ಅರ್ಹ ಫಲಾನುಭವಿಗಳಿಗೆಲ್ಲ ತ್ರಿಚಕ್ರ ವಾಹನ: ಶಾಸಕ

KannadaprabhaNewsNetwork |  
Published : Jul 14, 2024, 01:31 AM IST
ಕಲಬುರಗಿ,ನಮ್ಮ ಸರ್ಕಾರದ ಅವಧಿಯಲ್ಲಿ ಗುಲಬರ್ಗಾ ದಕ್ಷಿಣ ಕ್ಷೇತ್ರದ ಎಲ್ಲ ಅರ್ಹ ವಿಶೇಷಚೇತನರಿಗೆ ಸುಗಮವಾಗಿ ಓಡಾಟಕ್ಕೆ‌ ತ್ರಿಚಕ್ರ ವಾಹನ ವಿತರಣೆ‌ ಮಾಡಲಾಗುವುದು ಎಂದು ಕಲಬುರಗಿ ದಕ್ಷಿಣ ಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಹೇಳಿದರು. | Kannada Prabha

ಸಾರಾಂಶ

ನಮ್ಮ ಸರ್ಕಾರದ ಅವಧಿಯಲ್ಲಿ ಗುಲ್ಬರ್ಗ ದಕ್ಷಿಣ ಕ್ಷೇತ್ರದ ಎಲ್ಲ ಅರ್ಹ ವಿಶೇಷಚೇತನರಿಗೆ ಸುಗಮವಾಗಿ ಓಡಾಟಕ್ಕೆ‌ ತ್ರಿಚಕ್ರ ವಾಹನ ವಿತರಣೆ‌ ಮಾಡಲಾಗುವುದು ಎಂದು ಕಲಬುರಗಿ ದಕ್ಷಿಣ ಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಹೇಳಿದರು.

ಕನ್ನಡಪ್ರಭ ವಾರ್ತೆ ಕಲಬುರಗಿ

ನಮ್ಮ ಸರ್ಕಾರದ ಅವಧಿಯಲ್ಲಿ ಗುಲ್ಬರ್ಗ ದಕ್ಷಿಣ ಕ್ಷೇತ್ರದ ಎಲ್ಲ ಅರ್ಹ ವಿಶೇಷಚೇತನರಿಗೆ ಸುಗಮವಾಗಿ ಓಡಾಟಕ್ಕೆ‌ ತ್ರಿಚಕ್ರ ವಾಹನ ವಿತರಣೆ‌ ಮಾಡಲಾಗುವುದು ಎಂದು ಕಲಬುರಗಿ ದಕ್ಷಿಣ ಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಹೇಳಿದರು.ಶನಿವಾರ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಅಂಗವಿಕಲರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಆಯೋಜಿಸಿದ ಕಾರ್ಯಕ್ರಮದಲ್ಲಿ 2020-21ನೇ ಸಾಲಿನ ಡಿ.ಎಂ.ಎಫ್ ನಿಧಿಯಡಿ 35 ಜನ ವಿಶೇಷಚೇತನರಿಗೆ ತಲಾ 97 ಸಾವಿರ ರು. ಮೊತ್ತದ ತ್ರಿಚಕ್ರ ವಾಹನ ವಿತರಣೆ ಮಾಡಿ ಮಾತನಾಡಿದರು.

ಹಿಂದೆ ತಾವು ವಿಧಾನ ಪರಿಷತ್ ಶಾಸಕ ಮತ್ತು ಜಿಲ್ಲಾ ಪಂಚಾಯ್ತಿ ಅಧ್ಯಕ್ಷರಾಗಿದ್ದ ಅವಧಿಯಲ್ಲಿಯೂ ವಿಶೇಷ ಕಾಳಜಿ ವಹಿಸಿ ತ್ರಿಚಕ್ರ ವಾಹನ ವಿತರಣೆ ಮಾಡಿದ್ದೆ. ಈಗಲೂ ಸಹ ಅದನ್ನು ಮುಂದುವರೆಸಿದ್ದೇನೆ. ಮುಂದಿನ ಹಂತದಲ್ಲಿ ಉಳಿದ ಅರ್ಹ ವಿಶೇಷಚೇತನರಿಗೆ ವಾಹನ ವಿತರಣೆ ಮಾಡಲಾಗುವುದು. ಬಡವರ ಪರ ಸರ್ಕಾರ ನಮ್ಮದು ಎಂದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಶಾಸಕ ತಿಪ್ಪಣ್ಣಪ್ಪ ಕಮಕನೂರ, ಪಂಚ ಗ್ಯಾರಂಟಿ ಸಮಿತಿ ಜಿಲ್ಲಾಧ್ಯಕ್ಷೆ ಚಂದ್ರಿಕಾ ಪರಮೇಶ್ವರಿ, ಮಹಾನಗರ ಪಾಲಿಕೆ ಸದಸ್ಯರಾದ ರಾಜಕೀಯ ಇನಾಂದಾರ, ರಾಜು ಜಾನೆ, ಶೇಖ್ ಹುಸೇನಿ, ನಿಂಗಮ್ಮ ಕಟ್ಟಿಮನಿ, ರೇಣುಕಾ ಪಿ. ಹೋಳ್ಕರ್. ಲತಾ ರಾಠೋಡ, ಮುಖಂಡರಾದ ನೀಲಕಂಠ ಮೂಲಗೆ, ಲಿಂಗರಾಜ ಕಣ್ಣಿ, ಲಿಂಗರಾಜ ತಾರಫೈಲ್, ಹೀರೋ ಶೋರೂಮ್ ಅಧಿಕಾರಿ ದೇವರಾಜ ಬಿ. ಕುಲಕರ್ಣಿ, ಅಂಗವಿಕಲರ ಕಲ್ಯಾಣ ಇಲಾಖೆಯ ಸಿಬ್ಬಂದಿಗಳಾದ ಪ್ರಕಾಶ ಜಾಧವ, ಅಫಜಲ್, ಮೇಘಾಂಜಲಿ, ಪ್ರಕಾಶ ದ್ಯಾಬೇರಿ, ಪ್ರಕಾಶ ಜಗತಿ ಮತ್ತಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯದ 13 ಜಿಲ್ಲೆಗಳಲ್ಲಿ ಬೇಸಿಗೆ ಮಳೆ
ಕನ್ನಡಿಗ ಅಮರೇಶ್‌ಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಗೌರವ