ಕನ್ನಡಪ್ರಭಾ ವಾರ್ತೆ ಉಳ್ಳಾಲ
ಮೈಸೂರು ವಿಜಯನಗರ ದೇವರಾಜ್ ಮೊಹಲ್ಲಾ ನಿವಾಸಿ ನವೀನ್ ಕುಮಾರ್ ಅವರ ಪುತ್ರಿ ಕೀರ್ತನಾ ಎನ್. (21), ಕುರುಬರಹಳ್ಳಿ 4ನೇ ಕ್ರಾಸ್ ನಿವಾಸಿ ಮಲ್ಲೇಶ್ ಅವರ ಪುತ್ರಿ ನಿಶಿತಾ ಎಂ.ಡಿ .(21) ಹಾಗೂ ಕೆ.ಆರ್. ಮೊಹಲ್ಲಾದ ರಾಮಾನುಜ ರಸ್ತೆಯ 11ನೇ ಕ್ರಾಸ್ ನಿವಾಸಿ ಎಂ.ಎನ್. ಶ್ರೀನಿವಾಸ್ ಎಂಬವರ ಪುತ್ರಿ ಪಾರ್ವತಿ ಎಸ್. (20) ಮೃತರು.
ಶನಿವಾರ ರೆಸಾರ್ಟ್ಗೆ ಮೂವರು ವಿದ್ಯಾರ್ಥಿನಿಯರು ಆಗಮಿಸಿದ್ದಾರೆ. ಭಾನುವಾರ ಬೆಳಗ್ಗೆ ಚಹಾ ಮುಗಿಸಿ 10.05ಕ್ಕೆ ರೆಸಾರ್ಟ್ ಮುಂಭಾಗದಲ್ಲಿರುವ ಈಜುಕೊಳದಲ್ಲಿ ಆಟವಾಡುವ ಸಂದರ್ಭ ಈ ಘಟನೆ ನಡೆದಿದೆ. ಸಿ.ಸಿ. ಟಿವಿಯಲ್ಲಿ ದಾಖಲಾಗಿರುವ ದೃಶ್ಯದಂತೆ ಅರ್ಧ ಗಂಟೆ ಕಾಲ ಇವರು ಈಜುಕೊಳದಲ್ಲಿ ಈಜಾಡುತ್ತಿದ್ದರು. ಬಳಿಕ ಅಲ್ಲೇ ಈಜುಗಾರರ ಸುರಕ್ಷತೆಗೆ ಇಡಲಾಗಿದ್ದ ಟಯರ್ ಟ್ಯೂಬ್ನ್ನು ಹಿಡಿಯಲು ಓರ್ವ ವಿದ್ಯಾರ್ಥಿನಿ ಮುಂದೆ ಹೋಗಿದ್ದಾಳೆ. ಈ ವೇಳೆ ಆಯತಪ್ಪಿದ ಆಕೆಯನ್ನು ರಕ್ಷಿಸಲು ಹೋದ ಇನ್ನೊಬ್ಬಳೂ ಮುಳುಗಿದ್ದಾಳೆ. ಉಳಿದ ಇನ್ನೊಬ್ಬಳೂ ಇವರನ್ನು ರಕ್ಷಿಸಲು ಹೋಗಿ ತಾನೂ ನೀರಲ್ಲಿ ಮುಳುಗಿದ್ದು, ಮೂವರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.ರೆಸಾರ್ಟ್ ಸಿಬ್ಬಂದಿ ಉಪಾಹಾರ ತಯಾರಿಗೆಂದು ಅಡುಗೆ ಕೋಣೆಯಲ್ಲಿದ್ದ ಸಂದರ್ಭ ಘಟನೆ ಸಂಭವಿಸಿದೆ. ಮುಳುಗೇಳುತ್ತಿದ್ದ ವಿದ್ಯಾರ್ಥಿಗಳಿಗೆ ಬೊಬ್ಬೆ ಹಾಕಲು ಸಾಧ್ಯವಾಗಿಲ್ಲ. ಇದರಿಂದಾಗಿ ರೆಸಾರ್ಟ್ ಒಳಗಿದ್ದ ಸಿಬ್ಬಂದಿಗೂ ಘಟನೆ ಅರಿವಿಗೆ ಬಂದಿಲ್ಲ. ವಿದ್ಯಾರ್ಥಿನಿಯರು ತಾವು ಈಜುಕೊಳಕ್ಕೆ ಇಳಿಯುವ ಮೊದಲು ಈಜುಕೊಳದ ಹ್ಯಾಂಡ್ ರೈಲಿಂಗ್ನಲ್ಲಿ ಮೊಬೈಲ್ ಇಟ್ಟು ವೀಡಿಯೋ ರೆಕಾರ್ಡ್ ಆನ್ ಮಾಡಿಟ್ಟು ಹೋಗಿದ್ದರು. ಇಡೀ ಘಟನೆಯ ದೃಶ್ಯಗಳು ರೆಸಾರ್ಟ್ನ ಸಿಸಿಟಿವಿಯಲ್ಲಿ ದಾಖಲಾಗಿದೆ. ರೆಸಾರ್ಟ್ ನಿಯಮದ ಪ್ರಕಾರ ಬೆಳಗ್ಗೆ 11 ಗಂಟೆಗೆ ವಿದ್ಯಾರ್ಥಿನಿಯರು ಚೆಕ್ ಔಟ್ ಮಾಡಬೇಕಿತ್ತು. ಅದಕ್ಕೂ ಮುನ್ನ ಈಜಲು ತೆರಳಿದ್ದು, ಆ ಸಂದರ್ಭದಲ್ಲಿ ಅವಘಡ ಸಂಭವಿಸಿದೆ.
ಸ್ಥಳಕ್ಕೆ ಆಗಮಿಸಿದ ಮಂಗಳೂರು ಉಪವಿಭಾಗಾಧಿಕಾರಿ ಹರ್ಷವರ್ಧನ್ ಪರಿಶೀಲನೆ ನಡೆಸಿ ರೆಸಾರ್ಟ್ ಪರವಾನಗಿ ರದ್ದುಗೊಳಿಸುವ ಆದೇಶ ನೀಡಿದ್ದಾರೆ. ಸ್ಥಳೀಯ ಸಂಸ್ಥೆಯಿಂದ ಪಡೆದ ಪರವಾನಗೆ ರದ್ದುಗೊಳಿಸಲು ಸೂಚಿಸಿದ್ದಾರೆ. ಜತೆಗೆ ರೆಸಾರ್ಟ್ ಸೀಲ್ ಡೌನ್ ಮಾಡಿದ್ದಾರೆ. ಜಿಲ್ಲಾಧಿಕಾರಿ ಸೂಚನೆಯಂತೆ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು. ಸದ್ಯ ರೆಸಾರ್ಟ್ ಟ್ರೇಡ್ ಲೈಸನ್ಸ್ ಮತ್ತು ಟೂರಿಸಂ ಪರವಾನಗಿ ಅಮಾನತಿನಲ್ಲಿಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
................
- ಅನುಪಮ್ ಅಗರ್ವಾಲ್, ಪೊಲೀಸ್ ಆಯುಕ್ತ, ಮಂಗಳೂರು.