ಸಮುದ್ರಕ್ಕೆ ಈಜಲು ತೆರಳಿದ ಮೂವರು ವಿದ್ಯಾರ್ಥಿಗಳ ಸಾವು

KannadaprabhaNewsNetwork |  
Published : Oct 15, 2025, 02:08 AM IST
ಸಮುದ್ರ ದಡದಲ್ಲಿ ಸೇರಿದ ನಾಗರಿಕರು | Kannada Prabha

ಸಾರಾಂಶ

ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರಿನಲ್ಲಿ‌ ಮುಳುಗಿ ಮೃತಪಟ್ಟ ಘಟನೆ ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಕೊಡೇರಿ ಗ್ರಾಮದ ಹೊಸಹಿತ್ಲು ಸಮುದ್ರತೀರದಲ್ಲಿ ನಡೆದಿದೆ.

ಬೈಂದೂರು ಕಿರಿಮಂಜೇಶ್ವರ ಕೊಡೇರಿ ಗ್ರಾಮದ ಹೊಸಹಿತ್ಲು ಸಮುದ್ರತೀರದಲ್ಲಿ ದುರ್ಘಟನೆಕುಂದಾಪುರ: ಮಂಗಳವಾರ ಸಂಜೆ ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರಿನಲ್ಲಿ‌ ಮುಳುಗಿ ಮೃತಪಟ್ಟ ಘಟನೆ ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಕೊಡೇರಿ ಗ್ರಾಮದ ಹೊಸಹಿತ್ಲು ಸಮುದ್ರತೀರದಲ್ಲಿ ನಡೆದಿದೆ.ಬೈಂದೂರು ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಸಂಕೇತ್ (18), ಕಿರಿಮಂಜೇಶ್ವರ ಪ್ರೌಢ ಶಾಲೆಯ ಎಸೆಸ್ಸೆಲ್ಸಿ ವಿದ್ಯಾರ್ಥಿ ಸೂರಜ್ (16), ಕಿರಿಮಂಜೇಶ್ವರ ಪ್ರೌಢ ಶಾಲೆಯ ಒಂಭತ್ತನೆ ತರಗತಿ ವಿದ್ಯಾರ್ಥಿ ಆಶಿಶ್ (15) ಮೃತ ವಿದ್ಯಾರ್ಥಿಗಳು.ಸ್ಥಳೀಯರು ಹಾಗೂ ಈಜುಪಟುಗಳ‌ ಸಹಾಯದಿಂದ ಮೃತದೇಹಗಳನ್ನು ಮೇಲಕ್ಕೆತ್ತಲಾಗಿದ್ದು ಬೈಂದೂರಿಗೆ ಸಮುದಾಯ ಆರೋಗ್ಯಕೇಂದ್ರಕ್ಕೆ ಸಾಗಿಸಲಾಗಿದೆ. ಸ್ಥಳಕ್ಕೆ ಬೈಂದೂರು ಪಿಎಸ್ಐ ತಿಮ್ಮೇಶ್ ಭೇಟಿ ನೀಡಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಾಸ್ಟೆಲ್ ಮಕ್ಕಳಿಗೆ ಹೊಸ ಜಾತಿ ಪ್ರಮಾಣಪತ್ರ ಶಾಕ್‌
₹400 ಕೋಟಿ ಇದ್ದ 2 ಕಂಟೇನರ್‌ ಲಾರಿಗಳೇ ಬೆಳಗಾವೀಲಿ ನಾಪತ್ತೆ!