ಹೋಟೆಲ್‌ಗೆ ನುಗ್ಗಿದ ಟಿಪ್ಪರ್ ಲಾರಿ: ಇಬ್ಬರು ಸ್ಥಳದಲ್ಲೇ ಸಾವು

KannadaprabhaNewsNetwork |  
Published : Sep 06, 2024, 01:05 AM IST
ದದ | Kannada Prabha

ಸಾರಾಂಶ

ಚಾಲಕನ ನಿಯಂತ್ರಣ ತಪ್ಪಿ ಕೋಲಾರ ವೃತ್ತದಲ್ಲಿನ ದರ್ಶನ್ ಹೋಟೆಲ್‌ಗೆ ನುಗ್ಗಿ ಪಲ್ಟಿಯಾಗಿ ಬಿದ್ದಿದ್ದು, ಹೋಟೆಲ್‌ನಲ್ಲಿದ್ದ ಶಿವಾನಂದ ಹಾಗೂ ಶಾಂತಕುಮಾರ್ ಎಂಬುವರು ಟಿಪ್ಪರ್ ಲಾರಿ ನುಗ್ಗಿರುವ ರಭಸಕ್ಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಚಿಂತಾಮಣಿ: ಜಲ್ಲಿಕಲ್ಲು ತುಂಬಿಕೊಂಡು ಹೋಗುತ್ತಿದ್ದ ಟಿಪ್ಪರ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ, ರಸ್ತೆ ಬದಿಯಲ್ಲಿದ್ದ ಹೋಟೆಲ್‌ಗೆ ನುಗ್ಗಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ, ಇಬ್ಬರಿಗೆ ಗಂಭೀರ ಸ್ಚರೂಪದ ಗಾಯಗಳಾಗಿರುವ ಘಟನೆ ನಗರದ ಕೋಲಾರ ಸರ್ಕಲ್ ನಲ್ಲಿ ನಡೆದಿದೆ. ಅಪಘಾತದಲ್ಲಿ ಸಾವನ್ನಪ್ಪಿರುವ ವ್ಯಕ್ತಿಗಳನ್ನು ಕೋಲಾರ ವೃತ್ತದ ದರ್ಶನ್ ಹೋಟೆಲ್‌ನ ಮಾಲೀಕ ಶಿವಾನಂದ (೬೨) ಹಾಗೂ ಕೋಲಾರ ತಾಲೂಕಿನ ವೆಲಗಲಬರ‍್ರೆ ಗ್ರಾಮದ ಅಡಿಗೆ ಕೆಲಸ ಮಾಡುವ ಶಾಂತಕುಮಾರ್ ಎಂದು ಗುರುತಿಸಲಾಗಿದ್ದು, ಶ್ರೀನಿವಾಸಬಾಬು ಹಾಗೂ ಮುರಳಿ ಎಂಬುವವರಿಗೆ ಗಂಭೀರ ಸ್ವರೂಪದ ಗಾಯಗಳಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಗುರುವಾರ ಬೆಳಗ್ಗೆ ೯ ಗಂಟೆಯ ಸುಮಾರಿಗೆ ಚಿಂತಾಮಣಿ ನಗರದಿಂದ ಕೋಲಾರ ವೃತ್ತದ ಕಡೆ ಜಲ್ಲಿಕಲ್ಲು ತುಂಬಿಕೊಂಡು ತೆರಳುತ್ತಿದ್ದ ಟಿಪ್ಪರ್ ಲಾರಿಯು ಚಾಲಕನ ನಿಯಂತ್ರಣ ತಪ್ಪಿ ಕೋಲಾರ ವೃತ್ತದಲ್ಲಿನ ದರ್ಶನ್ ಹೋಟೆಲ್‌ಗೆ ನುಗ್ಗಿ ಪಲ್ಟಿಯಾಗಿ ಬಿದ್ದಿದ್ದು, ಹೋಟೆಲ್‌ನಲ್ಲಿದ್ದ ಶಿವಾನಂದ ಹಾಗೂ ಶಾಂತಕುಮಾರ್ ಎಂಬುವರು ಟಿಪ್ಪರ್ ಲಾರಿ ನುಗ್ಗಿರುವ ರಭಸಕ್ಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಗೆ ಟಿಪ್ಪರ್ ಚಾಲಕನ ಅತೀವೇಗ ಹಾಗೂ ಅಜಾಗರೂಕತೆ ಕಾರಣವಾಗಿದ್ದು, ಟಿಪ್ಪರ್ ಚಾಲಕ ಅಪಘಾತವಾದ ಕೂಡಲೇ ಸ್ಥಳದಿಂದ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಚಿಂತಾಮಣಿ ನಗರಠಾಣೆಯ ಪೊಲೀಸರು ಹಾಗೂ ಅಗ್ನಿಶಾಮಕದಳದ ಸಿಬ್ಬಂದಿ ಭೇಟಿ ನೀಡಿ, ಜೆಸಿಬಿ ಯಂತ್ರಗಳ ಮೂಲಕ ಟಿಪ್ಪರ್ ಲಾರಿಯನ್ನು ತೆರವುಗೊಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!