ಹುಬ್ಬಳ್ಳಿ:
ನಗರದ ವಿಮಾನ ನಿಲ್ದಾಣದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ ಅವರು, ಕಾಂಗ್ರೆಸ್ ಪಕ್ಷದಲ್ಲಿ ಶಾಸಕರೇ, ಸಚಿವರೇ ಮುಖ್ಯಮಂತ್ರಿ ಅಧಿಕಾರಾವಧಿ ವಿಚಾರವಾಗಿ ಹೇಳಿಕೆ ಕೊಡುತ್ತಿದ್ದಾರೆ. ಮೇಲಾಗಿ ಸತೀಶ ಜಾರಕಿಹೊಳಿ ಸಿದ್ದರಾಮಯ್ಯ ಮೂರು ವರ್ಷ ಇರುತ್ತಾರಾ? ಐದು ವರ್ಷ ಇರುತ್ತಾರಾ? ಅದನ್ನು ಹೈಕಮಾಂಡ್ಗೆ ಕೇಳಬೇಕು ಎಂದು ಹೇಳಿಕೆ ನೀಡಿದ್ದಾರಲ್ಲವೇ ಎಂದು ಪ್ರಶ್ನಿಸಿದರು.
ರೇಸ್ನಲ್ಲಿ ಡಿಕೆಶಿ ಮೊದಲಿಗರು:ಈಗಾಗಲೇ ಹಲವು ಶಾಸಕರು ಗುಪ್ತ ಸಭೆಗಳನ್ನು ಮಾಡುತ್ತಿದ್ದಾರೆ. ಡಿಕೆಶಿ ದೇವರ ಪೂಜೆ ಮಾಡಿ ಬಳಿಕ ಸಿದ್ದರಾಮಯ್ಯ ಐದು ವರ್ಷ ಪೂರೈಸುತ್ತಾರೆ ಎಂದು ಹೇಳುತ್ತಾರೆ. ಆದರೆ, ನಿಜವಾಗಿಯೂ ಮುಖ್ಯಮಂತ್ರಿ ರೇಸ್ನಲ್ಲಿ ಡಿ.ಕೆ. ಶಿವಕುಮಾರ ಮೊದಲಿದ್ದಾರೆ ಎಂದು ಆರೋಪಿಸಿದರು.
ಮುಡಾ, ವಾಲ್ಮೀಕಿ, ಹಗರಣ ಸಂಬಂಧಿಸಿದಂತೆ ಮೈಸೂರಿನ ವರೆಗೆ ಪಾದಯಾತ್ರೆ ಮಾಡಿದ್ದೇವೆ. ಇದರ ಪರಿಣಾಮವಾಗಿ ನಮಗೆ ಮೊದಲ ಜಯ ಸಿಕ್ಕಿದೆ. ಈಗಾಗಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡುತ್ತಿದೆ. ಸಿದ್ದರಾಮಯ್ಯ ಈಗಾಗಲೇ ಭಂಡತನದಿಂದ ಮುಖ್ಯಮಂತ್ರಿ ಗಾದಿಯಲ್ಲಿ ಮುಂದುವರಿದಿದ್ದಾರೆ. ಅವರ ಈ ಭಂಡತನ ಹೆಚ್ಚು ದಿನ ನಡೆಯುವುದಿಲ್ಲ. ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡುವುದು ನಿಶ್ಚಿತ ಎಂದು ಭವಿಷ್ಯ ನುಡಿದರು.
ಜಾತಿಗಣತಿ ವಿಚಾರವಾಗಿ ಮಾತನಾಡಿ, ಸಿದ್ದರಾಮಯ್ಯ ಅವರು ನಿಜವಾಗಿಯೂ ಪ್ರಾಮಾಣಿಕರು ಆಗಿದ್ದರೆ 2018ರಲ್ಲಿ ಮುಖ್ಯಮಂತ್ರಿ ಆಗಿದ್ದಾಗಲೇ ಅನುಷ್ಠಾನ ಮಾಡಬೇಕಿತ್ತು. ಇದೀಗ ಹಗರಣಗಳ ಸರಮಾಲೆಯಲ್ಲಿ ಸಿಲುಕಿರುವ ಸರ್ಕಾರವನ್ನು ಉಳಿಸಿಕೊಳ್ಳುವುದಕ್ಕಾಗಿ ಜಾತಿಗಣತಿ ಎಂಬ ದಾಳ ಉರುಳಿಸಿದ್ದಾರೆ ಎಂದು ವಿಜಯೇಂದ್ರ ಆರೋಪಿಸಿದರು.
ನೈತಿಕತೆಯಿಲ್ಲ:
ಬದಲಾವಣೆಯಾಗಲಿದೆ:
ರಾಜ್ಯದಲ್ಲಿ ಗ್ರಾಮಮಟ್ಟದಿಂದ ಹಿಡಿದು ಸಂಪೂರ್ಣ ಆಡಳಿತ ಯಂತ್ರ ಕುಸಿದಿದೆ. ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ಬೆಂಗಳೂರಿನ ಫ್ರೀಡಂ ಪಾರ್ಕ್, ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ಕುಳಿತಿದ್ದಾರೆ. ಎಲ್ಲಿಯೂ ಅಭಿವೃದ್ಧಿ ಕಾರ್ಯಗಳು ನಡೆಯದೇ ಸಂಪೂರ್ಣವಾಗಿ ಆಡಳಿತ ಯಂತ್ರ ಕುಸಿದಿದೆ. ಮುಂದಿನ ದಿನಗಳಲ್ಲಿ ರಾಜ್ಯದ ರಾಜಕಾರಣದಲ್ಲಿ ಬದಲಾವಣೆ ಆಗಲಿದೆ ಎಂದು ಸ್ಪಷ್ಟಪಡಿಸಿದರು.