ಲಾರಿ ಹರಿದು ಮೂರುವರೆ ವರ್ಷದ ಬಾಲಕ ಸಾವು

KannadaprabhaNewsNetwork |  
Published : Jun 04, 2025, 12:49 AM IST

ಸಾರಾಂಶ

ರಸ್ತೆ ದಾಟುವಾಗ ಲಾರಿ ಡಿಕ್ಕಿಯಾಗಿ ಮೂರುವರೆ ವರ್ಷದ ಬಾಲಕ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಸೊರಬ ತಾಲೂಕಿನ ಕೆರೆಕೊಪ್ಪ ಗ್ರಾಮದಲ್ಲಿ ನಡೆದಿದೆ.

ಶಿವಮೊಗ್ಗ: ರಸ್ತೆ ದಾಟುವಾಗ ಲಾರಿ ಡಿಕ್ಕಿಯಾಗಿ ಮೂರುವರೆ ವರ್ಷದ ಬಾಲಕ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಸೊರಬ ತಾಲೂಕಿನ ಕೆರೆಕೊಪ್ಪ ಗ್ರಾಮದಲ್ಲಿ ನಡೆದಿದೆ. ಶಿರಸಿಯ ಅತಾವುಲ್ಲಾಖಾನ್ ಹಾಗೂ ಫರೀನಾ ಬೇಗಂ ಅವರ ಪುತ್ರ ಮೂರುವರೆ ವರ್ಷದ ಮುಹಮ್ಮದ್ ಆಹಿಲ್ ಖಾನ್ ಮೃತ ಬಾಲಕ. ಕೆರೆಕೊಪ್ಪದಲ್ಲಿರುವ ತವರು ಮನೆಗೆ ಹೆರಿಗೆಗೆ ಬಂದ ತಾಯಿ ಜತೆಗೆ ಪುತ್ರ ಮುಹಮ್ಮದ್ ಆಹಿಲ್ ಖಾನ್ ಇದ್ದನು. ಶಾಲೆ ಆರಂಭವಾಗಿದ್ದರಿಂದ ಮಗು ಅಂಗನವಾಡಿಗೆ ಹೋಗುತ್ತಿದ್ದು, ಮನೆಗೆ ಕರೆದುಕೊಂಡು ಹೋಗಲು ಬಂದ ಅಜ್ಜಿಯನ್ನು ಕಂಡು ರಸ್ತೆ ದಾಟುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''