ಬೈಂದೂರು ಯುವ ಮೋರ್ಚಾದಿಂದ ತಿರಂಗ ಯಾತ್ರೆ, ಬೈಕ್ ರ್‍ಯಾಲಿ

KannadaprabhaNewsNetwork |  
Published : Aug 12, 2025, 12:32 AM IST
11ತಿರಂಗ | Kannada Prabha

ಸಾರಾಂಶ

ಭಾರತೀಯ ಜನತಾ ಪಾರ್ಟಿಯ ಯುವ ಮೋರ್ಚಾ ಬೈಂದೂರು ಮಂಡಲ ವತಿಯಿಂದ ತಿರಂಗ ಯಾತ್ರೆ - ಬೃಹತ್ ಬೈಕ್ ರ್‍ಯಾಲಿಯನ್ನು ಮುಳ್ಳಿಕಟ್ಟೆಯಿಂದ ಮರವಂತೆ ಬೀಚ್ ವರೆಗೆ ನಡೆಯಿತು. ಬೈಂದೂರಿನ ಶಾಸಕ ಗುರುರಾಜ ಶೆಟ್ಟಿ ಗಂಟಿಹೊಳೆ ಅವರು ತಿರಂಗ ಯಾತ್ರೆಗೆ ಚಾಲನೆ ನೀಡಿದರು.

ಕನ್ನಡಪ್ರಭ ವಾರ್ತೆ ಬೈಂದೂರು

ಭಾರತೀಯ ಜನತಾ ಪಾರ್ಟಿಯ ಯುವ ಮೋರ್ಚಾ ಬೈಂದೂರು ಮಂಡಲ ವತಿಯಿಂದ ತಿರಂಗ ಯಾತ್ರೆ - ಬೃಹತ್ ಬೈಕ್ ರ್‍ಯಾಲಿಯನ್ನು ಮುಳ್ಳಿಕಟ್ಟೆಯಿಂದ ಮರವಂತೆ ಬೀಚ್ ವರೆಗೆ ನಡೆಯಿತು.

ಬೈಂದೂರಿನ ಶಾಸಕ ಗುರುರಾಜ ಶೆಟ್ಟಿ ಗಂಟಿಹೊಳೆ ಅವರು ತಿರಂಗ ಯಾತ್ರೆಗೆ ಚಾಲನೆ ನೀಡಿ, ಸ್ವಾತಂತ್ರ್ಯ ದಿನ ಹತ್ತಿರದಲ್ಲಿದೆ. ಅದಕ್ಕೆ ಮುನ್ನವೇ ತಿರಂಗ ಯಾತ್ರೆ, ಬೃಹತ್ ಬೈಕ್ ರ್‍ಯಾಲಿಯನ್ನು ಯಶಸ್ವಿಯಾಗಿ ನಡೆಸಲಾಗಿದೆ ಹಾಗೂ ಎಲ್ಲೆಡೆ ಸಂಭ್ರಮ ಮನೆ ಮಾಡಿದೆ. ಮನೆಮನಗಳಲ್ಲಿ ಹರ್‌ ಘರ್‌ ತಿರಂಗ ಅಭಿಯಾನ ನಡೆಯುತ್ತದೆ. ದೇಶದೆಲ್ಲೆಡೆ ನಡೆಯುತ್ತಿರುವ ತಿರಂಗ ಯಾತ್ರೆಯು ಗಮನ ಸೆಳೆಯುತ್ತಿದೆ ಎಂದರು.ಬೈಂದೂರು ಯುವ ಮೋರ್ಚಾ ಅಧ್ಯಕ್ಷ ಗಜೇಂದ್ರ ಎಸ್. ಬೇಲೆಮನೆ ಮಾತನಾಡಿ ಮುಳ್ಳಿಕಟ್ಟೆಯಿಂದ ತ್ರಾಸಿ ಮರವಂತೆ ಬೀಚ್‌ನಲ್ಲಿ ಹಮ್ಮಿಕೊಂಡ ತಿರಂಗ ಯಾತ್ರೆ, ಬೈಕ್ ರ್‍ಯಾಲಿಯಲ್ಲಿ ಹಲವಾರು ಜನ ಭಾಗವಹಿಸಿದ್ದಾರೆ. ಪ್ರತಿಯೊಬ್ಬರಿಗೂ ಅಭಿನಂದನೆ ಸಲ್ಲಿಸಿದರು.ಈ ಸಂದರ್ಭ ವಿಶೇಷವಾಗಿ ನಿವೃತ್ತ ಸೈನಿಕರನ್ನು ಸನ್ಮಾನಿಸಲಾಯಿತು. ಬೈಂದೂರು ಮಂಡಲ ಅಧ್ಯಕ್ಷೆ ಅನಿತಾ ಆರ್.ಕೆ., ಜಿಲ್ಲಾ ಉಪಾಧ್ಯಕ್ಷ ಸುಪ್ರಸಾದ್ ಶೆಟ್ಟಿ, ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ಬಿಲ್ಲಾಡಿ ಪೃಥ್ವಿರಾಜ್ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿ ಪ್ರಿಯದರ್ಶಿನಿ ಬಿಜೂರು, ಮಂಡಲದ ಪ್ರಧಾನ ಕಾರ್ಯದರ್ಶಿ ಕರಣ ಪೂಜಾರಿ, ತ್ರಾಸಿ ಪಂಚಾಯಿತಿ ಅಧ್ಯಕ್ಷ ಮಿಥುನ್ ದೇವಾಡಿಗ, ತ್ರಾಸಿ ಮಹಾಶಕ್ತಿ ಕೇಂದ್ರ ಅಧ್ಯಕ್ಷ ರವಿ ಖಾರ್ವಿ, ಜಿಲ್ಲಾ ಪದಾಧಿಕಾರಿಗಳು, ಮಂಡಲ ಪದಾಧಿಕಾರಿಗಳು, ವಿವಿಧ ಮೋರ್ಚಾಗಳ ಅಧ್ಯಕ್ಷರು, ಪದಾಧಿಕಾರಿಗಳು, ಮಹಾಶಕ್ತಿ ಕೇಂದ್ರ ಅಧ್ಯಕ್ಷರು, ಪದಾಧಿಕಾರಿಗಳು, ಶಕ್ತಿಕೇಂದ್ರ ಪ್ರಮುಖರು, ಕಾರ್ಯಕರ್ತ ಬಂಧುಗಳು, ಯುವಮೋರ್ಚಾದ ಪದಾಧಿಕಾರಿಗಳು ಮತ್ತು ನೂರಾರು ದೇಶಭಕ್ತರು ಉಪಸ್ಥಿತರಿದ್ದರು. ಯುವಮೋರ್ಚಾ ಪ್ರಧಾನ ಕಾರ್ಯದರ್ಶಿಯಾದ ರಾಜೇಶ್ ನಾವುಂದ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧವಾಗುತ್ತಾ ?
ಯಾವ ದೇವ್ರಿಗೆ ಪೂಜೆ ಮಾಡಿಸಿದ್ದೀರಿ? : ಮಧುಗೆ ರವಿ!