ಕನ್ನಡಪ್ರಭ ವಾರ್ತೆ ಹಲಗೂರು
ಸಮೀಪದ ಬ್ಯಾಡರಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಅಂಬೇಡ್ಕರ್ ಸಭಾಂಗಣದಲ್ಲಿ ಕಾವೇರಿ ವನ್ಯಜೀವಿ ವಲಯ ಹಲಗೂರು ಮತ್ತು ವನೋದಯ ಸ್ವಯಂ ಸೇವಾ ಸಂಸ್ಥೆಯಿಂದ ಆಯೋಜಿಸಿದ್ದ ವಿಶ್ವ ಹುಲಿ ದಿನಾಚರಣೆಯಲ್ಲಿ ಮಾತನಾಡಿದರು.
ಒಂದು ಕಾಡಿನಲ್ಲಿ ಹುಲಿ ಸಂತತಿ ವಾಸವಾಗಿದೆ ಎಂದರೆ ಆ ಕಾಡು ಸಮೃದ್ಧವಾಗಿದೆ ಎಂದರ್ಥ. ಹುಲಿಗಳ ಆಹಾರಕ್ಕಾಗಿ ವಾರ್ಷಿಕ ಸುಮಾರು 50ಕ್ಕೂ ಹೆಚ್ಚು ಬಲಿ ಪ್ರಾಣಿಗಳು ಬೇಕಾಗಲಿವೆ. ಹುಲಿ ಕಾಡಿನಲ್ಲಿ ಕಾಟಿ, ಜಿಂಕೆ, ಕೃಷ್ಣಾಮೃಗ, ಕಾಡು ಹಂದಿ ಸೇರಿದಂತೆ ಹಲವು ಬಗೆಯ ಬಲಿ ಪ್ರಾಣಿಗಳು ಸಮೃದ್ಧವಾಗಿ ಇದ್ದಾಗ ಹುಲಿಗಳ ಸಂತತಿ ಹೆಚ್ಚಲು ಸಾಧ್ಯ ಎಂದರು.ಕಾಡಿನಲ್ಲಿರುವ ಹಂದಿ, ಜಿಂಕೆ ಮುಂತಾದ ಪ್ರಾಣಿಗಳನ್ನು ಕಳ್ಳ ಬೇಟೆಗಾರರು ಕೊಂದು ಹಾಕುತ್ತಿದ್ದಾರೆ. ದನಗಾಹಿಗಳು ಹಸುಗಳಿಗೆ ಹೊಸ ಹುಲ್ಲು ಚಿಗರಲಿ ಎಂದು ಕಾಡಿಗೆ ಬೆಂಕಿ ಹಚ್ಚುತ್ತಿದ್ದಾರೆ. ಇದರಿಂದ ಕಾಡು ನಾಶದ ಜೊತೆಗೆ ಹಲವು ಬಗೆಯ ವನ್ಯ ಜೀವಿಗಳು ಸಾವನ್ನಪ್ಪುತ್ತಿವೆ. ಪರಿಣಾಮ ಹುಲಿಗಳು ದೈನಂದಿನ ಆಹಾರ ಕೊರತೆಯಿಂದ ಸಾವನ್ನಪ್ಪಲಿವೆ ಎಂದು ವಿಷಾದಿಸಿದರು.
ಸರ್ಕಾರದ ಕಟ್ಟುನಿಟ್ಟಿನ ಕ್ರಮಗಳ ಜೊತೆಗೆ ಕಾಡಂಚಿನ ಗ್ರಾಮಗಳ ನಿವಾಸಿಗಳು, ಸಾರ್ವಜನಿಕರು, ಸಂಘ ಸಂಸ್ಥೆಗಳು, ಸ್ವಯಂ ಸೇವಾ ಸಂಸ್ಥೆಗಳು ಒಗ್ಗೂಡಿ ಕೆಲಸ ಮಾಡಿದರೇ ಹುಲಿಗಳ ನೆಲೆಗಳ ಸಂರಕ್ಷಣೆ ಸಾಧ್ಯ ಎಂದರು.
ಈ ಸಂದರ್ಭದಲ್ಲಿ ಪ್ರಾಂಶುಪಾಲ ಬಿ.ಎಂ.ಸತೀಶ್, ಗಸ್ತು ಅರಣ್ಯ ಪಾಲಕ ಸಿದ್ದರಾಮ ಪೂಜಾರಿ, ವನೋದಯ ಕ್ಷೇತ್ರ ಸಂಯೋಜಕ ಮಹೇಶ್ ಕುಮಾರ್, ಶಿಕ್ಷಕರಾದ ವಿಜಯ್ ಕುಮಾರ್, ಸಂದೀಪ್, ವೆಂಕಟಸ್ವಾಮಿ, ರಂಜಿತ್, ಲಕ್ಷಯ್ಯ ಸೇರಿದಂತೆ ಹಲವರು ಭಾಗವಹಿಸಿದ್ದರು.