ಕನ್ನಡಪ್ರಭ ವಾರ್ತೆ ಬಳ್ಳಾರಿ
ಮಹಾನಗರ ಪಾಲಿಕೆಯಿಂದ ನೀಡಲಾಗುವ ಬಿ-ಖಾತಾ ಕುರಿತಂತೆ ಪಾಲಿಕೆಯ ಸಭಾಂಗಣದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಸಾರ್ವಜನಿಕರಿಗೆ ಮಾಹಿತಿ ನೀಡಿದರು.
ಸಿಎಂ ಸಿದ್ದರಾಮಯ್ಯ ಅವರು, ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಬಿ-ಖಾತಾ ನೀಡುವ ಅಭಿಯಾನಕ್ಕೆ ಮಂಗಳವಾರ ಚಾಲನೆ ನೀಡಿದ್ದು, ಈ ಅಭಿಯಾನವನ್ನು ಮುಂದಿನ ಮೂರು ತಿಂಗಳೊಳಗಾಗಿ ಪೂರ್ಣಗೊಳಿಸುವಂತೆ ಸೂಚಿಸಿದ್ದಾರೆ.ಮನಪಾ ವ್ಯಾಪ್ತಿಯಲ್ಲಿನ ಅನಧೀಕೃತ ಸ್ವತ್ತುಗಳಿಗೆ ಸಹ ಖಾತಾ ನೀಡುವ ಸಂಬಂಧ ಕಾಯ್ದೆ ಮತ್ತು ನಿಯಮಗಳಿಗೆ ತಿದ್ದುಪಡಿ ಮಾಡಲಾಗಿದೆ. ಇದರಿಂದ ಅನಧಿಕೃತ ಸ್ವತ್ತುಗಳ ಮಾಲೀಕರು ತಮ್ಮ ಆಸ್ತಿಯ ಕಂದಾಯ ಪಾವತಿಸಿ, ಬಿ-ಖಾತಾ ಪಡೆಯಬಹುದಾಗಿದೆ. ಇದರಿಂದ ಬಹು ದಿನಗಳಿಂದ ಅನಧಿಕೃತ ಆಸ್ತಿಗಳ ಖಾತಾ ಸಮಸ್ಯೆಗೆ ಪರಿಹಾರ ಕಲ್ಪಿಸಿದಂತಾಗುತ್ತದೆ ಎಂದು ಹೇಳಿದರು.
ಆಸ್ತಿಯ ಮಾಲೀಕರು, ಮಹಾನಗರ ಪಾಲಿಕೆ ಕಚೇರಿಗೆ ಭೇಟಿ ನೀಡಿ, ಅಗತ್ಯ ದಾಖಲೆ ಸಲ್ಲಿಸಿ, 7 ದಿನಗಳ ಒಳಗಾಗಿ ಬಿ-ಖಾತಾ ಪಡೆಯಬಹುದು ಹಾಗೂ ಜನರ ಅನುಕೂಲಕ್ಕಾಗಿ ಪಾಲಿಕೆ ವ್ಯಾಪ್ತಿಯ ವಾರ್ಡ್ ವಾರು ಸ್ವಯಂ-ಸೇವಕರನ್ನು ನೇಮಿಸಲಾಗುವುದು, ಅವರು ಮನೆ-ಮನೆಗೆ ಭೇಟಿ ನೀಡಿ ಪೂರಕ ದಾಖಲೆ ಸಂಗ್ರಹಿಸಿ ನೋಂದಣಿಗೆ ಕ್ರಮವಹಿಸುತ್ತಾರೆ. ಬಳಿಕ ಮನೆಗೆ ಬಿ-ಖಾತಾ ತಲುಪಿಸಲಾಗುವುದು. ಸಾರ್ವಜನಿಕರು ಯಾವುದೇ ಮಧ್ಯವರ್ತಿಗಳ ಮೊರೆ ಹೋಗಬಾರದು. ಈ ಸಂಬಂಧ ಸಹಾಯವಾಣಿ ಸಂಖ್ಯೆ ಆರಂಭಿಸಲಾಗುವುದು ಎಂದು ಭರತ್ ರೆಡ್ಡಿ ತಿಳಿಸಿದರು.
ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದ್ದು, ನಗರದ ವಾರ್ಡ್ ನಂ.1, 15ರಿಂದ 24 ಹಾಗೂ 36, 37 ರ ನಿವಾಸಿಗಳು ಪಾಲಿಕೆ ವಲಯ ಕಚೇರಿ-1ರ ಆಯುಕ್ತ ಗುರುರಾಜ್ ಸೌದಿ(ಮೊ.9482950502), ವಾರ್ಡ್ ನಂ.2 ರಿಂದ 14 ರ ನಿವಾಸಿಗಳು ವಲಯ ಕಚೇರಿ-2ರ ಆಯುಕ್ತ ಫಣಿರಾಜ್(ಮೊ.9483833135) ಮತ್ತು ವಾರ್ಡ್ ನಂ.25 ರಿಂದ 35 ಹಾಗೂ 38, 39 ರ ನಿವಾಸಿಗಳು ವಲಯ ಕಚೇರಿ-3ರ ಆಯುಕ್ತ ಮಲ್ಲಿಕಾರ್ಜುನ್ (ಮೊ.9448493344), ವಲಯ ಕಚೇರಿ-1ರ ಕಂದಾಯ ನೀರಿಕ್ಷಕ ವೀರೇಶಯ್ಯ ದೂ. 08392-294708, ಮೊ. 7019141268 (ವಾರ್ಡ್ ನಂ.1, 15ರಿಂದ 24 ಹಾಗೂ 36, 37). ವಲಯ ಕಚೇರಿ-2ರ ಸಹಾಯಕ ಕಂದಾಯ ಅಧಿಕಾರಿ ಅಬ್ದುಲ್ ಖಾದರ್ ಎಸ್.ಕೆ. ದೂ.08392-294745, ಮೊ. 9845469264 (ವಾರ್ಡ್ ನಂ.2ರಿಂದ 14). ವಲಯ ಕಚೇರಿ-3ರ ಕಂದಾಯ ನಿರೀಕ್ಷಕ ಕೆ.ವೆಂಕಟೇಶ್ ದೂ.08392-294753, ಮೊ.9986174981 (ವಾರ್ಡ್ ನಂ.25 ರಿಂದ 35 ಹಾಗೂ 38, 39) ಗೆ ಸಂಪರ್ಕಿಸಬಹುದು ಎಂದು ತಿಳಿಸಿದರು.