ಹುಬ್ಬಳ್ಳಿ:
ಹಾಲು, ಮೆಡಿಕಲ್, ಆಸ್ಪತ್ರೆ, ಗ್ಯಾಸ್ ಸೇರಿದಂತೆ ತುರ್ತು ಸೇವೆಗಳಿಗೆ ಯಾವುದೇ ಸಮಸ್ಯೆಯಿಲ್ಲ. ಆದರೆ, ವ್ಯಾಪಾರ-ವಹಿವಾಟು, ಚಿತ್ರಮಂದಿರ ಸ್ಥಗಿತಗೊಳ್ಳಲಿವೆ. ಪ್ರಾಥಮಿಕ ಹಾಗೂ ಪ್ರೌಢಶಾಲೆ ರಜೆ ಘೋಷಿಸಲಾಗಿದೆ. ಬಸ್ ಸಂಚಾರವನ್ನು ಪರಿಸ್ಥಿತಿ ನೋಡಿಕೊಂಡು ನಿರ್ಧಾರ ಕೈಗೊಳ್ಳಲು ಸಾರಿಗೆ ಸಂಸ್ಥೆ ನಿರ್ಧರಿಸಿದೆ. ಈ ನಡುವೆ ಬಂದ್ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲು ಪೊಲೀಸ್ ಕಮಿಷನರೇಟ್ ನಗರದಲ್ಲಿ ಬಿಗಿ ಭದ್ರತೆ ಏರ್ಪಡಿಸಿದೆ.
ಅಂಬೇಡ್ಕರ್ ಅವರನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವಮಾನ ಮಾಡಿದ್ದಾರೆ. ಇದು ಬಿಜೆಪಿಯ ಮನಸ್ಥಿತಿಯನ್ನು ತೋರಿಸುತ್ತಿದೆ. ಕೂಡಲೇ ಅಮಿತ್ ಶಾ ಬಹಿರಂಗ ಕ್ಷಮೆ ಕೇಳಬೇಕು. ಇಲ್ಲವೇ ಅವರನ್ನು ಕೇಂದ್ರ ಸಂಪುಟದಿಂದ ವಜಾಗೊಳಿಸಬೇಕು ಎಂದು ದಲಿತ ಸಂಘಟನೆಗಳು ಒಕ್ಕೊರಲಿನಿಂದ ಆಗ್ರಹಿಸಿವೆ.ಬಂದ್:
ಸಾರಿಗೆ ಬಸ್ಗಳು ಎಂದಿನಂತೆ ಸಂಚರಿಸಲಿವೆ. ಆದರೆ, ಆಗಿನ ಪರಿಸ್ಥಿತಿ ನೋಡಿಕೊಂಡು ಬಸ್ ಸಂಚಾರ ಮುಂದುವರಿಸಬೇಕೋ ಬೇಡವೋ ಎಂಬುದನ್ನು ನಿರ್ಧರಿಸಲಾಗುವುದು ಎಂದು ವಾಯವ್ಯ ಸಾರಿಗೆ ಸಂಸ್ಥೆ ತಿಳಿಸಿದೆ. ಇನ್ನು ಹಾಲು, ತರಕಾರಿ, ಮೆಡಿಕಲ್ ಶಾಪ್, ಆಸ್ಪತ್ರೆ, ಸೇರಿದಂತೆ ತುರ್ತು ಸೇವೆಗಳಿಗೆ ಯಾವುದೇ ಬಗೆಯ ಸಮಸ್ಯೆ ಮಾಡುವುದಿಲ್ಲ. ಆದರೆ ಇನ್ನುಳಿದ ವ್ಯಾಪಾರ ವಹಿವಾಟುಗಳನ್ನು ಬಂದ್ ಮಾಡಲಾಗುವುದು. ಸಾರ್ವಜನಿಕರು, ವರ್ತಕರು ಸ್ವಯಂ ಪ್ರೇರಿತವಾಗಿ ಬಂದ್ ಮಾಡುವ ಮೂಲಕ ಬೆಂಬಲಿಸಬೇಕು ಎಂದು ಬಂದ್ ಕರೆ ಕೊಟ್ಟವರು ಮನವಿ ಮಾಡಿಕೊಂಡಿದ್ದಾರೆ.ಕಾಂಗ್ರೆಸ್ ಸಭೆ:
ಈ ನಡುವೆ ಬಂದ್ ನಡೆಸದಂತೆ ಬೆದರಿಕೆಯೊಡ್ಡಲಾಗುತ್ತಿದೆ. ಅಂತಹವರ ಮೇಲೆ ಕಾನೂನು ಪ್ರಕಾರ ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿ ನಗರದಲ್ಲಿ ಸಮತಾ ಸೇನಾ ಕರ್ನಾಟಕ ಸಂಘಟನೆ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿತು. ಬಂದ್ ಮಾಡದಂತೆ ಬಿಜೆಪಿ ಮುಖಂಡರು ಬೆದರಿಕೆ ಹಾಕುತ್ತಿದ್ದಾರೆ. ಅಂಥವರ ವಿರುದ್ಧ ಕ್ರಮಕೈಗೊಳ್ಳಬೇಕು. ಬಂದ್ಗೆ ತಡೆಯೊಡ್ಡುವ ಪ್ರಯತ್ನ ಬಿಜೆಪಿ ಮಾಡುತ್ತಿದೆ. ಬಂದ್ ವೇಳೆ ಏನಾದರೂ ಅನಾಹುತಗಳು ನಡೆದರೆ ಅದಕ್ಕೆ ಬಿಜೆಪಿಯೇ ಕಾರಣ ಎಂದು ಮನವಿಯಲ್ಲಿ ತಿಳಿಸಲಾಗಿದೆ. ಗುರುನಾಥ ಉಳ್ಳಿಕಾಶಿ, ಮಾರುತಿ ದೊಡ್ಡಮನಿ ಸೇರಿದಂತೆ ಹಲವು ಮನವಿ ಸಲ್ಲಿಸಿದರು.