ಕನ್ನಡಪ್ರಭ ವಾರ್ತೆ ಹಾಸನ
ಒಂದು ಹಂತದಲ್ಲಿ ಸುಮಂತ್, ನೀನು ಬದುಕಬಾರದು, ಸಾಯಬೇಕು ಎಂದು ಕಿರುಕುಳ ನೀಡಿದ್ದನೆಂದು ಆರೋಪಿಸಲಾಗಿದೆ. ಈ ಮಾತುಗಳಿಂದ ತೀವ್ರ ನೊಂದ ಪ್ರಿಯಾಂಕ, ಕಳೆದ ಅಕ್ಟೋಬರ್ 30ರ ಗುರುವಾರ ರಾತ್ರಿ ಬೆಂಗಳೂರಿನ ಬಾಡಿಗೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಬೆಂಗಳೂರಿನ ಪೀಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆದರೆ ಘಟನೆ ನಡೆದು ವಾರವಾದರೂ ಆರೋಪಿ ಸುಮಂತ್ ಇನ್ನೂ ಬಂಧನವಾಗಿಲ್ಲವೆಂದು ಕುಟುಂಬದವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮೃತಳ ತಂದೆ ಜಯರಾಮ ನಾಯಕ್ ಕಣ್ಣೀರಿಟ್ಟು, ನಮ್ಮ ಮಗಳಂಥ ಪರಿಸ್ಥಿತಿ ಬೇರೆ ಹೆಣ್ಣುಮಕ್ಕಳಿಗೆ ಬಾರದಿರಲಿ. ಆತ ಪ್ರೀತಿಯ ಹೆಸರಿನಲ್ಲಿ ಕಿರುಕುಳ ನೀಡಿ ನಮ್ಮ ಮಗುವಿನ ಪ್ರಾಣ ಕಿತ್ತುಕೊಂಡಿದ್ದಾನೆ. ಆದರೆ ಇವತ್ತು ಊರಿನಲ್ಲಿ ರಾಜಾರೋಷವಾಗಿ ತಿರುಗುತ್ತಿದ್ದಾನೆ. ಕೂಡಲೇ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.ಗ್ರಾಮಸ್ಥರು ಸಹ ಆರೋಪಿಯ ವಿರುದ್ಧ ಕಿಡಿಕಾರಿದ್ದಾರೆ. ಸುಮಂತ್ ವಿರುದ್ಧ ಹಿಂದೆಯೂ ಹೆಣ್ಣುಮಕ್ಕಳಿಗೆ ಕಿರುಕುಳ ನೀಡಿದ ಬಗ್ಗೆ ದೂರುಗಳು ಬಂದಿದ್ದರೂ ಕ್ರಮ ಕೈಗೊಳ್ಳಲಾಗಿಲ್ಲವೆಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರಿಯಾಂಕ ಬುದ್ಧಿವಂತ, ಸ್ವಾಭಿಮಾನಿ ಹುಡುಗಿ ಎಂದು ಪರಿಚಯಸ್ಥರು ಹೇಳಿದ್ದು, ತಾನು ಜೀವನ ಕಟ್ಟಿಕೊಳ್ಳಬೇಕೆಂಬ ಆಸೆಯಿಂದ ಕೆಲಸ ಹುಡುಕಿಕೊಂಡು ಬೆಂಗಳೂರಿಗೆ ಹೋಗಿದ್ದಳು. ಆದರೆ ಕಿರುಕುಳಕ್ಕೆ ಬಲಿಯಾಗಿದ್ದಾಳೆ ಎಂದು ಕಣ್ಣೀರಿಟ್ಟಿದ್ದಾರೆ.