ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಇಲ್ಲಿನ ಜೆಎನ್ಎನ್ಸಿಇ ಕಾಲೇಜಿನಲ್ಲಿ ಭಾರತ ಸರ್ಕಾರದ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಚಿವಾಲಯ ಅಧೀನದ ಬೆಂಗಳೂರಿನ ಎಂಎಸ್ಎಂಇ ಅಭಿವೃದ್ಧಿ ಮತ್ತು ಸೌಲಭ್ಯ ಕಚೇರಿ, ಜಿಲ್ಲಾ ಕೈಗಾರಿಕಾ ಕೇಂದ್ರ ಸಹಯೋಗದಲ್ಲಿ ಗುರುವಾರ ಏರ್ಪಡಿಸಿದ್ದ ‘ವಿಶ್ವಕರ್ಮ ಯೋಜನೆಯಡಿ ಬ್ರ್ಯಾಂಡಿಂಗ್ ಮತ್ತು ಮಾರ್ಕೆಟಿಂಗ್’ ಕುರಿತ ಒಂದು ದಿನದ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಸಾಂಪ್ರದಾಯಿಕ ಕುಶಲಕರ್ಮಿಗಳು ಹಾಗೂ ಕರಕುಶಲ ವೃತ್ತಿದಾರರ ಆರ್ಥಿಕ ಸಬಲೀಕರಣದ ಉದ್ದೇಶದಿಂದ ಈ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕೌಶಲ್ಯಕ್ಕೆ ಅತಿ ಹೆಚ್ಚಿನ ಮಹತ್ವ ಇದೆ. ಹಿಂದೆಲ್ಲ ಕೌಶಲ್ಯ ವಂಶಪಾರಂಪರ್ಯವಾಗಿ ಬರುತ್ತಿತ್ತು. ಈಗ ಹಾಗಿಲ್ಲ. ಕೌಶಲ್ಯದಲ್ಲ್ಲಿ ಉತ್ಸುಕತೆ ಇರುವವರಿಗೆ ಕಲಿಯುವ, ಅದರಲ್ಲಿ ತೊಡಗಿಸಿಕೊಳ್ಳುವ ವ್ಯವಸ್ಥೆ ಇದೆ. ಸರ್ಕಾರ ಕುಶಲಕರ್ಮಿಗಳಿಗಾಗಿ ಮೂಲ ವ್ಯವಸ್ಥೆ, ಬ್ಯಾಂಕ್ ಸಾಲ, ಸಬ್ಸಿಡಿ ಮೂಲಕ ಆರ್ಥಿಕ ಸಬಲೀಕರಣ, ತರಬೇತಿ ಮತ್ತು ಮಾರುಕಟ್ಟೆ ಸೌಲಭ್ಯಗಳನ್ನು ಸಹ ನೀಡುತ್ತಿದ್ದು ಕುಶಲಕರ್ಮಿಗಳು ಇದರ ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.ಎಂಎಸ್ಎಂಇ ಡಿಎಫ್ಒ, ಸಹಾಯಕ ನಿರ್ದೇಶಕ ಶಿವಕುಮಾರ್ ಮಾತನಾಡಿ, ಪಿಎಂ ವಿಶ್ವಕರ್ಮ ಯೋಜನೆಯಡಿ ಕುಶಲಕರ್ಮಿಗಳಿಗೆ ₹3 ಲಕ್ಷದವರೆಗೆ ಶೇ.5 ಬಡ್ಡಿ ದರದಲ್ಲಿ ಸಾಲ ಸೌಲಭ್ಯ ದೊರಕಲಿದೆ. ಪಿಎಂಇಜಿಪಿ ಯೋಜನೆಯಡಿ ಶೇ.15 ರಿಂದ 30 ಸಬ್ಸಿಡಿಯೊಂದಿಗೆ ₹50 ಲಕ್ಷದವರೆಗೆ ಸಾಲ ಸೌಲಭ್ಯ ದೊರೆಯಲಿದೆ. ಬ್ಯಾಂಕುಗಳ ತಮ್ಮ ಕೌಶಲ್ಯದ ಆಧಾರದ ಮೇಲೆ ಸಾಲ ನೀಡಲಿದ್ದು, ಕೌಶಲ್ಯವನ್ನು ಅತ್ಯುತ್ತಮವಾಗಿ ಬಳಕೆ ಮಾಡಿಕೊಂಡು ಸಾಲ ಪಡೆದ ಉದ್ದೇಶಕ್ಕಾಗಿಯೇ ಅದನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
ಅರುಣ ಕುಮಾರ್ ಮಾತನಾಡಿ, ವಿಶ್ವಕರ್ಮ ಯೋಜನೆಯಡಿ ನೋಂದಣಿಯಾಗಿ ತರಬೇತಿ ಪಡೆದು, ಪರೀಕ್ಷೆ ಮೂಲಕ ಅರ್ಹತೆ ಪಡೆದ ನಂತರ ಕಡಿಮೆ ಬಡ್ಡಿ ದರದಲ್ಲಿ ₹2 ರಿಂದ ₹3 ಲಕ್ಷ ಸಾಲ ಸೌಲಭ್ಯ, ₹4 ಸಾವಿರ ಸ್ಟೈಫಂಡ್ ಮತ್ತು ₹15 ಸಾವಿರ ಮೌಲ್ಯದ ಟೂಲ್ ಕಿಟ್ ನೀಡಿ ನಂತರ ಮುಂದುವರಿದ ತರಬೇತಿ ನೀಡಲಾಗುವುದು ಎಂದರು.
- - -
- ಡಾ. ವೈ.ವಿಜಯಕುಮಾರ್, ಪ್ರಾಂಶುಪಾಲ.
-15ಎಸ್ಎಂಜಿಎಕೆಪಿ03: