ಕನ್ನಡಪ್ರಭ ವಾರ್ತೆ ಗೌರಿಬಿದನೂರು
ಶಾಲೆಗಳು, ಸರ್ಕಾರಿ ಕಚೇರಿಗಳು ಸೇರಿದಂತೆ ನಾನಾ ಕಡೆ ಆ.15ರಂದು 79ನೇ ಸ್ವಾತಂತ್ರ ದಿನಾಚರಣೆಗೆ ಸಿದ್ಧತೆಗಳು ಭರದಿಂದ ನಡೆಯುತ್ತಿವೆ. ಆ. 13ರಿಂದ ಹರ್ ಘರ್ ತಿರಂಗ ಕಾರ್ಯಕ್ರಮದ ಮೂಲಕ ಪ್ರತಿ ಮನೆಯಲ್ಲೂ ತಿರಂಗ ಧ್ವಜ ಹಾರಾಲಿದೆ. ಈ ಮೂಲಕ ಸ್ವಾತಂತ್ರ್ಯಸಂಭ್ರಮ ಮತ್ತಷ್ಟು ಹೆಚ್ಚಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ.ತಾಲೂಕಿನ ವಿದುರಾಶ್ವತ್ಥ ಶ್ರೀ ಅಶ್ವತ್ಥನಾರಾಯಣ ಸ್ವಾಮಿಯ ಸನ್ನಿಧಾನದ ಆವರಣದಲ್ಲಿ ಹಮ್ಮಿಕೊಂಡಿದ್ದ ಮನೆ ಮನೆಗೆ ತ್ರಿವರ್ಣ ಧ್ವಜ ಕಾರ್ಯಕ್ರಮಕ್ಕೂ ಮುನ್ನ ವಿದುರಾಶ್ವತ್ಥ ಶ್ರೀ ಅಶ್ವತ್ಥನಾರಾಯಣಸ್ವಾಮಿ ಸನ್ನಿಧಿಯಲ್ಲಿ ಪೂಜೆಸಲ್ಲಿಸಿ ನಂತರ ವೀರಸೌಧಕ್ಕೆ ನಮನ ಸಲ್ಲಿಸಿ ಕಾರ್ಯಕ್ರಮವನ್ನು ಆರಂಭಿಸಿದರು ಪ್ರತಿ ಮನೆಯಲ್ಲೂ ತ್ರಿವರ್ಣ ಧ್ವಜಬಳಿಕ ವಿಜಯೇಂದ್ರ ಮಾತನಾಡಿ, ಹರ್ ಘರ್ ತಿರಂಗಾ ಅಭಿಯಾನದ ಪ್ರಾಥಮಿಕ ಉದ್ದೇಶವೆಂದರೆ ಆಗಸ್ಟ್ 13 ರಿಂದ ಆಗಸ್ಟ್ 15 ರವರೆಗೆ ನಾಗರಿಕರು ರಾಷ್ಟ್ರಧ್ವಜವನ್ನು ಮನೆಗೆ ತಂದು ಹೆಮ್ಮೆಯಿಂದ ಪ್ರದರ್ಶಿಸಲು ಪ್ರೇರೇಪಿಸುವುದು. ಈ ಕಾಯಿದೆಯು ಸ್ವಾತಂತ್ರ್ಯ, ಏಕತೆ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿಯುವ ನಮ್ಮ ಸಾಮೂಹಿಕ ಸಂಕಲ್ಪವನ್ನು ಸಂಕೇತಿಸುತ್ತದೆ. ನಮ್ಮ ದೇಶದ ಸಾರ್ವಭೌಮತ್ವ ಮತ್ತು ಅಸಂಖ್ಯಾತ ಸ್ವಾತಂತ್ರ್ಯ ಹೋರಾಟಗಾರರು ಮಾಡಿದ ತ್ಯಾಗಗಳ ಸಂಕೇತವಾಗಿ ರಾಷ್ಟ್ರಧ್ವಜದ ಮಹತ್ವವನ್ನು ಬಲಪಡಿಸುವ ಗುರಿಯನ್ನು ಈ ಅಭಿಯಾನ ಹೊಂದಿದೆ ಎಂದರು.
ತಿರಗಾ ಅಭಿಯಾನ ಎಲ್ಲರೂ ತಮ್ಮ ತಮ್ಮ ಮನೆಗಳಲ್ಲಿ ಹೆಮ್ಮೆಯಿಂದ ರಾಷ್ಟ್ರಧ್ವಜವನ್ನು ಹಾರಿಸಲು ನಾಗರಿಕರನ್ನು ಪ್ರೇರೇಪಿಸುವ ಮೂಲಕ ಅವರ ಹೃದಯದಲ್ಲಿ ದೇಶಭಕ್ತಿಯನ್ನು ತುಂಬಲಿದೆ. ದಕ್ಷಿಣ ಜಲಿಯನ್ ವಾಲಾಬಾಗ್ ಎಂದೇ ಖ್ಯಾತಿ ಪಡೆದಿರುವ ವಿದುರಾಶ್ವತ ಕ್ಷೇತ್ರದಲ್ಲಿ 1938ರೆಲ್ಲಿ ದೇಶಕ್ಕಾಗಿ 33 ಮಂದಿ ವೀರರು ಪ್ರಾಣತ್ಯಾಗ ಮಾಡಿದ ಸ್ಥಳವಾಗಿದೆ. ಇದೇ ರೀತಿ ದೇಶದ 9ಕಡೆ ಸ್ವಾತಂತ್ರ್ಯಕ್ಕೆ ಹೋರಾಡಿ ಹುತಾತ್ಮರ ಸ್ಥಳಗಳಿವೆ ಎಂದು ತಿಳಿಸಿದರು.ಅಭಿಯಾನಕ್ಕೆ ಕೈಜೋಡಿಸಿನಗರ ಹಾಗೂ ಗ್ರಾಮೀಣ ಪ್ರದೇಶದ ಸಾರ್ವಜನಿಕರು ತಮ್ಮ ಮನೆಗಳ ಮೇಲೆ ಆ.13 ರಿಂದ 15 ರ ವರೆಗೆ ತ್ರಿವರ್ಣ ಧ್ವಜ ಹಾರಿಸಿ, ತಿರಂಗಾ ಅಭಿಯಾನದ ಛಾಯಾಚಿತ್ರಗಳನ್ನು ಮಾಡಬಹುದಾಗಿದೆ. ಸಾರ್ವಜನಿಕರು ಈ ತಿರಂಗಾ ಅಭಿಯಾನದಲ್ಲಿ ಕೈ ಜೋಡಿಸಿ ಮನೆಗಳ ಮೇಲೆ ತಿರಂಗಾ ಧ್ವಜ ಹಾರಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದುಯಲಹಂಕ ವಿಧಾನಸಭಾ ಕ್ಷೇತ್ರದ ಶಾಸಕ ವಿಶ್ವನಾಥ್ ಮಾತನಾಡಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ಸ್ವಾತಂತ್ರ ಸಂಭ್ರಮ ವೈವಿದ್ಯಮಯ ಮತ್ತು ವರ್ಣರಂಜಿತ ಆಚರಣೆಯ ಒಂದು ಭಾಗವಾಗಿ ಹರ್ ಘರ್ ತಿರಂಗಾ ಎಂಬ ಘೋಷವಾಕ್ಯದೊಂದಿಗೆ ಆ.13 ರಿಂದ 15 ರವರೆಗೆ ಪ್ರತಿ ಮನೆಮೇಲೆ ರಾಷ್ಟ್ರ ಧ್ವಜ ಹಾರಿಸಿ, ದೇಶಭಕ್ತಿ ದೇಶಾಭಿಮಾನ ಬಿಂಬಿಸುವ ಮೂಲಕ ನಮ್ಮ ರಾಷ್ಟ್ರ ಪ್ರೇಮ ಅಭಿವ್ಯಕ್ತಗೊಳಿಸಿ ದಾಖಲಿಸುವಂತೆ ಮನವಿ ಮಾಡಿದರು.ವಿಭಿನ್ನ ರ್ಯಾಲಿಗಳು:
ಬೆಂಗಳೂರು ನಿಂದ ಯಲಹಂಕ ದೊಡ್ಡಬಳ್ಳಾಪುರ ಗೌರಿಬಿದನೂರು ಹೊರವಲಯದ ಎಪಿಎಂಸಿ ಮಾರುಕಟ್ಟೆ ಸರ್ಕಲ್ ನಿಂದ ವಿಧುರಾಶ್ವಥದ ವೀರಸೌಧದದವರೆಗೆ ಬೈಕ್ ರ್ಯಾಲಿ ಮಾರ್ಗವಾಗಿ ‘ಹರ್ ಘರ್ ತಿರಂಗಾ’ ಅಭಿಯಾನ ಕಾರ್ಯಕ್ರಮಕ್ಕೆ ಯಾತ್ರೆಗಳನ್ನು ಆಯೋಜಿಸಲಾಗಿತ್ತು. ನಗರ ಹೊರವಲಯದಲ್ಲಿರುವ ತಾಲೂಕು ಕಚೇರಿ ಆವರಣದಲ್ಲಿ ವಾಟದಹೊಸಹಳ್ಳಿ ಕೆರೆ ಅಚ್ಚುಕಟ್ಟುದಾರರು ಅನಿರ್ದಿಷ್ಟತ ಮುಷ್ಕರ 7ನೆ ದಿನ ನಡೆಯುತ್ತಿದ್ದು ಇದೇ ಮಾರ್ಗವಾಗಿ ಬಂದ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ರವರಿಗೆ ವಾಟದಹೊಸಹಳ್ಳಿ ಕೆರೆ ನೀರು ಗೌರಿಬಿದನೂರು ನಗರಕ್ಕೆ ಹರಿಸದಂತೆ ರೈತರಿಂದ ಮನವಿ ಪತ್ರ ಸಲ್ಲಿಸಿದರು.ಸಮಾರಂಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸೀಕಲ್ ರಾಮಚಂದ್ರಗೌಡ, ಶಾಸಕ ಮುನಿರಾಜು, ರಾಜ್ಯಕಾರ್ಯದರ್ಶಿ ಸಿ.ಮುನಿರಾಜು, ಮಾಜಿ ಶಾಸಕ ರಾಜಣ್ಣ ಮಾಜಿ ಎಂಎಲ್ಸಿ ವೈ.ಎ.ನಾರಾಯಣಸ್ವಾಮಿ, ಮುಖಂಡರಾದ ಡಾ.ಹೆಚ್.ಎನ್.ಶಶಿಧರ್ ಕುಮಾರ್, ಎನ್.ಎಂ.ರವಿನಾರಾಯಣ ರೆಡ್ಡಿ, ಮಾಜಿ ಜಿಲ್ಲಾ ಅಧ್ಯಕ್ಷರು, ನಗರಸಭಾ ಸದಸ್ಯ ಮಾರ್ಕೆಟ್ ಮೋಹನ್, ಪುಣ್ಯವತಿ ಜಯಣ್ಣ ಮತ್ತು ಸಾರ್ವಜನಿಕರು ಭಾಗವಹಿಸಿದ್ದರು.