ಕನ್ನಡಪ್ರಭ ವಾರ್ತೆ ಮಂಡ್ಯ
ಜಿಪಂ ಕಾವೇರಿ ಸಭಾಂಗಣದಲ್ಲಿ ನಡೆದ ಸರ್ಕಾರದ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳನ್ನು ಅಭಿನಂದಿಸಿ ಪ್ರಶಂಸಾ ಪತ್ರ ವಿತರಿಸಿದರು. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಪ್ರಗತಿ ಸಾಧಿಸುವಂತೆ ಅಧಿಕಾರಿಗಳಿಗೆ ಕಿವಿಮಾತು ಹೇಳಿದರು. ಹಾಗೂ ಕಳಪೆ ಪ್ರಗತಿ ಸಾಧಿಸಿದ ಪ್ರತಿ ತಾಲೂಕಿನ 5 ಪಿಡಿಒಗಳಿಗೆ ನೋಟಿಸ್ ನೀಡಿ ನಿಗಧಿತ ಗುರಿಗೆ ಅನುಗುಣವಾಗಿ ಪ್ರಗತಿ ಸಾಧಿಸಲು ತಿಳಿಸಲಾಗಿದೆ ಎಂದರು.
ಡಿ.31ರೊಳಗೆ ಅಭಿಲೇಖಾಲಯ ಪ್ರಾರಂಭಿಸಿ:ಗ್ರಾಪಂ ಕಡತಗಳು ಹಾಗೂ ಇ-ಸ್ವತ್ತು ಕಡತಗಳನ್ನು ಸೂಕ್ತ ರೀತಿಯಲ್ಲಿ ನಿರ್ವಹಣೆ ಮಾಡಲು ಜಿಲ್ಲೆಯ ಎಲ್ಲಾ ಗ್ರಾಪಂಗಳಿಗೆ ಈಗಾಗಲೇ ಸೂಚಿಸಲಾಗಿದ್ದು, ಆಯಾ ತಾಪಂ ಇಒಗಳು ಈ ಬಗ್ಗೆ ನಿರಂತರ ಅನುಸರಣೆ ಮಾಡಿ ಎಷ್ಟು ಗ್ರಾಪಂಗಳಲ್ಲಿ ಅಭಿಲೇಖಾಲಯ ಸುವ್ಯವಸ್ಥಿತವಾಗಿಲ್ಲ ಎಂಬುದನ್ನು ಖಚಿತಪಡಿಸಿಕೊಂಡು, ಡಿಸೆಂಬರ್ 31ರೊಳಗೆ ಅಭಿಲೇಖಾಲಯ ಪ್ರಾರಂಭಿಸಿ, ಕ್ಯಾಟಲಾಗ್ ಇಂಡೆಕ್ಸ್ ಮಾಡಿ 2026ರ ಹೊಸ ವರ್ಷವನ್ನು ಹೊಸ ಸುಸಜ್ಜಿತ ಅಭಿಲೇಖಾಲಯದೊಂದಿಗೆ ಪ್ರಾರಂಭಿಸಬೇಕು ಎಂದು ಸೂಚಿಸಿದರು.
ಕುಂದುಕೊರತೆ ಸಭೆ ಆಯೋಜಿಸಬೇಕು:
ಜಿಪಂ ಕಚೇರಿಗೆ ಸಾರ್ವಜನಿಕ ಸೋಮವಾರದಂದು ಸ್ವೀಕೃತವಾಗಿರುವ ದೂರು ಮತ್ತು ಮನವಿಗಳ ಕುರಿತು ತೆಗೆದುಕೊಳ್ಳಲಾಗಿರುವ ಕ್ರಮಗಳ ಬಗ್ಗೆ ಪರಿಶೀಲಿಸಲು ಇನ್ನು ಮುಂದೆ ಪ್ರತಿ ಸೋಮವಾರ ಸಿಇಒರವರ ನೇತೃತ್ವದ ಅಧಿಕಾರಿಗಳ ತಂಡ ತಾಪಂಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದು, ಅಗತ್ಯ ಮಾಹಿತಿಗಳೊಂದಿಗೆ ಸಿದ್ದವಿರುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಕೃಷ್ಣರಾಜಪೇಟೆ ತಾಲೂಕಿನ ಎಲ್ಲಾ ಗ್ರಾಪಂಗಳು ತಮ್ಮ ವ್ಯಾಪ್ತಿಯಲ್ಲಿನ ಎಲ್ಲಾ ಕೊಳವೆ ಬಾವಿಗಳಿಗೆ ಶೇ.100 ರಷ್ಟು ರಕ್ಷಣಾ ಕಾಮಗಾರಿ ನಿರ್ಮಾಣ ಮಾಡಿದ್ದರಿಂದ, ಗ್ರಾಪಂಗಳ ಪರವಾಗಿ ಕೃಷ್ಣರಾಜಪೇಟೆ ತಾಪಂ ಇಒ ಕೆ.ಸುಷ್ಮಾ ಅವರಿಗೆ ಪ್ರಶಂಸಾ ಪತ್ರ ನೀಡಿ ಗೌರವಿಸಲಾಯಿತು.
ಜಿಲ್ಲಾ ಪಂಚಾಯ್ತಿ ಉಪಕಾರ್ಯದರ್ಶಿ (ಆಡಳಿತ) ಶಿವಲಿಂಗಯ್ಯ, ಉಪಕಾರ್ಯದರ್ಶಿ (ಅಭಿವೃದ್ಧಿ) ಲಕ್ಷ್ಮಿ ಪಿ, ಯೋಜನಾ ನಿರ್ದೇಶಕರಾದ ರೂಪಶ್ರೀ ಕೆ.ಎನ್, ಸಹಾಯಕ ಕಾರ್ಯದರ್ಶಿ (ಆಡಳಿತ) ರವೀಂದ್ರ, ಸಹಾಯಕ ಕಾರ್ಯದರ್ಶಿ (ಅಭಿವೃದ್ಧಿ) ಚಂದ್ರು, ಸಹಾಯಕ ಯೋಜನಾಧಿಕಾರಿ ಶ್ರೀಹರ್ಷ ಸೇರಿದಂತೆ ಜಿಲ್ಲೆಯ ಎಲ್ಲಾ ತಾಪಂ ಇಒ, ಆಯ್ದ ಪಿಡಿಒಗಳು ಹಾಜರಿದ್ದರು.