ಹನೂರು ತಾಲೂಕಿನ ಲೊಕ್ಕನಹಳ್ಳಿ ಬಳಿ ಅರಣ್ಯ ಸಂಚಾರಿದಳ ಪೊಲೀಸರು ಹುಲಿ ಉಗುರು ಸಾಗಣೆ ಮಾಡುತ್ತಿದ್ದ ಇಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕನ್ನಡಪ್ರಭ ವಾರ್ತೆ ಹನೂರುಹನೂರು-ಕೊಳ್ಳೇಗಾಲ ಮುಖ್ಯರಸ್ತೆಯಲ್ಲಿನ ಲೊಕ್ಕನಹಳ್ಳಿ ಬಳಿ ನಾಲ್ಕು ಹುಲಿ ಉಗುರುಗಳನ್ನು ಬೈಕಿನಲ್ಲಿ ಸಾಗಾಣಿಕೆ ಮಾಡುತ್ತಿದ್ದ ಇಬ್ಬರನ್ನು ಅರಣ್ಯ ಸಂಚಾರ ದಳದ ಪೊಲೀಸರು ಪತ್ತೆ ಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಪಿರಿಯಾಪಟ್ಟಣ ತಾಲೂಕಿನ ದೂಡ್ಡ ಹರವೆ ಗ್ರಾಮದ ನವೀನ್ ಕುಮಾರ್ ಬಿನ್ ಮಂಜು, (24), ಎಚ್.ಡಿ ಕೋಟೆ ತಾಲೂಕಿನ ಆಲನಹಳ್ಳಿ ಗ್ರಾಮದ ಕುಮಾರನಾಯಕ ಬಿನ್ ಚೆಲುವನಾಯಕ, (32) ಇವರನ್ನು ಪೊಲೀಸರು ಬಂಧಿಸಿದ್ದಾರೆ. ಕೊಳ್ಳೇಗಾಲ-ಹನೂರು ಮುಖ್ಯ ರಸ್ತೆಯಿಂದ ಲೊಕ್ಕನಹಳ್ಳಿ ಕಡೆಗೆ ಹೋಗುವ ರಸ್ತೆಯ ಜಂಕ್ಷನ್ ಬಳಿ ಹುಲಿಯ 04 ಉಗುರುಗಳನ್ನು ಬೈಕಿನಲ್ಲಿ ಸಾಗಾಣಿಕೆ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಎಸ್ಎಸ್ ಕಾಶಿ ಪೊಲೀಸ್ ಅಧೀಕ್ಷಕರು ಸಿಐಡಿ ಅರಣ್ಯ ಸಂಚಾರಿ ಘಟಕ ಮಡಕೇರಿ ಅವರ ಮಾರ್ಗದರ್ಶನದಲ್ಲಿ ಸಿಐಡಿ ಅರಣ್ಯ ಸಂಚಾರಿ ದಳ ಕೊಳ್ಳೇಗಾಲದ ಪಿಎಸ್ಐ ವಿಜಯ್ ರಾಜ್ ನೇತ್ರತ್ವದ ತಂಡ ದಾಳಿ ನೆಡೆಸಿದಾಗ ಈ ಪ್ರಕರಣ ಬೆಳಕಿಗೆ ಬಂದಿದೆ. ಕೂಡಲೆ ಹುಲಿ ಉಗುರನ್ನು ವಶಕ್ಕೆ ಪಡೆದು ಇಬ್ಬರನ್ನು ಬಂಧಿಸಿ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.
ಈ ಕಾರ್ಯಚರಣೆಯಲ್ಲಿ ಅರಣ್ಯಸಂಚಾರಿ ದಳದ ಸಿಬ್ಬಂದಿ ಶಂಕರ್, ಬಸವರಾಜು, ರಾಮಚಂದ್ರ, ಸ್ವಾಮಿ, ಲತಾ, ಬಸವರಾಜು, ಚಾಲಕ ಪ್ರಭಾಕರ್ ಭಾಗವಹಿಸಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.