ಕನ್ನಡಪ್ರಭ ವಾರ್ತೆ ಕುಮಟಾ
ಮೂರೂರಿನ ಪ್ರಗತಿ ವಿದ್ಯಾಲಯದಲ್ಲಿ ಪ್ರಸಕ್ತ ಸಾಲಿನ ಶಾಲಾ ಪ್ರಾರಂಭೋತ್ಸವ ಉದ್ಘಾಟಿಸಿ ಮಾತನಾಡಿದರು.
ಉಚ್ಛ ನ್ಯಾಯಾಲಯದ ಹಿರಿಯ ವಕೀಲ ಜಿ.ಕೆ. ಭಟ್ಟ ಮಾತನಾಡಿ, ಆಧುನಿಕ ಬದುಕಿಗೆ ತಕ್ಕಂತೆ ಜನರ ಆಸೆ- ಆಕಾಂಕ್ಷೆಗಳು ಬದಲಾಗಿದ್ದು ಮಕ್ಕಳಲ್ಲಿ ಮೌಲ್ಯಗಳು, ಜನರಲ್ಲಿ ಮಾನವೀಯತೆಗಳು ಮರೆಯಾಗಿವೆ. ಮೊಬೈಲ್ ಅತಿಬಳಕೆಯಿಂದ ಕೆಲಸದಲ್ಲಿ ಶ್ರದ್ಧೆ, ಜೀವನದಲ್ಲಿ ನೆಮ್ಮದಿ ಇಲ್ಲವಾಗಿದೆ. ಇದನ್ನೆಲ್ಲಾ ನಿಯಂತ್ರಿಸಬೇಕು ಎಂದರು.ಅಧ್ಯಕ್ಷತೆ ವಹಿಸಿದ್ದ ವಿದ್ಯಾನಿಕೇತನ ಸಂಸ್ಥೆಯ ಕಾರ್ಯಾಧ್ಯಕ್ಷ ಆರ್.ಜಿ. ಭಟ್ಟ ಮಾತನಾಡಿ, ಗ್ರಾಮೀಣ ಭಾಗದ ನಮ್ಮ ಶಾಲೆಯಲ್ಲಿ ಮಕ್ಕಳ ಕಲಿಕೆಗೆ ಬೇಕಾದ ಅಗತ್ಯ ವಾತಾವರಣವನ್ನು ಅನೂಕೂಲತೆ ಕಲ್ಪಿಸಿದ್ದೇವೆ. ಜೊತೆಗೆ ಸಂಸ್ಕಾರಯುತ ಶಿಕ್ಷಣವನ್ನು ನೀಡುತ್ತಿದ್ದೇವೆ. ಇನ್ನೂ ಹೆಚ್ಚಿನ ಮಕ್ಕಳು ಈ ಅವಕಾಶವನ್ನು ಪಡೆದುಕೊಳ್ಳುವಂತಾಗಲಿ ಎಂದರು.
ಪೂರ್ವ ವಿದ್ಯಾರ್ಥಿ ಸಂಘದ ಕೊಡುಗೆಯಾಗಿ ಸ್ಮಾರ್ಟ್ ಟಿವಿಯನ್ನು ಶಾಲೆಗೆ ಹಸ್ತಾಂತರಿಸಲಾಯಿತು. ಬೆಂಗಳೂರಿನ ಭಾರತ ಸಂಸ್ಕೃತಿ ಪ್ರಕಾಶನದ ವತಿಯಿಂದ ಸನಾತನ ಸಂಸ್ಕೃತಿಯ ಪುಸ್ತಕಗಳನ್ನು ವಿದ್ಯಾರ್ಥಿಗಳಿಗೆ ಉಚಿತವಾಗಿ ವಿತರಿಸಲಾಯಿತು. ಶಿಕ್ಷಣ ವಿಭಾಗದ ಸಂಚಾಲಕ ಟಿ.ಆರ್. ಜೋಶಿ ಪ್ರಾಸ್ತಾವಿಕ ಮಾತನಾಡಿದರು. ಕಾರ್ಯದರ್ಶಿ ಗಣೇಶ ಭಟ್ಟ ವಂದಿಸಿದರು. ಶಿಕ್ಷಕ ರಾಘವೇಂದ್ರ ಭಟ್ಟ ನಿರೂಪಿಸಿದರು.