ನಿವೃತ್ತ ಎಸಿಪಿ ಮೇಲೆ ಹಲ್ಲೆ ಮಾಡಿಚಿನ್ನಾಭರಣ ದೋಚಿದ್ದ ಮೂವರ ಸೆರೆ

KannadaprabhaNewsNetwork |  
Published : Sep 13, 2025, 02:04 AM IST
Mosin - Mohamed - Irfan | Kannada Prabha

ಸಾರಾಂಶ

ಇತ್ತೀಚೆಗೆ ವಾಯು ವಿಹಾರ ಮುಗಿಸಿ ಮನೆಗೆ ಮರಳುತ್ತಿದ್ದ ನಿವೃತ್ತ ಎಸಿಪಿಯೊಬ್ಬರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ ಚಿನ್ನಾಭರಣ ದೋಚಿದ್ದ ಮೂವರು ಕಿಡಿಗೇಡಿಗಳನ್ನು ಸಂಜಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ಇತ್ತೀಚೆಗೆ ವಾಯು ವಿಹಾರ ಮುಗಿಸಿ ಮನೆಗೆ ಮರಳುತ್ತಿದ್ದ ನಿವೃತ್ತ ಎಸಿಪಿಯೊಬ್ಬರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ ಚಿನ್ನಾಭರಣ ದೋಚಿದ್ದ ಮೂವರು ಕಿಡಿಗೇಡಿಗಳನ್ನು ಸಂಜಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಡಿ.ಜೆ.ಹಳ್ಳಿ ನಿವಾಸಿಗಳಾದ ಸೈಯದ್‌ ಮೊಹ್ಸಿನ್‌, ಮೊಹಮ್ಮದ್ ಸಲ್ಮಾನ್ ಹಾಗೂ ಸೈಯದ್ ಇರ್ಫಾನ್ ಬಂಧಿತರಾಗಿದ್ದು, ಆರೋಪಿಗಳಿಂದ ಚಿನ್ನಾಭರಣ ಹಾಗೂ ಬೈಕ್ ಜಪ್ತಿ ಮಾಡಲಾಗಿದೆ.

ಕೆಲ ದಿನಗಳ ಹಿಂದೆ ಹೆಬ್ಬಾಳದ ಪಶು ವೈದ್ಯಕೀಯ ಮಹಾವಿದ್ಯಾಲಯದ ಆವರಣದಲ್ಲಿ ವಾಯು ವಿಹಾರ ಮುಗಿಸಿ ಮರಳುತ್ತಿದ್ದ ನಿವೃತ್ತ ಎಸಿಪಿ ಎಚ್‌.ಸುಬ್ಬಣ್ಣ ಮೇಲೆ ಹಲ್ಲೆ ನಡೆಸಿ 8 ಲಕ್ಷ ರು. ಮೌಲ್ಯದ ಚಿನ್ನಾಭರಣವನ್ನು ದುಷ್ಕರ್ಮಿಗಳು ದೋಚಿದ್ದರು. ಈ ಬಗ್ಗೆ ತನಿಖೆಗಿಳಿದ ಪೊಲೀಸರು, ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಗಳನ್ನು ಪತ್ತೆ ಹಚ್ಚಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಗರದಲ್ಲಿ ಇನ್ಸ್‌ಪೆಕ್ಟರ್ ಹಾಗೂ ಎಸಿಪಿಯಾಗಿ ಸುಬ್ಬಣ್ಣ ನಿವೃತ್ತರಾಗಿದ್ದು, ಸಂಜಯನಗರ ಸಮೀಪ ಅವರು ನೆಲೆಸಿದ್ದಾರೆ. ಪ್ರತಿ ದಿನ ಬೆಳಗ್ಗೆ ಹೆಬ್ಬಾಳ ಪಶು ವೈದ್ಯಕೀಯ ಮಹಾವಿದ್ಯಾಲಯದ ಆ‍ವರಣದಲ್ಲಿ ಸುಬ್ಬಣ್ಣ ವಾಯು ವಿಹಾರ ಮಾಡುತ್ತಿದ್ದರು. ಅಂತೆಯೇ ಇತ್ತೀಚೆಗೆ ವಾಯು ವಿಹಾರ ಮುಗಿಸಿ ಅವರು ಮನೆಗೆ ಮರಳುವಾಗ ಈ ಕೃತ್ಯ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮೈಸೂರು ಹೀಲಿಯಂ ಸಿಲಿಂಡರ್‌ ಸ್ಫೋಟ : ಎನ್‌ಐಎ ಭೇಟಿ
ಹಸೆಮಣೆ ಏರಬೇಕಿದ್ದ ಬಾಲ್ಯದ ಗೆಳತಿಯರು ಬೆಂಕಿಯಲ್ಲಿ ಭಸ್ಮ!