ಕನ್ನಡಪ್ರಭ ವಾರ್ತೆ ವಿಜಯಪುರ
ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿ ಕ್ಷೇಮಪಾಲನ ನಿರ್ದೇಶನಾಲಯದ ಆಶ್ರಯದಲ್ಲಿ ಬುಧವಾರ ೨೦೨೩-೨೪ನೇ ಸಾಲಿನಲ್ಲಿ ಪ್ರಥಮ ವರ್ಷಕ್ಕೆ ಪ್ರವೇಶ ಪಡೆದ ವಿದ್ಯಾರ್ಥಿನಿಯರಿಗೆ ಸ್ವಾಗತ ಕೋರುವ ಪುತ್ರಿಯರ ದಿನ - ಸ್ಪಂದನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸಾಧನೆ ಮಾಡಲು ಕಲಿಕೆಯ ಹಸಿವಿರಬೇಕು, ಹಾಗೆಯೇ ಸಾಧಿಸುವ ಛಲವು ಇರಬೇಕು. ಆಗ ನಮ್ಮ ಗುರಿ ತಲುಪಲು ಸಾಧ್ಯವಾಗುತ್ತದೆ. ಪರಿಶ್ರಮವಿಲ್ಲದೆ ಯಾವುದೇ ಸಾಧನೆ ಮಾಡಲು ಸಾಧ್ಯವಿಲ್ಲ ಎಂದರು.
ನೀವು ಗುರಿಯನ್ನು ತಲುಪಲು ಅನೇಕ ಅಡೆತಡೆಗಳು ಎದುರಾಗುತ್ತವೆ. ಆ ಅಡೆತಡೆಗಳನ್ನು ಎದುರಿಸಿ ನಿಲ್ಲಬೇಕು. ಜೊತೆಗೆ ನೀವು ಪರಿಶ್ರಮಪಟ್ಟರೆ ಮಾತ್ರ ಯಶಸ್ಸನ್ನು ಹೊಂದಲು ಸಾಧ್ಯವಾಗುತ್ತದೆ ಎಂದರು.ನಮ್ಮ ಯಶಸ್ಸನ್ನು, ನಮ್ಮ ಗುರಿಯನ್ನು ತುಳಿಯಲು ಅನೇಕ ಜನರು ಕಾಯುತ್ತಾ ಕುಳಿತಿರುತ್ತಾರೆ. ನಮ್ಮನ್ನು ಅವಮಾನ ಮಾಡುವವರ ಮುಂದೆ ನಾವು ತಲೆ ಎತ್ತಿ ನಿಲ್ಲಬೇಕು. ನಮಗೆ ಅವಮಾನ ಮಾಡಿದವರನ್ನು ಎಂದಿಗೂ ಮರೆಯಬಾರದು. ನಮ್ಮ ಸಾಮರ್ಥ್ಯದ ಪರಿಚಯವನ್ನು ಅವರಿಗೆ ಮಾಡಿಸಬೇಕು. ಅಷ್ಟೇ ಅಲ್ಲದೇ ನಾವು ಏನನ್ನು ಮಾಡಲು ಹೊರಟಿದ್ದೇವೆ ಎಂಬುದರ ಸ್ಪಷ್ಟತೆ ನಮಗಿರಬೇಕು. ವಯಸ್ಸಿನಲ್ಲಿ ತಪ್ಪು ಮಾಡುವುದ ಸಹಜ. ಆದರೆ ನಮ್ಮ ಗುರಿಯನ್ನು ಮರೆತು, ಪ್ರೀತಿ ಪ್ರೇಮ ಎಂಬ ಅಮಲಿಗೆ ಬಿದ್ದು ನಿಮ್ಮ ತಂದೆ-ತಾಯಿಯ ಕನಸನ್ನು ಹುಸಿಗೊಳಿಸಬೇಡಿ. ನಿಮ್ಮ ಗುರಿಯತ್ತ ನಿಮ್ಮ ಲಕ್ಷ್ಯವಿರಲಿ ಎಂದರು.
ವಿವಿಯ ವಿವಿಧ ವಿಭಾಗಗಳ ಮುಖ್ಯಸ್ಥರು, ಡೀನರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗ ಹಾಗೂ ಸಂಶೋಧನಾ ವಿದ್ಯಾರ್ಥಿನಿಯರು, ಸ್ನಾತಕ ಮತ್ತು ಸ್ನಾತಕೋತ್ತರ ವಿದ್ಯಾರ್ಥಿನಿಯರು ಮತ್ತಿತರರು ಉಪಸ್ಥಿತರಿದ್ದರು. ವಿದ್ಯಾರ್ಥಿ ಕ್ಷೇಮಪಾಲನ ನಿರ್ದೇಶನಾಲಯದ ನಿರ್ದೇಶಕಿ ಪ್ರೊ.ಶಾಂತಾದೇವಿ.ಟಿ ಸ್ವಾಗತಿಸಿದರು. ಡಾ.ಭಾರತಿ ಗಾಣಿಗೇರ ಅತಿಥಿಗಳನ್ನುಪರಿಚಯಿಸಿದರು. ವಿದ್ಯಾರ್ಥಿ ಕ್ಷೇಮಪಾಲನ ನಿರ್ದೇಶನಾಲಯದ ಸಹಾಯಕ ನಿರ್ದೇಶಕಿ ಡಾ.ಅಶ್ವಿನಿ ಕೆ.ಎನ್. ನಿರೂಪಿಸಿದರು. ಅರ್ಥಶಾಸ್ತ್ರ ವಿಭಾಗದ ವಿದ್ಯಾರ್ಥಿನಿ ಆಶಾ ಭಾವಿಕರ ವಂದಿಸಿದರು.