ಕನ್ನಡಪ್ರಭ ವಾರ್ತೆ ಬೆಂಗಳೂರು
ಪಶ್ಚಿಮ ಬಂಗಾಳ ಮೂಲದ ಮೊಹಮ್ಮದ್ ರಭಿ (22), ಈತನ ಸಹೋದರ ಮೊಹಮ್ಮದ್ ಯೂನಸ್ (20) ಹಾಗೂ ಮೊಹಮ್ಮದ್ ಬಾಬು (20) ಬಂಧಿತರು.
ಆರೋಪಿಗಳು ಜು.29ರ ರಾತ್ರಿ ಕಾಡುಗೋಡಿ ವ್ಯಾಪ್ತಿಯ ಖಾಜಿಸೊನ್ನೇನಹಳ್ಳಿ ಗ್ರಾಮದ ಮುನೇಶ್ವರಸ್ವಾಮಿ ದೇವಸ್ಥಾನದ ಬಾಗಿಲು ಮುರಿದು ದೇವರ ವಿಗ್ರಹಗಳು, ಹುಂಡಿ ಹಣ ಹಾಗೂ ಗಂಟೆಗಳನ್ನು ಕಳವು ಮಾಡಿದ್ದರು. ಈ ಸಂಬಂಧ ದೇವಸ್ಥಾನದ ಅಚರ್ಕರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿ ಕಾರ್ಯಾಚರಣೆ ಕೈಗೊಂಡು ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಅಧಿಕಾರಿಗಳು ತಿಳಿಸಿದ್ದಾರೆ.ಜನ ಸಂಚಾರ ಕಡಿಮೆ ಇರುವ ಪ್ರದೇಶ ಟಾರ್ಗೆಟ್:
ಆರೋಪಿಗಳು ವಿಚಾರಣೆ ವೇಳೆ ನೀಡಿದ ಮಾಹಿತಿ ಮೇರೆಗೆ ಗುಜರಿ ವ್ಯಾಪಾರಿಯಿಂದ 12 ದೇವರ ವಿಗ್ರಹಗಳು, ಪೂಜಾ ಸಾಮಾಗ್ರಿ ಹಾಗೂ ದಿಣ್ಣೂರು ಪ್ಲಾಂಟೇಷನ್ ಪಕ್ಕದ ಖಾಲಿ ಜಾಗದಲ್ಲಿ ನಿಲುಗಡೆ ಮಾಡಿದ್ದ ಆಟೋ ರಿಕ್ಷಾವನ್ನು ಜಪ್ತಿ ಮಾಡಲಾಗಿದೆ. ಸದ್ಯ ಮೂವರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವಿಗ್ರಹಗಳ ಮಾರಾಟ
ಆರೋಪಿಗಳು ತಾವು ಕದ್ದ ದೇವರ ವಿಗ್ರಹಗಳನ್ನು ಈರಂಡಹಳ್ಳಿಯ ಗುಜರಿ ವ್ಯಾಪಾರಿಯೊಬ್ಬನಿಗೆ ಮಾರಾಟ ಮಾಡುತ್ತಿದ್ದರು. ಇದರಿಂದ ಬಂದ ಹಣವನ್ನು ಹಂಚಿಕೊಂಡು ಮೋಜು-ಮಸ್ತಿ ಮಾಡುತ್ತಿದ್ದರು. ಆರೋಪಿಗಳ ಬಂಧನದಿಂದ ಆವಲಹಳ್ಳಿ ಠಾಣಾ ವ್ಯಾಪ್ತಿಯ ಆಟೋ ಕಳವು, ಹೊಸಕೋಟೆ ಠಾಣೆಯ ವ್ಯಾಪ್ತಿಯ ದೇವಸ್ಥಾನ ಕಳವು, ಕಾಡುಗೋಡಿ ಠಾಣೆ ವ್ಯಾಪ್ತಿಯ ಎರಡು ದೇವಸ್ಥಾನಗಳ ಕಳವು ಪ್ರಕರಣಗಳು ಸೇರಿದಂತೆ ಒಟ್ಟು 4 ಕಳವು ಪ್ರಕರಣಗಳು ಬೆಳಕಿಗೆ ಬಂದಿದೆ.