ಕನ್ನಡಪ್ರಭ ವಾರ್ತೆ ಮಲ್ಪೆ
ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಕಥೊಲಿಕ್ ಸಭಾ ಉಡುಪಿ ಪ್ರದೇಶ ಇದರ ಅಧ್ಯಕ್ಷ ರೊನಾಲ್ಡ್ ಡಿ ಆಲ್ಮೇಡಾ ಮಾತನಾಡಿ, ಸಮುದಾಯದಲ್ಲಿ ಸಂಘಟನಾತ್ಮಕವಾಗಿ ಒಗ್ಗಟ್ಟಿನಿಂದ ಸೇವಾ ಕಾರ್ಯದಲ್ಲಿ ತೊಡಗಿಕೊಂಡಾಗ ಉತ್ತಮ ಫಲಿತಾಂಶ ಸಾಧ್ಯವಿದೆ. ನಾವು ನೀಡುವ ಸೇವೆ ಸಮುದಾಯದ ಒಳಿತಿಗೆ ಕಾರಣವಾಗುವಂತಿರಬೇಕು ಈ ನಿಟ್ಟಿನಲ್ಲಿ ಪ್ರಯತ್ನ ಮುಂದುವರಿಸಬೇಕು ಎಂದರು.
ಪ್ರತಿಭಾಂಗಣ್ ಸಾಂಸ್ಕೃತಿಕ ಸಂಘಟನೆಯ ಉದ್ಘಾಟನೆಯನ್ನು ಚರ್ಚಿನ ಪ್ರಧಾನ ಧರ್ಮಗುರು ವಂ.ಡೆನಿಸ್ ಡೆಸಾ ನೆರವೇರಿಸಿ, ನಾವು ಮನುಷ್ಯರಾಗಬೇಕೆ ಹೊರತು ಯಂತ್ರಗಳಾಗಬಾರದು. ಮನುಷ್ಯನ ಬದುಕಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ಅತೀ ಅಗತ್ಯವಾಗಿ ಬೇಕು. ಸಾಂಸ್ಕೃತಿಕ ಕಾರ್ಯಕ್ರಮಗಳಿಂದ ಮನಸ್ಸಿಗೆ ನೆಮ್ಮದಿ ಸಾಧ್ಯವಿದೆ ಎಂದರು.ಸಭಾ ಕಾರ್ಯಕ್ರಮದಲ್ಲಿ ಕಥೊಲಿಕ್ ಸಭಾ ಸಂಘಟನೆಯ ವತಿಯಿಂದ ಆಧ್ಯಾತ್ಮಿಕ ನಿರ್ದೇಶಕರಾಗಿರುವ ವಂ.ಡೆನಿಸ್ ಡೆಸಾ ಅವರನ್ನು ಸರ್ವ ಸದಸ್ಯರು ಸೇರಿಕೊಂಡು ಸನ್ಮಾನಿಸಿದರು.
ವಂ.ಡೆನಿಸ್ ಡೆಸಾ ಅವರಿಂದ ತಾಯಿಯ ಪ್ರೀತಿ ಮತ್ತು ಮಮತೆ ಸಾರುವ ಕೊಂಕಣಿ ಗೀತೆ ನೆರೆದಿದ್ದ ಪ್ರೇಕ್ಷಕರ ಗಮನ ಸೆಳೆಯಿತು.
ಕಾರ್ಯಕ್ರಮದಲ್ಲಿ ಚರ್ಚಿನ ಪಾಲನಾ ಮಂಡಳಿಯ ಉಪಾಧ್ಯಕ್ಷ ಸುನೀಲ್ ಫರ್ನಾಂಡಿಸ್, ಸ್ಥಳೀಯ ಕಾನ್ವೆಂಟಿನ ಮುಖ್ಯಸ್ಥ ಸಿಸ್ಟರ್ ಸುಶ್ಮಾ, ಪ್ರತಿಭಾಂಗಣ್ ಸಂಘಟನೆಯ ಅಧ್ಯಕ್ಷರಾದ ಕ್ಲಾರೆನ್ಸ್ ಫರ್ನಾಂಡಿಸ್ ಇದ್ದರು.ಕೆಥೊಲಿಕ್ ಸಭಾ ತೊಟ್ಟಂ ಘಟಕದ ಅಧ್ಯಕ್ಷ ವೀನಾ ಫರ್ನಾಂಡಿಸ್ ಸ್ವಾಗತಿಸಿದರು. ಕಾರ್ಯದರ್ಶಿ ಶಾಂತಿ ಪಿಕಾರ್ಡೊ ವಂದಿಸಿದರು. ಲವೀನಾ ಫರ್ನಾಂಡಿಸ್ ಸಭಾ ಕಾರ್ಯಕ್ರಮ ಹಾಗೂ ನಾನು ಮರೋಲ್ ತೊಟ್ಟಂ ಸಾಂಸ್ಕೃತಿಕ ಕಾರ್ಯಕ್ರಮ ನಿರೂಪಿಸಿದರು.