ಬೃಹತ್ ಮೈಸೂರು ಮಹಾನಗರ ಪಾಲಿಕೆ ತೀರ್ಮಾನಕ್ಕೆ ಜಿಟಿಡಿ ಸ್ವಾಗತ

KannadaprabhaNewsNetwork |  
Published : Nov 28, 2025, 01:06 AM IST
29 | Kannada Prabha

ಸಾರಾಂಶ

ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ. ದೇವೇಗೌಡ ಸ್ವಾಗತ

ಕನ್ನಡಪ್ರಭ ವಾರ್ತೆ ಮೈಸೂರು

ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕ ಸರ್ಕಾರವು 4 ಪಟ್ಟಣ ಪಂಚಾಯತ್, 1 ನಗರಸಭೆ ಹಾಗೂ 8 ಗ್ರಾಮ ಪಂಚಾಯಿತಿಗಳನ್ನು ಒಳಗೊಂಡಂತೆ ಮೈಸೂರು ಮಹಾನಗರ ಪಾಲಿಕೆಯನ್ನು ಬೃಹತ್ ಮೈಸೂರು ಮಹಾನಗರ ಪಾಲಿಕೆಯನ್ನಾಗಿ ಮೇಲ್ದರ್ಜೆಗೆರಿಸಲು ತೀರ್ಮಾನಿಸಿರುವುದಕ್ಕೆ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ. ದೇವೇಗೌಡ ಸ್ವಾಗತಿಸಿ, ಸರ್ಕಾರವನ್ನು ಅಭಿನಂದಿಸಿದ್ದಾರೆ. ಈ ಹಿಂದೆ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 4 ಪಟ್ಟಣ ಪಂಚಾಯತ್ ಹಾಗೂ 1 ನಗರಸಭೆಯನ್ನು ಮೇಲ್ದರ್ಜೆ ಗೆರಿಸಲಾಗಿತ್ತು. ಈಗ ಬೃಹತ್ ಮೈಸೂರು ಮಹಾನಗರ ಪಾಲಿಕೆಯನ್ನಾಗಿ ಮೇಲ್ದರ್ಜೆಗೆರಿಸಲು ಸಚಿವ ಸಂಪುಟ ತೀರ್ಮಾನಿಸಿರುವುದಕ್ಕಾಗಿ ವಿಶೇಷವಾಗಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಸಚಿವ ಸಂಪುಟದ ಎಲ್ಲ ಸಹದ್ಯೋಗಿಗಳಿಗೆ ಅವರು ತುಂಬು ಹೃದಯದ ಅಭಿನಂದನೆ ಸಲ್ಲಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

10 ಪ್ಯಾರಾದಲ್ಲಿ ಕೇಂದ್ರ ವಿರುದ್ಧ ಟೀಕಾ ಪ್ರಹಾರ
ಬೇಡಿಕೆಗೆ ತಕ್ಕಷ್ಟು ಬರುತ್ತಿಲ್ಲ ಮೈಸೂರು ರೇಷ್ಮೆ ಸೀರೆ