ಕನ್ನಡಪ್ರಭ ವಾರ್ತೆ ಕುಂದಾಪುರ
ಧನುಷ್ ತನ್ನ ಇಬ್ಬರು ಸ್ನೇಹಿತರೊಂದಿಗೆ ಕಾಲೇಜು ಮುಗಿಸಿ ಕೋಟೇಶ್ವರದತ್ತ ರಸ್ತೆ ಬದಿಯ ಇಂಟರ್ ಲಾಕ್ ಮೇಲೆ ನಡೆದುಕೊಂಡು ಹೋಗುತ್ತಿದ್ದಾಗ ಅವಘಡ ಸಂಭವಿಸಿದೆ. ಎದುರಿನಿಂದ ಬರುತ್ತಿದ್ದ ಕಾರು ಏಕಾಏಕಿಯಾಗಿ ಬಲಬದಿಯ ರಸ್ತೆಗೆ ತಿರುವನ್ನು ಪಡೆದುಕೊಳ್ಳುತ್ತಿದ್ದಾಗ ಶರವೇಗದಲ್ಲಿ ಬಂದ ಟಿಪ್ಪರ್, ಕಾರನ್ನು ತಪ್ಪಿಸುವ ಭರದಲ್ಲಿ ನಿಯಂತ್ರಣ ಕಳೆದುಕೊಂಡ ಚಾಲಕ ರಸ್ತೆಯ ಎಡಬದಿಯಲ್ಲಿ ಸಾಗುತ್ತಿದ್ದ ವಿದ್ಯಾರ್ಥಿಗೆ ಡಿಕ್ಕಿ ಹೊಡೆದಿದ್ದಾನೆ. ಟಿಪ್ಪರ್ ಅಡಿ ಚಕ್ರಕ್ಕೆ ಸಿಲುಕಿಕೊಂಡ ಧನುಷ್ ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಧನುಷ್ ಜೊತೆ ನಡೆದುಕೊಂಡು ಬರುತ್ತಿದ್ದ ಇಬ್ಬರು ವಿದ್ಯಾರ್ಥಿಗಳು ಪವಾಡಸದೃಶ ರೀತಿಯಲ್ಲಿ ಪಾರಾಗಿದ್ದಾರೆ.
ಧನುಷ್ ತನ್ನ ತಾಯಿಯೊಂದಿಗೆ ನಾವುಂದ ಕೋಯನಗರದಲ್ಲಿ ವಾಸವಾಗಿದ್ದು, ತಂದೆ ಬಾರ್ಕೂರಿನಲ್ಲಿ ಕೆಲಸ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.ಕುಂದಾಪುರ ಸಂಚಾರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
------------ವೀಡಿಯೋ ವೈರಲ್ವಿದ್ಯಾರ್ಥಿ ಧನುಷ್ ಮೇಲೆ ಟಿಪ್ಪರ್ ಹರಿದ ವೀಡಿಯೋಅಲ್ಲೇ ಎದುರು ಬರುತ್ತಿದ್ದ ಕಾರೊಂದರ ಡ್ಯಾಶ್ ಕ್ಯಾಮೆರಾದಲ್ಲಿ ಸೆರೆ ಸಿಕ್ಕಿದ್ದು, ಅಪಘಾತದ ಭಯಾನಕ ದೃಶ್ಯಾವಳಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.