ಜೋಯಿಡಾ: ತಾಲೂಕಿನ ರಾಮನಗರದ ಪೊಲೀಸ್ ಠಾಣೆ ಎದುರು ವ್ಯಕ್ತಿಯೊಬ್ಬ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಶುಕ್ರವಾರ ಯತ್ನಿಸಿದ್ದು, ಪೊಲೀಸರ ಸಕಾಲಿಕ ಕ್ರಮದಿಂದ ವ್ಯಕ್ತಿ ಬದುಕಿದ್ದು, ಚಿಕಿತ್ಸೆಗೆ ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಪೊಲೀಸರ ಕಿರಿಕಿಯಿಂದ ಆರೋಪಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎನ್ನಲಾಗಿದ್ದು, ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ವಿಡಿಯೋ ಮಾಡಿದ ಆರೋಪಿ: ಗಾಯಾಳು ಭಾಸ್ಕರನನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಳಗಾವಿಗೆ ಕರೆದೊಯ್ಯುತ್ತಿದ್ದಾಗ ವಿಡಿಯೋ ಮಾಡಿದ್ದು, ಅದೀಗ ವೈರಲ್ ಆಗಿದೆ. ಈ ಹಿಂದೆ ಜೂಜಾಟದ ಪ್ರಕರಣದಲ್ಲಿ ₹3.60 ಲಕ್ಷ ಹಣವನ್ನು ಪೊಲೀಸರು ಭಾಸ್ಕರನಿಂದ ವಶಪಡಿಸಿಕೊಂಡಿದ್ದರು. ಆದರೆ ಪೊಲೀಸ್ ಅಧಿಕಾರಿಗಳು ಎಫ್ಐಆರ್ನಲ್ಲಿ ಕೇವಲ ₹36 ಸಾವಿರ ಎಂದು ನಮೂದಿಸಿದ್ದರು. ಇದನ್ನು ಭಾಸ್ಕರ ಪ್ರಶ್ನಿಸಿದ್ದ. ಅಲ್ಲದೆ, ಮೇಲಧಿಕಾರಿಗಳ ಗಮನಕ್ಕೆ ತಂದಾಗ ಸಾಕಷ್ಟು ಕಿರಿಕಿರಿ ಮಾಡಿದ್ದರು ಎಂದು ವಿಡಿಯೋದಲ್ಲಿ ಹೇಳಿದ್ದಾನೆ.ಅಕ್ರಮವಾಗಿ ಸಾಗಿಸುತ್ತಿದ್ದ ಜಾನುವಾರುಗಳ ವಶ
ಸಿದ್ದಾಪುರ: ಯಾವುದೇ ಪರವಾನಗಿ ಇಲ್ಲದೇ, ವಧೆ ಮಾಡುವ ಉದ್ದೇಶದಿಂದ ಟಾಟಾ ಪಿಕಪ್ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ೬ ಹೋರಿಗಳ ಸಮೇತ ಆರೋಪಿಗಳನ್ನು ವಶಪಡಿಸಿಕೊಂಡ ಘಟನೆ ಜೂ. ೧೪ರ ಬೆಳಗಿನ ಜಾವ ಮಾವಿನಗುಂಡಿ ಚೆಕ್ಪೋಸ್ಟ್ನಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದಾಗ ಜರುಗಿದೆ. ಶಿಕಾರಿಪುರ ತಾಲೂಕಿನ ಆರೋಪಿತರಾದ ಅಸೀಪ್, ದೇವರಾಜ್, ಮಧುಕೇಶ್, ಮಂಜುನಾಥ ಎಂಬವರ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.