ಸಂಸ್ಕೃತ ಭಾಷೆಗೆ ಅದ್ಭುತವಾದ ಶಕ್ತಿ ಇದೆ. ಭಾಷೆ ನಶಿಸಿ ಹೋದರೆ ನಮ್ಮ ಸಂಸ್ಕೃತಿಯೇ ನಾಶವಾಗುತ್ತದೆ ಎಂದು ಹೇಳಿದರು.

ಸಂಸ್ಕೃತ ಭಾರತೀ ಮಂಗಳೂರು ನೂತನ ಅಧ್ಯಕ್ಷರಾಗಿ ಕೆ.ಎಂ.ಸಿ. ಪ್ರಾಧ್ಯಾಪಕ ಡಾ. ವೇಣುಗೋಪಾಲ ಅವರ ನೇಮಕವನ್ನು ಘೋಷಿಸಲಾಯಿತು. ಸಂಸ್ಕೃತ ಭಾರತೀ ಪ್ರಾಂತ ಸಂಪರ್ಕ ಪ್ರಮುಖ ಕೆ.ವಿ. ಸತ್ಯನಾರಾಯಣ, ಮಂಗಳೂರು ವಿಭಾಗ ಸಂಯೋಜಕ ನಟೇಶ, ಮಹಾನಗರ ಸಂಯೋಜಕಿ ಸಂಧ್ಯಾ ಕಾಮತ್, ಗಣಪತಿ ಕಾಮತ್ ಇದ್ದರು. ರವಿಶಂಕರ ಹೆಗಡೆ ಅತಿಥಿಗಳ ಪರಿಚಯ ಮಾಡಿದರು. ಗಜಾನನ ಭೋವಿಕಾನ ಸ್ವಾಗತಿಸಿ, ಶರಣ್ಯ ವಂದಿಸಿದರು. ಶೀಲಾ ಶಂಕರಿ ನಿರೂಪಿಸಿದರು. ಬಳಿಕ ಸಂಸ್ಕೃತದಲ್ಲಿ ಯಕ್ಷಗಾನ ಪ್ರದರ್ಶನ ಸಹಿತ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರಿನ ಕೊಳಚೆ ನೀರಿಂದ ತರಕಾರಿಯೂ ವಿಷ : ಸಂಸತ್ತಲ್ಲಿ ಗೌಡ
ಮತದಾರರ ಕರಡುಪಟ್ಟಿ ಪ್ರಕಟ ಗ್ರೇಟರ್‌ ಬೆಂಗಳೂರಲ್ಲಿ 89 ಲಕ್ಷ ಮತದಾರರು