ಕನ್ನಡಪ್ರಭವಾರ್ತೆ ನಾಗಮಂಗಲ
ತಾಲೂಕಿನ ಚಿಣ್ಯ ಸರ್ಕಲ್ ಸಮೀಪದ ಭೂಸಮುದ್ರ ಗೇಟ್ ಬಳಿ ವಿಬ್ಗಯಾರ್ ಪಬ್ಲಿಕ್ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಗ್ನಿ ಅವಘಡ ಸಂಭವಿಸಿದಾಗ ಬೆಂಕಿ ನಂದಿಸುವ ಕುರಿತು ಮಕ್ಕಳಿಗೆ ಪ್ರಾತ್ಯಕ್ಷಿತೆ ನೀಡಿ ಮಾತನಾಡಿ, ಮುನ್ನೆಚ್ಚರಿಕೆ ವಹಿಸಿ ಸುರಕ್ಷತಾ ಕ್ರಮಗಳನ್ನು ಅನುಸರಿಸಿದರೆ ಬೆಂಕಿ ಅನಾಹುತ ತಪ್ಪಿಸಬಹುದು ಎಂದರು.
ಮನೆಗಳಲ್ಲಿ ಗೃಹಿಣಿಯರು ಅಡುಗೆ ಸಿಲಿಂಡರ್ ಬಳಸುವಾಗ ವಿಶೇಷ ಕಾಳಜಿ ವಹಿಸಬೇಕು. ಅನಿಲ ಸೋರಿಕೆಯಾಗುವುದು ಕಂಡು ಬಂದ ತಕ್ಷಣ ಗಾಬರಿಯಾಗದೆ ಸುರಕ್ಷತಾ ಕ್ರಮಗಳನ್ನು ಅನುಸರಿಸಿದರೆ ಅವಘಡವನ್ನು ತಪ್ಪಿಸಬಹುದು ಎಂದರು.ಬೇಸಿಗೆ ಸಮಯದಲ್ಲಿ ರೈತರು ತಮ್ಮ ಜಮೀನು ತೋಟಗಳಲ್ಲಿ ತ್ಯಾಜ್ಯ ವಸ್ತುಗಳನ್ನು ಸುಡಲು ಬೆಂಕಿ ಹಚ್ಚುವ ವೇಳೆ ಮುಂಜಾಗ್ರತಾ ಕ್ರಮ ವಹಿಸಬೇಕು. ಶಾಲಾ ಮಕ್ಕಳು ಬೆಂಕಿ ಮತ್ತು ಹರಿಯುವ ನೀರಿನಲ್ಲಿ ಆಟವಾಡಬಾರದು. ಸುರಕ್ಷಾ ಕವಚ ಧರಿಸಿ ಈಜು ಕಲಿಯಬೇಕು. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಅಥವಾ ಇನ್ನಿತರೆ ಅಗ್ನಿ ಅವಘಡಗಳು ಸಂಭವಿಸಿದ ಕೂಡಲೇ ತುರ್ತು ಸಹಾಯವಾಣಿ ಸಂಖ್ಯೆ 101 ಅಥವಾ 112ಕ್ಕೆ ದೂರವಾಣಿ ಕರೆ ಮಾಡಿ ಮಾಹಿತಿ ನೀಡಿದರೆ ತಕ್ಷಣ ಕಾರ್ಯ ಪ್ರವೃತ್ತರಾಗಿ ಬೆಂಕಿ ನಂದಿಸಿ ಹೆಚ್ಚಿನ ಅನಾಹುತವನ್ನು ತಪ್ಪಿಸಲಾಗುವುದು. ಈ ಕುರಿತು ಶಾಲಾ ಮಕ್ಕಳು ಪೋಷಕರು ಹಾಗೂ ಗ್ರಾಮಸ್ಥರಲ್ಲಿ ಅರಿವು ಮೂಡಿಸುವ ಕೆಲಸ ಮಾಡಬೇಕು ಎಂದರು.