ಮೂವರು ಮನೆಗಳ್ಳರ ಸೆರೆ: ಚಿನ್ನಾ, ಬೆಳ್ಳಿ ವಶ

KannadaprabhaNewsNetwork |  
Published : Oct 06, 2025, 01:00 AM IST
ಪೋಟೊ೫ಸಿಪಿಟಿ೧: ಆರೋಪಿಗಳಿಂದ ವಶಪಡಿಸಿಕೊಂಡ ಚಿನ್ನಾಭರಣಗಳ ಜೊತೆ ಗ್ರಾಮಾಂತರ ಪೊಲೀಸರು. | Kannada Prabha

ಸಾರಾಂಶ

ಚನ್ನಪಟ್ಟಣ: ಮನೆಗಳವು ಮಾಡಿ ತಲೆ ಮರೆಸಿಕೊಂಡಿದ್ದ ಮೂವರು ಆರೋಪಿಗಳನ್ನು ಗ್ರಾಮಾಂತರ ಪೊಲೀಸರು ಬಂಧಿಸಿ ೫.೫೦ ಲಕ್ಷ ರು.ಮೌಲ್ಯದ ಚಿನ್ನಾಭರಣ ಹಾಗೂ ಬೆಳ್ಳಿ ಸಾಮಗ್ರಿಗಳನ್ನು ವಶಪಡಿಸಿಕೊಂಡಿದ್ದಾರೆ.

ಚನ್ನಪಟ್ಟಣ: ಮನೆಗಳವು ಮಾಡಿ ತಲೆ ಮರೆಸಿಕೊಂಡಿದ್ದ ಮೂವರು ಆರೋಪಿಗಳನ್ನು ಗ್ರಾಮಾಂತರ ಪೊಲೀಸರು ಬಂಧಿಸಿ ೫.೫೦ ಲಕ್ಷ ರು.ಮೌಲ್ಯದ ಚಿನ್ನಾಭರಣ ಹಾಗೂ ಬೆಳ್ಳಿ ಸಾಮಗ್ರಿಗಳನ್ನು ವಶಪಡಿಸಿಕೊಂಡಿದ್ದಾರೆ. ಸೆ.೨೮ರಂದು ಗ್ರಾಮಾಂತರ ಠಾಣಾ ಸರಹದ್ದಿನ ಸಾಯಿ ಬಡಾವಣೆಯಲ್ಲಿನ ಮನೆ ಮಾಲೀಕರು ಪಿತೃಪಕ್ಷಕ್ಕೆಂದು ಗ್ರಾಮಕ್ಕೆ ತೆರಳಿದ್ದ ವೇಳೆ ಮನೆಯಲ್ಲಿ ಯಾರು ಇಲ್ಲವೆಂದು ತಿಳಿದ ಗುಜರಾತ್ ಮೂಲದ ಸಂಗಡ ಮುಜುಬಾಯ್, ಮೇಡ ನನ್ನೂಬಾಯ್ ಹಾಗೂ ಕೀಮಾ ಬಾಯ್ ಮೂವರು ಕಳವು ಮಾಡಿದ್ದರು. ಈ ಬಗ್ಗೆ ಮನೆ ಮಾಲೀಕರು ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದು, ತನಿಖೆ ಕೈಗೊಂಡ ಪೊಲೀಸರು ಪ್ರಕರಣದ ಜಾಡು ಹಿಡಿದು ಆರೋಪಿಗಳನ್ನು ಬಂಧಿಸಿದ್ದಾರೆ. ಪ್ರಕರಣವನ್ನು ಭೇದಿಸಿರುವ ಗ್ರಾಮಾಂತರ ವೃತ್ತ ನಿರೀಕ್ಷಕ ಪ್ರಕಾಶ್, ಆರಕ್ಷಕ ಉಪ ನಿರೀಕ್ಷಕ ಮನೋಹರ್ ಹಾಗೂ ಸಿಬ್ಬಂದಿಗಳನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸ್‌ಗೌಡ ಅಭಿನಂದಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹೈಕೋರ್ಟ್‌ ಹೊಸ ಕಟ್ಟಡಕ್ಕೆ 30 ಎಕ್ರೆಕೋರಿಕೆ:ರಾಜ್ಯ ಸರ್ಕಾರಕ್ಕೆ ನೋಟಿಸ್‌
ಬಿಎಂಐಸಿ ಮರುಪರಿಶೀಲಿಸಿ: ರಾಜ್ಯಕ್ಕೆ ಕೋರ್ಟ್‌ ಸೂಚನೆ