ಮುನಿರಾಬಾದ್‌ ಬಳಿ ಟ್ರ್ಯಾಕ್ಟರ್‌-ಬಸ್‌ ಡಿಕ್ಕಿ, ಮೂವರ ಸಾವು

KannadaprabhaNewsNetwork |  
Published : May 18, 2024, 12:30 AM IST
ಮುನಿರಾಬಾದ್‌ನಲ್ಲಿ ಅಪಘಾತ | Kannada Prabha

ಸಾರಾಂಶ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್‌ನಲ್ಲಿ ಮರಳುತ್ತಿದ್ದ ಮೂವರು ಅಪಘಾತದಲ್ಲಿ ಮೃತಪಟ್ಟಿದ್ದಾರೆ. ದರ್ಶನ ಮುಗಿಸಿಕೊಂಡು ತಮ್ಮ ಗ್ರಾಮಕ್ಕೆ ಟ್ರ್ಯಾಕ್ಟರ್‌ನಲ್ಲಿ ಮರಳುತ್ತಿರುವಾಗ ಹಿಂದಿನಿಂದ ವೇಗವಾಗಿ ಬಂದ ಖಾಸಗಿ ಬಸ್‌ ಡಿಕ್ಕಿ ಹೊಡೆದಿದೆ.

ಮುನಿರಾಬಾದ್: ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್‌ನಲ್ಲಿ ಮರಳುತ್ತಿದ್ದ ಮೂವರು ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಶುಕ್ರವಾರ ಸಂಜೆ 9.15ಕ್ಕೆ ಇಲ್ಲಿನ ಸಮೀಪದ ರಿಲಯನ್ಸ್ ಪೆಟ್ರೋಲ್ ಬಂಕ್ ಎದುರುಗಡೆ ಭೀಕರ ರಸ್ತೆ ಅಪಘಾತ ನಡೆದಿದೆ.

ಕರಮುಡಿ ಗ್ರಾಮದ ಬಸವರಾಜ (22), ಮುತ್ತಪ್ಪ (22) ಹಾಗೂ ಗದಗ ಜಿಲ್ಲೆಯ ತಿಮ್ಮಾಪುರ ಗ್ರಾಮದ ಕೊಂಡಪ್ಪ ತಿಮ್ಮಾಪುರ (60) ಮೃತಪಟ್ಟವರು. ಎಂಟು ಜನರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಕೊಪ್ಪಳದ ವೈದ್ಯಕೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಶುಕ್ರವಾರ ಪ್ರಯುಕ್ತ ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕಿನ ಕರಮುಡಿ ಗ್ರಾಮಸ್ಥರು ಹುಲಿಗೆಮ್ಮ ದೇವಿ ದರ್ಶನಕ್ಕೆ ಆಗಮಿಸಿದ್ದರು. ದರ್ಶನ ಮುಗಿಸಿಕೊಂಡು ತಮ್ಮ ಗ್ರಾಮಕ್ಕೆ ಟ್ರ್ಯಾಕ್ಟರ್‌ನಲ್ಲಿ ಮರಳುತ್ತಿರುವಾಗ ಹಿಂದಿನಿಂದ ವೇಗವಾಗಿ ಬಂದ ಖಾಸಗಿ ಬಸ್‌ ಡಿಕ್ಕಿ ಹೊಡೆದಿದೆ. ಟ್ರ್ಯಾಕ್ಟರ್ ಪಲ್ಟಿಯಾಗಿ ಟ್ರ್ಯಾಕ್ಟರ್‌ನಲ್ಲಿ ಪ್ರಯಾಣಿಸುತ್ತಿದ್ದ 15 ಜನರ ಪೈಕಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನು ಎಂಟು ಜನರು ಗಾಯಗೊಂಡಿದ್ದು, ಅವರನ್ನು ಕೊಪ್ಪಳ ವೈದ್ಯಕೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ರಸ್ತೆ ಅಪಘಾತದಿಂದ ರಾಷ್ಟ್ರೀಯ ಹೆದ್ದಾರಿಯ ಎರಡು ಬದಿಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಅಪಘಾತ ಎಸಗಿದ ಖಾಸಗಿ ಬಸ್ ಚಾಲಕನು ಪರಾರಿಯಾಗಿದ್ದು, ಪೊಲೀಸರು ಶೋಧಿಸುತ್ತಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''