ಲಕ್ಷಕ್ಕೂ ಅಧಿಕ ಮನೆಗಳ ಮೇಲೆ ತಿರಂಗಾ!

KannadaprabhaNewsNetwork |  
Published : Aug 15, 2025, 01:00 AM IST
ಹುಬ್ಬಳ್ಳಿಯಲ್ಲಿ ಮನೆ ಮನೆಗಳ ಮೇಲೆ ರಾರಾಜಿಸುತ್ತಿರುವ ತ್ರಿವರ್ಣಧ್ವಜ. | Kannada Prabha

ಸಾರಾಂಶ

ರಾಜ್ಯ, ಜಿಲ್ಲೆಯಲ್ಲಿರುವ ಪ್ರತಿಯೊಂದು ಮನೆಯ ಮೇಲೆ ತಿರಂಗಾ ರಾರಾಜಿಸಬೇಕು ಎಂಬ ಉದ್ದೇಶದಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು 2022ರಲ್ಲಿ 75ನೇ ವರ್ಷದ ಸ್ವಾತಂತ್ರ್ಯೋತ್ಸವ ವೇಳೆ ಚಾಲನೆ ನೀಡಿದರು. ಇದಾದ ಬಳಿಕ ಎಲ್ಲ ರಾಜ್ಯಗಳಲ್ಲೂ ಈ ಹರ ಘರ್‌ ತಿರಂಗಾಕ್ಕೆ ಉತ್ತಮ ಸ್ಪಂದನೆ ದೊರೆಯುತ್ತಿದೆ.

ಹುಬ್ಬಳ್ಳಿ: ಜನರಲ್ಲಿ ದೇಶಾಭಿಮಾನ ಮೂಡಿಸುವ ಉದ್ದೇಶದಿಂದ ಬಿಜೆಪಿಯಿಂದ ಆಯೋಜಿಸಲಾಗಿರುವ ಹರ್‌ ಘರ್‌ ತಿರಂಗಾಕ್ಕೆ ಧಾರವಾಡದಲ್ಲೂ ಚಾಲನೆ ನೀಡಲಾಗಿದೆ. ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಲಕ್ಷಕ್ಕೂ ಅಧಿಕ ಧ್ವಜಗಳನ್ನು ಮನೆಮನೆಗೂ ವಿತರಿಸಲಾಗುತ್ತಿದೆ.

ರಾಜ್ಯ, ಜಿಲ್ಲೆಯಲ್ಲಿರುವ ಪ್ರತಿಯೊಂದು ಮನೆಯ ಮೇಲೆ ತಿರಂಗಾ ರಾರಾಜಿಸಬೇಕು ಎಂಬ ಉದ್ದೇಶದಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು 2022ರಲ್ಲಿ 75ನೇ ವರ್ಷದ ಸ್ವಾತಂತ್ರ್ಯೋತ್ಸವ ವೇಳೆ ಚಾಲನೆ ನೀಡಿದರು. ಇದಾದ ಬಳಿಕ ಎಲ್ಲ ರಾಜ್ಯಗಳಲ್ಲೂ ಈ ಹರ ಘರ್‌ ತಿರಂಗಾಕ್ಕೆ ಉತ್ತಮ ಸ್ಪಂದನೆ ದೊರೆಯುತ್ತಿದೆ.

ಆ. 13ರಿಂದ15ರ ವರೆಗೆ: ಆ. 13ರಿಂದ 15ರ ವರೆಗೆ ಮನೆ ಮನೆಗಳ ಮೇಲೆ ತ್ರಿವರ್ಣ ಧ್ವಜ ಹಾರಾಡಿಸುವ ಸಂಕಲ್ಪವನ್ನು ಬಿಜೆಪಿ ತೊಟ್ಟಿದ್ದು, ಈಗಾಗಲೇ ಹರ್‌ ಘರ್ ತಿರಂಗಾ ಯಶಸ್ಸಿಗಾಗಿ ಬಿಜೆಪಿಯಿಂದ ಕಳೆದ 6 ಮತ್ತು 7ರಂದು ಜಿಲ್ಲೆಯ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಸಭೆ ಮಾಡಿ ಒಂದು ವಾರದಿಂದಲೇ ಅಗತ್ಯ ಸಿದ್ಧತೆ ಹಾಗೂ ಪ್ರಚಾರ, ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳುತ್ತಾ ಬಂದಿದೆ.

ನರಗುಂದದಲ್ಲಿ ಚಾಲನೆ: ಆ. 9 ರಂದು ಗದಗ ಜಿಲ್ಲೆಯ ನರಗುಂದ ಪಟ್ಟಣದಲ್ಲಿ ಅಖಂಡ ಧಾರವಾಡ ಜಿಲ್ಲೆಯ ಹರ್‌ ಘರ್ ತಿರಂಗಾಕ್ಕೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಚಾಲನೆ ನೀಡಿದರು. ಬಳಿಕ ವಿವಿಧೆಡೆ ಜಾಗೃತಿ ಕಾರ್ಯಕ್ರಮ ನಡೆಸಲಾಯಿತು.

50 ಸಾವಿರ ಧ್ವಜ ವಿತರಣೆ: ವಾರದ ಹಿಂದೆಯೇ ಕೇಂದ್ರ ಸಚಿವ ಜೋಶಿ ಅವರು ಧಾರವಾಡ ಲೋಕಸಭಾ ಮತಕ್ಷೇತ್ರದಲ್ಲಿ ಮನೆಮನೆಗೂ ಧ್ವಜ ಹಂಚುವುದಕ್ಕಾಗಿ 50 ಸಾವಿರ ಧ್ವಜ ವಿತರಿಸಿದ್ದಾರೆ. ಪ್ರತಿ ಬೂತ್‌ಗೆ 50 ಧ್ವಜಗಳಂತೆ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಕನಿಷ್ಟ 20 ಸಾವಿರ ಮನೆಗಳ ಮೇಲೆ ತಿರಂಗಾ ಧ್ವಜ ಹಾರಿಸು‍ವ ಸಂಕಲ್ಪ ತೊಡಲಾಗಿದ್ದು, ಕಾರ್ಯಕರ್ತರು ಮನೆ ಮನೆಗಳಿಗೆ ತೆರಳಿ ಧ್ವಜ ವಿತರಿಸುತ್ತಿದ್ದಾರೆ.

ಜೋಶಿ ಅವರು 50 ಸಾವಿರ ಧ್ವಜ ವಿತರಣೆ ಜತೆ ಜತೆಗೆ ಕಾರ್ಯಕರ್ತರು, ಸಂಘ-ಸಂಸ್ಥೆಗಳು ಸಹ ದ್ವಜ ವಿತರಣೆಯಲ್ಲಿ ತೊಡಗಿವೆ. ಒಟ್ಟಾರೆಯಾಗಿ ಆ. 15ರಂದು ಜಿಲ್ಲೆಯಾದ್ಯಂತ ಮನೆ ಮನೆಗಳ ಮೇಲೆ ತಿರಂಗಾ ಹಾರಾಡಿಸಲು ಬಿಜೆಪಿ ಸಂಕಲ್ಪ ತೊಟ್ಟಿರುವುದಂತೂ ನಿಜ.

2022ರಲ್ಲಿ ಭಾರತಕ್ಕೆ ಸ್ವಾತಂತ್ರ್ಯ ದೊರೆತು 75 ವರ್ಷಾಚರಣೆ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರು ಹರ್ ಘರ್‌ ತಿರಂಗಾ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಆಗಿನಿಂದ ಪ್ರತಿವರ್ಷವೂ ಹರ್‌ ಘರ್‌ ತಿರಂಗಾ ಅಭಿಯಾನ ಹಮ್ಮಿಕೊಳ್ಳಲಾಗುತ್ತಿದೆ. ಈ ಅಭಿಯಾನಕ್ಕೆ ಎಲ್ಲರೂ ಕೈಜೋಡಿಸಿ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.

ಹರ್‌ ಘರ್‌ ತಿರಂಗಾ ಸಂಕಲ್ಪದೊಂದಿಗೆ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಜಾಗೃತಿ ನಡಿಗೆ ಹಮ್ಮಿಕೊಳ್ಳಲಾಗಿದೆ. ಪ್ರತಿಯೊಬ್ಬರ ಮನೆ, ಮನಗಳಲ್ಲಿ ಭಾರತಾಂಬೆ ರಾರಾಜಿಸುವಂತಾಗಲಿ ಎಂದು ಜಿಲ್ಲಾ ಬಿಜೆಪಿ ಗ್ರಾಮೀಣ ಘಟಕದ ಅಧ್ಯಕ್ಷ ನಿಂಗಪ್ಪ ಸುತಗಟ್ಟಿ ಹೇಳಿದರು.

PREV

Recommended Stories

ಹೆತ್ತವರ ಕನಸು ನನಸಾಗಿಸುವುದೇ ಮಕ್ಕಳ ಗುರಿಯಾಗಿರಲಿ: ಸಚಿವೆ ಹೆಬ್ಬಾಳ್ಕರ್
ರಾಜ್ಯದ ಅರ್ಥ ವ್ಯವಸ್ಥೆ ಆರೋಗ್ಯವಂತವಾಗಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್