ಇಂದು ಡಾ. ವೀಣಾ, ಪ್ರೊ. ಸಿದ್ದರಾಮಯ್ಯಗೆ ಬೇಂದ್ರೆ ಪ್ರಶಸ್ತಿ ಪ್ರದಾನ

KannadaprabhaNewsNetwork |  
Published : Jan 31, 2025, 12:45 AM IST
30ಡಿಡಬ್ಲೂಡಿ8ಡಾ.ವೀಣಾ ಶಾಂತೇಶ್ವರ | Kannada Prabha

ಸಾರಾಂಶ

ವರಕವಿ ಡಾ. ದ.ರಾ. ಬೇಂದ್ರೆಯವರ 129ನೇ ಜನ್ಮದಿನ ನಿಮಿತ್ತ ಬೇಂದ್ರೆ ರಾಷ್ಟ್ರೀಯ ಸ್ಮಾರಕ ಟ್ರಸ್ಟ್‌ ಕೊಡಮಾಡುವ ಅಂಬಿಕಾತನಯದತ್ತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಜ. 31ರಂದು ಸಂಜೆ 5ಕ್ಕೆ ಸಾಧನಕೇರಿಯ ಬೇಂದ್ರೆ ಭವನದಲ್ಲಿ ಆಯೋಜಿಸಲಾಗಿದೆ.ಸಾಹಿತಿಗಳಾದ ಧಾರವಾಡದ ಡಾ. ವೀಣಾ ಶಾಂತೇಶ್ವರ ಮತ್ತು ತುಮಕೂರಿನ ಪ್ರೊ. ಎಸ್.ಜಿ. ಸಿದ್ದರಾಮಯ್ಯ ಅವರಿಗೆ ಈ ಬಾರಿಯ ಅಂಬಿಕಾತಯನಯದತ್ತ (ತಲಾ ₹ 50 ಸಾವಿರ ನಗದು) ಪ್ರಶಸ್ತಿ ಲಭಿಸಿದೆ.

ಧಾರವಾಡ:

ವರಕವಿ ಡಾ. ದ.ರಾ. ಬೇಂದ್ರೆಯವರ 129ನೇ ಜನ್ಮದಿನ ನಿಮಿತ್ತ ಬೇಂದ್ರೆ ರಾಷ್ಟ್ರೀಯ ಸ್ಮಾರಕ ಟ್ರಸ್ಟ್‌ ಕೊಡಮಾಡುವ ಅಂಬಿಕಾತನಯದತ್ತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಜ. 31ರಂದು ಸಂಜೆ 5ಕ್ಕೆ ಸಾಧನಕೇರಿಯ ಬೇಂದ್ರೆ ಭವನದಲ್ಲಿ ಆಯೋಜಿಸಲಾಗಿದೆ.

ಸಾಹಿತಿಗಳಾದ ಧಾರವಾಡದ ಡಾ. ವೀಣಾ ಶಾಂತೇಶ್ವರ ಮತ್ತು ತುಮಕೂರಿನ ಪ್ರೊ. ಎಸ್.ಜಿ. ಸಿದ್ದರಾಮಯ್ಯ ಅವರಿಗೆ ಈ ಬಾರಿಯ ಅಂಬಿಕಾತಯನಯದತ್ತ (ತಲಾ ₹ 50 ಸಾವಿರ ನಗದು) ಪ್ರಶಸ್ತಿಯನ್ನು ಹಿರಿಯ ಸಾಹಿತಿ ಡಾ. ಸಿದ್ಧಲಿಂಗ ಪಟ್ಟಣಶೆಟ್ಟಿ ಪ್ರದಾನ ಮಾಡಲಿದ್ದಾರೆ. ಟ್ರಸ್ಟ್ ಅಧ್ಯಕ್ಷ ಡಾ. ಡಿ.ಎಂ. ಹಿರೇಮಠ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಜಿಲ್ಲಾಧಿಕಾರಿ ದಿವ್ಯಪ್ರಭು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕ ಕೆ.ಎಚ್. ಚನ್ನೂರ ಭಾಗವಹಿಸುವರು. ಪ್ರಶಸ್ತಿ ಪುರಸ್ಕೃತರಾದ ಡಾ. ವೀಣಾ ಶಾಂತೇಶ್ವರ ಕುರಿತು ಕಲಬುರಗಿ ಕೇಂದ್ರೀಯ ವಿವಿ ಅಧ್ಯಯನಾಂಗ ನಿರ್ದೇಶಕ ಪ್ರೊ. ಬಸವರಾಜ ಡೋಣೂರು ಅಭಿನಂದನಾಪರ ನುಡಿ ಮಾಡುವರು. ಪ್ರೊ. ಎಸ್.ಜಿ. ಸಿದ್ದರಾಮಯ್ಯ ಕುರಿತು ಸಹಪ್ರಾಧ್ಯಾಪಕ ಡಾ. ಎಚ್.ಬಿ. ಕೊಲ್ಕಾರ ಅಭಿನಂದನಾಪರ ನುಡಿ ಮಾಡುವರು ಎಂದು ಪ್ರಕಟಣೆ ತಿಳಿಸಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪರಂಗೆ ಸಿಎಂ ಸ್ಥಾನ ನೀಡದಿದ್ದರೆ ರಾಜ್ಯಕ್ಕೆ ಅಪಮಾನ ಮಾಡಿದಂತೆ
ಮೀಸಲು ವರ್ಗೀಕರಣದ ವಿರುದ್ಧ ಇಂದು ಬೆಳಗಾವಿ ಚಲೋ