ಕಾರು ಕಂದಕಕ್ಕೆ ಉರುಳಿ ಮೂವರು ಸ್ಥಳದಲ್ಲೇ ಸಾವು

KannadaprabhaNewsNetwork |  
Published : Dec 29, 2024, 01:15 AM IST
ಫೋಟೋ: ೨೮ಪಿಟಿಆರ್-ಎಕ್ಸಿಡೆಂಟ್ಕಂದಕಕ್ಕೆ ಉರುಳಿ ಬಿದ್ದು ನಜ್ಜುಗುಜ್ಜಾಗಿರುವ ಆಲ್ಟೋ ಕಾರು | Kannada Prabha

ಸಾರಾಂಶ

ಮುಂಜಾನೆ ಸುಮಾರು ೪.೧೫ರ ವೇಳೆಗೆ ಕಾರು ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದು ಕಾರಿನಲ್ಲಿದ್ದ ಮೂವರೂ ಮೃತಪಟ್ಟಿದ್ದಾರೆ. ಆದರೆ ಬೆಳಗ್ಗಿನ ಬಳಿಕವಷ್ಟೇ ಘಟನೆ ಬೆಳಕಿಗೆ ಬಂದಿದೆ. ಕಂದಕಕ್ಕೆ ಉರುಳಿದ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಮೃತದೇಹಗಳು ಕಾರಿನ ಹೊರಭಾಗಕ್ಕೆ ಎಸೆಯಲ್ಪಟ್ಟಿದ್ದವು.

ಕನ್ನಡಪ್ರಭ ವಾರ್ತೆ ಪುತ್ತೂರು

ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಂದಕಕ್ಕೆ ಉರುಳಿ ಬಿದ್ದು ತಂದೆ, ಮಗ ಸಹಿತ ಮೂವರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಶನಿವಾರ ಬೆಳಗ್ಗೆ ಮಾಣಿ- ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪರ್ಲಡ್ಕ ಬೈಪಾಸ್‌ನಲ್ಲಿ ನಡೆದಿದೆ.

ಮೃತಪಟ್ಟವರನ್ನು ಸುಳ್ಯ ತಾಲೂಕಿನ ಜಟ್ಟಿಪಳ್ಳ ನಿವಾಸಿಗಳಾದ ಅಣ್ಣು ನಾಯ್ಕ(೭೨), ಅವರ ಪುತ್ರ ಚಿದಾನಂದ ನಾಯ್ಕ (೫೮) ಮತ್ತು ನೆರೆಮನೆ ನಿವಾಸಿ ರಮೇಶ್ ನಾಯ್ಕ (೬೮) ಎಂದು ಗುರುತಿಸಲಾಗಿದೆ. ಇವರು ಬಂಟ್ವಾಳ ತಾಲೂಕಿನ ಪುಣಚದಲ್ಲಿ ನಡೆದ ಗೋಂದೊಳ್ ಪೂಜೆಗೆ ಆಲ್ಟೋ ಕಾರಿನಲ್ಲಿ ಪುಣಚಕ್ಕೆ ಶುಕ್ರವಾರ ರಾತ್ರಿ ಆಗಮಿಸಿದ್ದರು ಎನ್ನಲಾಗಿದ್ದು, ಹಿಂತಿರುಗಿ ಸುಳ್ಯಕ್ಕೆ ತೆರಳುತ್ತಿದ್ದ ವೇಳೆ ಮುಂಜಾನೆ ಸುಮಾರು ೪.೧೫ರ ವೇಳೆಗೆ ಕಾರು ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದು ಕಾರಿನಲ್ಲಿದ್ದ ಮೂವರೂ ಮೃತಪಟ್ಟಿದ್ದಾರೆ. ಆದರೆ ಬೆಳಗ್ಗಿನ ಬಳಿಕವಷ್ಟೇ ಘಟನೆ ಬೆಳಕಿಗೆ ಬಂದಿದೆ. ಕಂದಕಕ್ಕೆ ಉರುಳಿದ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಮೃತದೇಹಗಳು ಕಾರಿನ ಹೊರಭಾಗಕ್ಕೆ ಎಸೆಯಲ್ಪಟ್ಟಿದ್ದವು.

ಪುತ್ತೂರು ಸಂಚಾರಿ ಪೊಲೀಸ್ ಠಾಣೆಯ ಸಬ್‌ಇನ್ಸ್‌ಪೆಕ್ಟರ್‌ ಉದಯ ರವಿ ಹಾಗೂ ಎಫ್.ಎಸ್.ಐ.ಎಲ್ ತಂಡದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದರು. ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಬಿಟ್ಟು ಕೊಡಲಾಯಿತು. ಪುತ್ತೂರು ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಟ್ಯೂಷನ್‌ ಹೋಗದ್ದಕ್ಕೆ ಬೈದರೆಂದುಮನೆ ಬಿಟ್ಟು ಹೋಗಿದ್ದ ಮಕ್ಕಳ ರಕ್ಷಣೆ
ಗೀತರಚನೆ ಕಲಿಸಲು ಕಾರ್ಯಾಗಾರ ಮಾಡಿ ಉಪಯೋಗ ಇಲ್ಲ: ಕಾಯ್ಕಿಣಿ