ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರಪತ್ರ ಬಿಡುಗಡೆಗೊಳಿಸಿ ಮಾತನಾಡಿ, ತಾಲೂಕಿನ ವಿದ್ಯಾರ್ಥಿಗಳು ಈ ಪರೀಕ್ಷೆಯಲ್ಲಿ ಪಾಲ್ಗೊಂಡು ಅತ್ಯುತ್ತಮ ಅಂಕಗಳು ಪಡೆದು ಉತ್ತೀರ್ಣರಾದರೆ 20 ಮಂದಿ ವಿದ್ಯಾರ್ಥಿಗಳಿಗೆ ಶೇ.50 ರಷ್ಟು ವಿದ್ಯಾರ್ಥಿ ವೇತನ ನೀಡಲಾಗುವುದು ಎಂದರು.
ತಾಲೂಕಿನ ವಿದ್ಯಾರ್ಥಿಗಳು ಒಂದು ದಿನ ಮುಂಚಿತವಾಗಿ ಸಂಸ್ಥೆ ಪ್ರಾಂಶುಪಾಲರನ್ನು ಭೇಟಿ ಮಾಡಿ ತಮ್ಮ ಹೆಸರು ನೋಂದಾಯಿಸಿಕೊಂಡು ಭಾನುವಾರ ಪರೀಕ್ಷೆಯಲ್ಲಿ ಪಾಲ್ಗೊಳ್ಳಬೇಕು ಎಂದರು.ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕೆ.ಆರ್.ಪೇಟೆ ಪಟ್ಟಣದಿಂದ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದೆ. ಪ್ರತಿಭಾವಂತ ಬಡ ವಿದ್ಯಾರ್ಥಿಗಳು ಈ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಮನವಿ ಮಾಡಿದರು.
ಜ.3 ಮತ್ತು 4 ರಂದು ಸಂಕ್ರಾಂತಿ ರಂಗೋತ್ಸವ, ನಾಟಕ ಪ್ರದರ್ಶನ
ತಾಲೂಕಿನ ಅಕ್ಕಿಹೆಬ್ಬಾಳು ಸರ್ಕಾರಿ ಪ್ರೌಢಶಾಲಾ ಒಳಾಂಗಣ ಆವರಣದ ರಂಗ ಮಂದಿರದಲ್ಲಿ ಜ.3 ಮತ್ತು 4 ರಂದು ಸಂಕ್ರಾಂತಿ ರಂಗೋತ್ಸವ ಎಂಬ ಶೀರ್ಷಿಕೆಯಲ್ಲಿ ಎರಡು ದಿನಗಳ ಕಾಲ ನಾಟಕ ಪ್ರದರ್ಶನ ನಡೆಯಲಿದೆ ಎಂದು ಲೋಕಾಯನ ಸಂಸ್ಥೆ ಸ್ಥಳೀಯ ಸಂಚಾಲಕ ಮೊಹಮ್ಮದ್ ಅಜರುದ್ದೀನ್ ತಿಳಿಸಿದ್ದಾರೆ.
ಅದೇ ದಿನ ಸಂಜೆ 7:30ಕ್ಕೆ ಬಿ.ಎಸ್.ಅಶ್ವಥ್ ರಚನೆ ಮಾಡಿರುವ ಶ್ರೀ ಕೃಷ್ಣ ಸಂಧಾನ ನಾಟಕವನ್ನು ಧಾತುರಂಗ ಸಂಸ್ಥೆಯ ಕಲಾವಿದರು ಅಭಿನಯಿಸುತ್ತಿದ್ದಾರೆ. ಜ.4 ರಂದು ಬೆಳಗ್ಗೆ 10 ಗಂಟೆಗೆ ವಿದ್ಯಾರ್ಥಿಗಳಿಗಾಗಿ ಡಾ:ಎಂ.ಬೈರೇಗೌಡ ರಚನೆ ಮಾಡಿರುವ ಸರಸತಿಯಾಗಲೊಲ್ಲೆ ಎಂಬ ನಾಟಕ ಪ್ರದರ್ಶನವಿದೆ. ಅದೇ ದಿನ ಸಂಜೆ 7.30ಕ್ಕೆ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ರಚನೆ ಮಾಡಿರುವ ಮೋಳಿಗೆ ಮಾರಯ್ಯ ಎಂಬ ನಾಟಕದ ಪ್ರದರ್ಶನವಿದೆ. ಸಾರ್ವಜನಿಕರು ಭಾಗವಹಿಸುವಂತೆ ಕೋರಿದ್ದಾರೆ.