ನೆಲಮಂಗಲ: ಅವಾಚ್ಯ ಶಬ್ಧಗಳಿಂದ ನಿಂದಿಸಿ ಧಮ್ಕಿ ಹಾಕಿರುವ ಬಿಜೆಪಿ ತಾಲೂಕು ಅಧ್ಯಕ್ಷ ಜಗದೀಶ್ ಚೌಧರಿಯನ್ನು ಗಡಿಪಾರು ಮಾಡುವಂತೆ ಆಗ್ರಹಿಸಿ ತಾಲೂಕು ಸ್ವಾಭಿಮಾನಿ ಪತ್ರಕರ್ತರು ಪ್ರೆಸ್ ಕ್ಲಬ್ ಕೌನ್ಸಿಲ್ ನೇತೃತ್ವದಲ್ಲಿ ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಪ್ರೆಸ್ ಕ್ಲಬ್ ಕೌನ್ಸಿಲ್ ರಾಜ್ಯಾಧ್ಯಕ್ಷ ರಾಘವೇಂದ್ರ ಆಚಾರ್, ಪ್ರಧಾನ ಕಾರ್ಯದರ್ಶಿ ಆಶಾಸೀನಪ್ಪ, ರಾಜ್ಯ ಕಾರ್ಯದರ್ಶಿ ಕೊಟ್ರೇಶ್, ಜಿಲ್ಲಾಧ್ಯಕ್ಷ ಮಂಜುನಾಥ್, ತುಮಕೂರು ಜಿಲ್ಲಾ ಗೌರವಾಧ್ಯಕ್ಷ ಸುಧೀಂದ್ರ, ಬೆಂಗಳೂರು ನಗರ ಅಧ್ಯಕ್ಷ ಭಾನುಪ್ರಕಾಶ್, ತಾಲೂಕು ಅಧ್ಯಕ್ಷ ಗಂಗಾಧರ್, ಪ್ರಧಾನ ಕಾರ್ಯದರ್ಶಿ ವಿಜಯ್ ಹೊಸಪಾಳ್ಯ, ಕರ್ನಾಟಕ ಕಾರ್ಯನಿರತ ಪತ್ರಕರ್ತ ಸಂಘದ ಅಧ್ಯಕ್ಷ ಬೂದಿಹಾಳ್ ಕಿಟ್ಟಿ, ಉಪಾಧ್ಯಕ್ಷ ರುದ್ರೇಶ್ ಹೊನ್ನೇನಹಳ್ಳಿ, ಕಾರ್ಯನಿರತ ಪತ್ರಕರ್ತರ ಸಂಘದ ಪ್ರದೀಪ್ ಕುಮಾರ್, ರಾಜಶೇಖರ್, ಮಿಲ್ಟ್ರಿ ಮಾಮ, ಹರೀಶ್, ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಮರಳಕುಂಟೆ ಶ್ರೀನಿವಾಸ್, ಸಂಘಟನಾ ಕಾರ್ಯದರ್ಶಿ ವೇಣು, ವಂದನಾ, ವರ್ಷ, ಕವಿತಾ, ಉಮೇಶ್ ಪೂಜಾರ್, ಅರುಣ್ ಕುಮಾರ್ ಇತರರು ಉಪಸ್ಥಿತರಿದ್ದರು.
ಪೋಟೋ 6 :ನೆಲಮಂಗಲ ತಾಲೂಕು ಕಚೇರಿ ಎದುರು ಪತ್ರಕರ್ತರಿಗೆ ಧಮ್ಕಿ ಹಾಕಿರುವ ಬಿಜೆಪಿ ತಾಲೂಕು ಅಧ್ಯಕ್ಷ ಜಗದೀಶ್ ಚೌಧರಿಯನ್ನು ಗಡಿಪಾರು ಮಾಡುವಂತೆ ಆಗ್ರಹಿಸಿ ಸ್ವಾಭಿಮಾನಿ ಪತ್ರಕರ್ತರು ಪ್ರೆಸ್ ಕ್ಲಬ್ ಕೌನ್ಸಿಲ್ ನೇತೃತ್ವದಲ್ಲಿ ತಹಸೀಲ್ದಾರ್ ಅಮೃತ್ ಅತ್ರೇಶ್ಗೆ ಮನವಿ ಸಲ್ಲಿಸಿದರು.