ಕನ್ನಡಪ್ರಭ ವಾರ್ತೆ ಬೆಂಗಳೂರು
ಈಜೀಪುರ ನಿವಾಸಿ ಮೇಘನಾ ಶೆಟ್ಟಿ(27) ಮೃತ ಟೆಕಿ. ಶುಕ್ರವಾರ ರಾತ್ರಿ ಈ ಘಟನೆ ನಡೆದಿದೆ. ಮೃತಳ ಪೋಷಕರು ಅಳಿಯ ಸುದೀಪ್ (30) ವಿರುದ್ಧ ವರಕ್ಷಿಣೆ ಕಿರುಕುಳ ಆರೋಪದ ಮಾಡಿದ್ದು, ದೂರು ನೀಡಿದ್ದಾರೆ. ಈ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿ ಸುದೀಪ್ನನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಆಧಿಕಾರಿಗಳು ತಿಳಿಸಿದ್ದಾರೆ.
ಉಡುಪಿ ಜಿಲ್ಲೆ ಕುಂದಾಪುರ ಮೂಲದ ಮೇಘನಾ ಶೆಟ್ಟಿ ಸಾಫ್ಟ್ವೇರ್ ಎಂಜಿನಿಯರ್ ಆಗಿದ್ದರು. ಕಳೆದ ಮೂರು ವರ್ಷಗಳ ಹಿಂದೆ ಸಾಫ್ಟ್ವೇರ್ ಎಂಜಿನಿಯರ್ ಸುದೀಪ್ನನ್ನು ಮದುವೆಯಾಗಿದ್ದರು. ದಂಪತಿಗೆ ಒಂದು ವರ್ಷದ ಮಗುವಿದೆ. ದಂಪತಿ ಖಾಸಗಿ ಕಂಪನಿಗಳಲ್ಲಿ ಕೆಲಸ ಮಾಡುತ್ತಿದ್ದರು. ಈಜೀಪುರದ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು.ಆರಂಭದಲ್ಲಿ ದಂಪತಿ ಅನ್ಯೋನ್ಯವಾಗಿದ್ದರು. ಕೆಲ ತಿಂಗಳಿಂದ ಕೌಟುಂಬಿಕ ವಿಚಾರಕ್ಕೆ ದಂಪತಿ ಜಗಳವಾಡುತ್ತಿದ್ದರು. ಪತಿ ಸುದೀಪ್, ಕಾರು ಸೇರಿದಂತೆ ಕೆಲವೊಂದು ವಸ್ತುಗಳನ್ನು ಖರೀದಿಸಬೇಕು. ನಿನ್ನ ಸಂಬಳವನ್ನು ತನಗೆ ನೀಡುವಂತೆ ಮೇಘನಾ ಶೆಟ್ಟಿಗೆ ಒತ್ತಾಯಿಸುತ್ತಿದ್ದ. ಇದಕ್ಕೆ ಮೇಘನಾ ಶೆಟ್ಟಿ ನಿರಾಕರಿಸಿದ್ದರು. ಈ ವಿಚಾರವಾಗಿ ದಂಪತಿ ನಡುವೆ ಆಗಾಗ ಜಗಳವಾಗುತ್ತಿತ್ತು ಎಂದು ತಿಳಿದು ಬಂದಿದೆ.