ಕನ್ನಡಪ್ರಭ ವಾರ್ತೆ ಬೆಳಗಾವಿ
ಕಾಶೀ ಜಗದ್ಗುರು ಡಾ.ಚಂದ್ರಶೇಖರ ಶಿವಾಚಾರ್ಯ ಮಹಾಭಗತ್ಪಾದರು ಸಾನ್ನಿಧ್ಯ, ಬಂಕಾಪುರ ಅರಳೆಲೆ ಹಿರೇಮಠದ ರೇವಣಸಿದ್ದೇಶ್ವರ ಶಿವಾಚಾರ್ಯರು ಅಧ್ಯಕ್ಷತೆ ವಹಿಸುವರು. ಕನ್ನಡಪ್ರಭ ಹಾಗೂ ಸುವರ್ಣ ನ್ಯೂಸ್ನ ಬಹರೇನ್ ಇಂಡಿಯಾ ಇಂಟರ್ನ್ಯಾಷನಲ್ ಅವಾರ್ಡ್-2024 ಪ್ರಶಸ್ತಿ ಪುರಸ್ಕೃತ, ನಿವೃತ್ತ ಮುಖ್ಯ ಇಂಜನಿಯರ್ ಶಿವಯೋಗಿ ಹಿರೇಮಠಗೆ-ಧರ್ಮಸೇವಾ ದುರಂಧರ, ಹಿರಿಯ ಪತ್ರಕರ್ತೆ ರಶ್ಮಿ.ಎಸ್ ಅವರಿಗೆ-ಮಾಧ್ಯಮ ಸಿರಿ, ಶಿಗ್ಗಾಂವಿ ಪುರಸಭೆ ಅಧ್ಯಕ್ಷ ಸಿದ್ಧಾರ್ಥ ಹನುಮಂತಗೌಡ ಪಾಟೀಲಗೆ ಸಮಾಜ ಸೇವಾ ರತ್ನ, ಶಿಕ್ಷಕಿ ಸುಮಿತ್ರಾ ರುದ್ರಣ್ಣ ಚಂದರಗಿಗೆ ಆದರ್ಶ ಶಿಕ್ಷಕಿ, ಭುವನ್ ಗದ್ದಿಗೆ ಯುವ ಕ್ರೀಡಾ ಸಿರಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು.
ಬಿಜೆಪಿ ಯುವ ಮುಖಂಡ ರುದ್ರಣ್ಣ ಚಂದರಗಿ ಅವರಿಂದ ತುಲಾಬಾರ ಸೇವೆ ನಡೆಯುವುದು. ಮುಖ್ಯ ಅತಿಥಿಗಳಾಗಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಮಾಜಿ ಸಿಎಂ ಹಾಗೂ ಹಾಲಿ ಸಂಸದ ಬಸವರಾಜ ಎಸ್.ಬೊಮ್ಮಾಯಿ, ಸಿ.ಬಿ.ಯಲಿಗಾರ ಸೇವಾ ಸಂಸ್ಥೆಯ ಅಧ್ಯಕ್ಷ ಶಶಿಧರ ಚ.ಯಲಿಗಾರ, ಉದ್ಯಮಿ ನರಹರಿ ಕಟ್ಟಿ, ಶಿಗ್ಗಾಂವಿ ತಾಲೂಕು ಬಿಜೆಪಿ ಅಧ್ಯಕ್ಷ ಶಿವಾನಂದ ಮ್ಯಾಗೇರಿ, ಹಾವೇರಿ ಶಿವಲಿಂಗೇಸ್ವರ ಪದವಿ ಪೂರ್ವ ಮಹಿಳಾ ಕಾಲೇಜಿನ ಅಧ್ಯಕ್ಷ ಪಿ.ಡಿ.ಶಿರೂರು ಸೇರಿದಂತೆ ಗಣ್ಯ ಮುಖಂಡರು ಆಗಮಿಸುವರು.