ಉಡುಪಿ: ಸ್ಪಷ್ಟ ಗುರಿ ಇದ್ದಾಗ ಮಾತ್ರ ಉತ್ತಮ ನಾಯಕನಾಗಿ ಮೂಡಿಬರಲು ಸಾಧ್ಯವಿದೆ ಎಂದು ಉಡುಪಿ ಕ್ರೈಸ್ತ ಧರ್ಮಪ್ರಾಂತ್ಯದ ಪ್ರೇಷಿತ ಆಡಳಿತಾಧಿಕಾರಿ ವಂ|ಡಾ|ಜೆರಾಲ್ಡ್ ಲೋಬೊ ಅಭಿಪ್ರಾಯಪಟ್ಟರು. ಅವರು ಇಲ್ಲಿನ ಕಕ್ಕುಂಜೆ ಅನುಗ್ರಹ ಪಾಲನಾ ಕೇಂದ್ರದಲ್ಲಿ ಧರ್ಮಪ್ರಾಂತ್ಯದ ಸುವಿಚಾರ ರಾಜಕೀಯ ಸಮಿತಿ, ಶ್ರೀಸಾಮಾನ್ಯರ ಆಯೋಗ ಹಾಗೂ ಕಥೊಲಿಕ್ ಸಭಾ ಉಡುಪಿ ಸಹಯೋಗದೊಂದಿಗೆ ಕ್ರೈಸ್ತ ಸಮುದಾಯದ ರಾಜಕೀಯ ಮುಖಂಡರು ಹಾಗೂ ಕಾರ್ಯಕರ್ತರ ಸಹಮಿಲನ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದರು.
ರಾಜಕೀಯ ಸೇವೆ ಕುರಿತು ಮುಖಂಡರಾದ ಸೀಮಾ ಮಾರ್ಗರೇಟ್ ಡಿಸೋಜಾ, ಜುಡಿತ್ ಮೆಂಡೊನ್ಸಾ ಮತ್ತು ರೋಶನಿ ಒಲಿವೇರಾ ಅನುಭವ ಹಂಚಿಕೊಂಡರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಥೊಲಿಕ್ ಸಭಾ ಉಡುಪಿ ಪ್ರದೇಶ ಅಧ್ಯಕ್ಷರಾದ ರೊನಾಲ್ಡ್ ಡಿ ಆಲ್ಮೇಡಾ ವಹಿಸಿದ್ದರು. ಮುಂದಿನ ವರ್ಷಕ್ಕೆ ಕಾರ್ಯಯೋಜನೆಯನ್ನು ಶ್ರೀ ಸಾಮಾನ್ಯ ಆಯೋಗದ ಸಂಚಾಲಕರಾದ ಡಾ. ಜೆರಾಲ್ಡ್ ಪಿಂಟೊ ಮಂಡಿಸಿದರು. ಜೊಕಿಂ ಪಿಂಟೊ ಸಂವಾದ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ವೇದಿಕೆಯಲ್ಲಿ ಕಥೊಲಿಕ್ ಸಭಾ ಉಡುಪಿ ಪ್ರದೇಶ ಆಧ್ಯಾತ್ಮಿಕ ನಿರ್ದೇಶಕರಾ
ದ ಫರ್ಡಿನಾಂಡ್ ಗೊನ್ಸಾಲ್ವಿಸ್, ನಿಯೋಜಿತ ಅಧ್ಯಕ್ಷರಾದ ಲೂಯಿಸ್ ಡಿಸೋಜಾ, ಸುವಿಚಾರ ಚಿಂತನ ಮಂಥನ ಸಮಿತಿಯ ಉಪಾಧ್ಯಕ್ಷರಾದ ಮೇರಿ ಡಿಸೋಜಾ, ಪ್ರಧಾನ ಕಾರ್ಯದರ್ಶಿ ಮೈಕಲ್ ರೊಡ್ರಿಗಸ್ ಹಾಗೂ ಮೇಬಲ್ ಡಿಸೋಜಾ ಉಪಸ್ಥಿತರಿದ್ದರು. ರಾಜಕೀಯ ಸಮಿತಿ ಸಂಚಾಲಕರಾದ ವಿನೋದ್ ಕ್ರಾಸ್ಟೊ ಸ್ವಾಗತಿಸಿ, ಜೆರಾಲ್ಡ್ ಪಿಂಟೊ ವಂದಿಸಿದರು. ಶಾಂತಿ ಪಿರೇರಾ ಕಾರ್ಯಕ್ರಮ ನಿರೂಪಿಸಿದರು.