ಕನ್ನಡಪ್ರಭ ವಾರ್ತೆ ಮದ್ದೂರು
ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಂಬಾಕು ನಿಯಂತ್ರಣ ಕೋಶ, ರಾಷ್ಟ್ರೀಯ ಬಾಯಿ ಆರೋಗ್ಯ ಕಾರ್ಯಕ್ರಮ ಮತ್ತು ತಾಲೂಕು ಆರೋಗ್ಯ ಅಧಿಕಾರಿಗಳ ಸಹಯೋಗದಲ್ಲಿ ನಡೆದ ವಿಶ್ವ ತಂಬಾಕು ರಹಿತ ದಿನದ ಅಂಗವಾಗಿ ವಿದ್ಯಾರ್ಥಿಗಳ ಜಾಗೃತಿ ಜಾಥಾಗೆ ಚಾಲನೆ ನೀಡಿ ಮಾತನಾಡಿದರು.
ತಂಬಾಕಿನಲ್ಲಿ ಸುಮಾರು ನಾಲ್ಕು ಸಾವಿರಕ್ಕೂ ಹೆಚ್ಚು ಹಾನಿಕಾರಕ ರಾಸಾಯನಿಕಗಳಿದ್ದು, ಇವುಗಳಲ್ಲಿ ಅನೇಕ ವಸ್ತುಗಳು ಕ್ಯಾನ್ಸರ್ ಕಾಯಿಲೆಗಳಿಗೆ ಮಾರಕವಾಗಿದೆ. ಇತ್ತೀಚಿನ ದಿನಗಳಲ್ಲಿ ಹಣದ ಆಮಿಷಕ್ಕೆ ಜನರು ಗಾಂಜಾ, ಕೊಕೇನ್, ಬ್ರೌನ್ ಶುಗರ್ ಮತ್ತು ಅಫೀಮುನಂತಹ ಮಾದಕ ವಸ್ತುಗಳನ್ನು ಬೆಳೆಯುತ್ತಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದರು.ಇವುಗಳ ಸೇವನೆಯಿಂದ ಕ್ಯಾನ್ಸರ್, ಹೃದಯಘಾತ ಮತ್ತು ಶ್ವಾಸಕೋಶದ ಮೇಲೆ ದುಷ್ಪರಿಣಾಮ ಉಂಟಾಗುವುದರೊಂದಿಗೆ ಅಕಾಲಿಕ ಮರಣಕ್ಕು ಕಾರಣವಾಗುತ್ತದೆ ಎಂದರು.
ಕಾರ್ಯಕ್ರಮದಲ್ಲಿ ವಕೀಲರ ಸಂಘದ ಅಧ್ಯಕ್ಷ ಎಂ.ಎನ್.ಶಿವಣ್ಣ, ತಾಲೂಕು ಆರೋಗ್ಯ ಅಧಿಕಾರಿ ಡಾ.ರವಿಶಂಕರ್, ದಂತ ವೈದ್ಯರಾದ ಡಾ.ವೆಂಕಟೇಶ್, ಆರೋಗ್ಯ ಇಲಾಖೆಯ ಎಸ್.ಕೆ.ತಮ್ಮೇಗೌಡ, ಮರಿಸ್ವಾಮಿ, ಎಚ್.ಎಂ.ಮಣಿ, ಉಷಾ ಮತ್ತು ಸಿಬ್ಬಂದಿ, ಆಶಾ ಕಾರ್ಯಕರ್ತರು ಮತ್ತು ಸರ್ಕಾರಿ ಪ್ರೌಢಶಾಲೆ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಮದ್ದೂರು:ಗಾಂಜಾ ಮಿಶ್ರಿತ ಸಿಗರೇಟ್ ಸೇವನೆ ಮಾಡುತ್ತಿದ್ದ ಯುವಕನಿಗೆ ಪಟ್ಟಣದ ಜೆಎಂಎಫ್ಸಿ ನ್ಯಾಯಾಲಯ 10 ಸಾವಿರ ರು. ದಂಡ ವಿಧಿಸಿ ಆದೇಶ ಹೊರಡಿಸಿದೆ.
ಮನೋಜ್ ವಿರುದ್ಧ ರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಕಾಯ್ದೆ ಅಡಿ ಪ್ರಕರಣದಾಖಲಿಸಿದ ನಂತರ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಲಾಗಿತ್ತು. ನಂತರ ನ್ಯಾಯಾಧೀಶರು ವಿಚಾರಣೆ ನಡೆಸಿ ದಂಡ ವಿಧಿಸಿದ್ದಾರೆ.