ಡಿಕೆ ಸಿಎಂ ಆಗಲೆಂದು 1001ಈಡುಗಾಯಿ, ತುಲಾಭಾರ

KannadaprabhaNewsNetwork |  
Published : Nov 23, 2025, 02:30 AM IST
ತುಲಾಭಾರ | Kannada Prabha

ಸಾರಾಂಶ

ರಾಜ್ಯ ಕಾಂಗ್ರೆಸ್‌ ಸರ್ಕಾರದಲ್ಲಿ ಅಧಿಕಾರ ಹಂಚಿಕೆ ಜಟಾಪಟಿ ನಡೆದಿದ್ದು, ಈ ಮಧ್ಯೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಮುಖ್ಯಮಂತ್ರಿ ಸ್ಥಾನ ಲಭಿಸಲಿ ಎಂದು ಪ್ರಾರ್ಥಿಸಿ ಬಾಗಲಕೋಟೆ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಅವರ ಅಭಿಮಾನಿಗಳು ದೇವರ ಮೊರೆ ಹೋಗಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಜಮಖಂಡಿ / ಪಾವಗಡ

ರಾಜ್ಯ ಕಾಂಗ್ರೆಸ್‌ ಸರ್ಕಾರದಲ್ಲಿ ಅಧಿಕಾರ ಹಂಚಿಕೆ ಜಟಾಪಟಿ ನಡೆದಿದ್ದು, ಈ ಮಧ್ಯೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಮುಖ್ಯಮಂತ್ರಿ ಸ್ಥಾನ ಲಭಿಸಲಿ ಎಂದು ಪ್ರಾರ್ಥಿಸಿ ಬಾಗಲಕೋಟೆ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಅವರ ಅಭಿಮಾನಿಗಳು ದೇವರ ಮೊರೆ ಹೋಗಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಬಾಗಲಕೋಟೆ ಜಿಲ್ಲೆ ಜಮಖಂಡಿ ನಗರದ ಕಾಂಗ್ರೆಸ್ ಯುವ ಘಟಕದ ವತಿಯಿಂದ ಕಲ್ಲೋಳ್ಳಿ ಗ್ರಾಮದ ವೆಂಕಟರಮಣ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಾಗಿದ್ದು, ಡಿ.ಕೆ.ಶಿವಕುಮಾರ್‌ ಅವರು ಶೀಘ್ರ ಸಿಎಂ ಆಗಲಿ ಎಂದು ಪ್ರಾರ್ಥಿಸಿದ್ದಾರೆ. ಬಾಗಲಕೋಟೆ ಜಿಲ್ಲಾ ಕಾಂಗ್ರೆಸ್‌ ಯುವ ಘಟಕದ ಅಧ್ಯಕ್ಷ ಕುಮಾರ್ ದಾನಕ್ಕನವರ್ ನೇತೃತ್ವದಲ್ಲಿ ವೆಂಕಟರಮಣ ದೇವರ ಮುಂದೆ ಡಿಕೆಶಿ ಫೋಟೋ ಇಟ್ಟು ಅಭಿಷೇಕ ಮಾಡಿಸಿದ ಕಾಂಗ್ರೆಸ್‌ ಕಾರ್ಯಕರ್ತರು, ದೇವಸ್ಥಾನದ ಮುಂಭಾಗದಲ್ಲಿ 1001 ಈಡುಗಾಯಿ ಒಡೆದಿದ್ದಾರೆ.

ಇನ್ನೂ ತುಮಕೂರು ಜಿಲ್ಲೆ ಪಾವಗಡ ಶನಿಮಹಾತ್ಮ ದೇವಸ್ಥಾನದಲ್ಲಿ ಡಿ.ಕೆ.ಶಿವಕುಮಾರ್ ಅಭಿಮಾನಿಗಳು ತಮ್ಮ ನಾಯಕ ಮುಖ್ಯಮಂತ್ರಿಯಾಗಲಿ ಎಂದು ಪೂಜೆ ಸಲ್ಲಿಸಿದ್ದಾರೆ. ಡಿಕೆಶಿ ಅವರಿಗೆ ಇರುವ ಶನಿ ಹಾಗೂ ಕುಜ ದೋಷ ನಿವಾರಣೆಯಾಗಲಿ ಎಂದು ಅವರ ಅಭಿಮಾನಿಗಳು 91 ಕೆ.ಜಿ. ಎಳ್ಳಿನ ತುಲಾಭಾರ ಮಾಡಿದ್ದಾರೆ. ಶಿವಕುಮಾರ್‌ ಅವರಿಗಿರುವ ದೋಷ ದೂರವಾಗಲಿ ಜೊತೆಗೆ ಅವರಿಗೆ ಮುಖ್ಯಮಂತ್ರಿ ಪಟ್ಟ ದೊರೆಯಲಿ ಎಂದು ಶನಿಮಹಾತ್ಮ ದೇವಸ್ಥಾನದ ನವಗ್ರಹಗಳಿಗೆ ವಿಶೇಷ ತೈಲಾಭಿಷೇಕವನ್ನೂ ಅವರ ಅಭಿಮಾನಿಗಳು ನೆರವೇರಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಎಸ್‌ಐಆರ್‌ನಿಂದ ಅರ್ಹರಿಗೆ ಅನ್ಯಾಯ ಆಗಬಾರ್ದು: ಸಿಎಂ
ದಾವೋಸ್‌ ಶೃಂಗಕ್ಕೆ ಡಿಸಿಎಂ ಡಿಕೆಶಿ ಇಂದು ಪ್ರಯಾಣ - ಎಲ್ಲರ ಸಲಹೆ ಮೇರೆಗೆ ಭೇಟಿ