ಅತ್ಯಾಚಾರ: ಅಪರಾಧಿಗೆ ಮೂರು ವರ್ಷ ಜೈಲು

KannadaprabhaNewsNetwork |  
Published : Oct 28, 2024, 01:09 AM IST
(ಸಾಂದರ್ಭಿಕ ಚಿತ್ರ) | Kannada Prabha

ಸಾರಾಂಶ

ಮನೆಯಲ್ಲಿ ಅಪ್ರಾಪ್ತೆ ಒಬ್ಬಳೇ ಇದ್ದ ವೇಳೆ ಅತಿಕ್ರಮವಾಗಿ ಮನೆಯೊಳಗೆ ನುಗ್ಗಿ ಆಕೆಯ ಕೈ ಹಿಡಿದು, ಎಳೆದಾಡಿ ಅತ್ಯಾಚಾರಕ್ಕೆ ಯತ್ನಿಸಿದ ಅಪರಾಧಿಗೆ 3 ವರ್ಷ ಕಾರಾಗೃಹ ಶಿಕ್ಷೆ ಹಾಗೂ ₹5 ಸಾವಿರ ದಂಡ ವಿಧಿಸಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಎಫ್‌ಟಿಎಸ್‌ಸಿ-1 ನ್ಯಾಯಾಲಯ ತೀರ್ಪು ನೀಡಿದೆ.

ದಾವಣಗೆರೆ: ಮನೆಯಲ್ಲಿ ಅಪ್ರಾಪ್ತೆ ಒಬ್ಬಳೇ ಇದ್ದ ವೇಳೆ ಅತಿಕ್ರಮವಾಗಿ ಮನೆಯೊಳಗೆ ನುಗ್ಗಿ ಆಕೆಯ ಕೈ ಹಿಡಿದು, ಎಳೆದಾಡಿ ಅತ್ಯಾಚಾರಕ್ಕೆ ಯತ್ನಿಸಿದ ಅಪರಾಧಿಗೆ 3 ವರ್ಷ ಕಾರಾಗೃಹ ಶಿಕ್ಷೆ ಹಾಗೂ ₹5 ಸಾವಿರ ದಂಡ ವಿಧಿಸಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಎಫ್‌ಟಿಎಸ್‌ಸಿ-1 ನ್ಯಾಯಾಲಯ ತೀರ್ಪು ನೀಡಿದೆ.

ತಾಲೂಕಿನ ಕೆ.ಪಿ.ಜಗದೀಶ (27) ಶಿಕ್ಷೆಗೆ ಗುರಿಯಾದ ಅಪರಾಧಿ. ಅದೇ ಗ್ರಾಮದ ಮನೆಯೊಂದರಲ್ಲಿ 2022ರ ಮಾ.25ರಂದು ಸಂಜೆ 17 ವರ್ಷದ ಅಪ್ರಾಪ್ತೆ ಇದ್ದಳು. ಜಗದೀಶ ಎಂಬಾತ ಮನೆಗೆ ಬಂದು ಬಾಲಕಿಯ ಕೈ ಹಿಡಿದು, ಎಳೆದಾಡಿ ಅತ್ಯಾಚಾರಕ್ಕೆ ಯತ್ನಿಸಿದ್ದನು. ಬಾಲಕಿ ಕೂಗಿಕೊಂಡಿದ್ದರಿಂದ ನೆರೆ ಹೊರೆಯವರು ಬಂದು ರಕ್ಷಿಸಿದ್ದರು. ಆರೋಪಿ ಓಡಿ ಹೋಗಿದ್ದನು. ಗ್ರಾಮಾಂತರ ಠಾಣೆಯಲ್ಲಿ ಅಪ್ರಾಪ್ತೆ ತಂದೆ ದೂರು ದಾಖಲಿಸಿದ್ದರು.

ಜಗದೀಶನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದ ಅಂದಿನ ತನಿಖಾಧಿಕಾರಿ, ಪೊಲೀಸ್ ವೃತ್ತ ನಿರೀಕ್ಷಕ ಹಾರೂನ್ ಅಖ್ತರ್ ತನಿಖೆ ಕೈಗೊಂಡು, ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ಜಿಲ್ಲಾ ಮತ್ತು ಸತ್ರ ಎಫ್‌ಟಿಎಸ್‌ಸಿ-1 ನ್ಯಾಯಾಲಯದ ನ್ಯಾಯಾಧೀಶ ಶ್ರೀರಾಮ್ ನಾರಾಯಣ ಹೆಗಡೆ ವಿಚಾರಣೆ ಆಲಿಸಿ, ಜಗದೀಶನನ್ನು ಅಪರಾಧಿಕ ಎಂದು ತೀರ್ಮಾನಿಸಿ, ತೀರ್ಪು ನೀಡಿದರು. ಅಪರಾಧಿಗೆ ವಿಧಿಸಿದ ದಂಡದ ಮೊತ್ತದಲ್ಲಿ ₹5 ಸಾವಿರವನ್ನು ಸಂತ್ರಸ್ತೆಗೆ ನೀಡುವಂತೆ ಆದೇಶಿಸಲಾಗಿದೆ. ಪ್ರಕರಣದಲ್ಲಿ ಸರ್ಕಾರದ ಪರ ಸುನಂದಾ ಮಡಿವಾಳರ್ ವಾದ ಮಂಡಿಸಿದ್ದರು.

- - - (ಸಾಂದರ್ಭಿಕ ಚಿತ್ರ)

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧವಾಗುತ್ತಾ ?
ಯಾವ ದೇವ್ರಿಗೆ ಪೂಜೆ ಮಾಡಿಸಿದ್ದೀರಿ? : ಮಧುಗೆ ರವಿ!