ಕನ್ನಡಪ್ರಭ ವಾರ್ತೆ ಭಾಲ್ಕಿ
ನಾಡೋಜ ಡಾ. ಬಸವಲಿಂಗ ಪಟ್ಟದ್ದೇವರು, ಪೀಠಾಧಿಪತಿ ಗುರುಬಸವ ಪಟ್ಟದ್ದೇವರ ಸಾನ್ನಿಧ್ಯದಲ್ಲಿ ಚನ್ನಬಸವಾಶ್ರಮ ಪರಿಸರದಲ್ಲಿ ದಿನವಿಡಿ ಕಾರ್ಯಕ್ರಮಗಳು ಜರುಗಲಿವೆ.
ಬಸವೇಶ್ವರ ವೃತ್ತದಲ್ಲಿ ಬೆಳಗ್ಗೆ 9ಕ್ಕೆ 25 ಗ್ರಾಮಗಳಿಂದ ಬರುವ ಚನ್ನಬಸವ ಜ್ಯೋತಿಗೆ ಸ್ವಾಗತ ಕೋರಲಾಗುತ್ತದೆ. ಜೊತೆಗೆ ಕಳೆದೊಂದು ವಾರದಿಂದ ಸಾಮೂಹಿಕ ವಚನ ಪಾರಾಯಣದಲ್ಲಿ ಪಾಲ್ಗೊಂಡ ಸಾವಿರಾರೂ ಭಕ್ತರು ವಚನ ಗ್ರಂಥವನ್ನು ತಲೆಯ ಮೇಲೆ ಹೊತ್ತುಕೊಂಡು ಚನ್ನಬಸವಾಶ್ರಮದ ವರೆಗೂ ಮೆರವಣಿಗೆಯಲ್ಲಿ ಸಾಗಲಿದ್ದಾರೆ.ಬೆಳಗ್ಗೆ 10ಕ್ಕೆ ಸಾಮೂಹಿಕ ವಚನ ಪಾರಾಯಣ ನಡೆಯಲಿದೆ. ನಂತರ 11ಕ್ಕೆ ವೇದಿಕೆ ಕಾರ್ಯಕ್ರಮ ಉದ್ಘಾಟನೆಗೊಳ್ಳಲಿದೆ. ಸಂಜೆ 4ಕ್ಕೆ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.
ವೇದಿಕೆಯ ಬಲ ಭಾಗದಲ್ಲಿ ಡಾ. ಚನ್ನಬಸವ ಪಟ್ಟದ್ದೇವರ ಹೆಸರಿನಲ್ಲಿ ದಾಸೋಹ ಭವನದ ಬೃಹತ್ ಪೆಂಡಾಲ್ ಹಾಕಲಾಗಿದೆ. ಸಮಾರಂಭದಲ್ಲಿ ಭಾಗವಹಿಸುವ ಭಕ್ತರು ಕುಟ್ಟಿದ ಹುಗ್ಗಿ ಸವಿಯಲಿದ್ದಾರೆ. ಜೊತೆಗೆ ಅನ್ನ, ಸಾಂಬಾರ್, ರೊಟ್ಟಿ, ಪಲ್ಯೆ, ಅಂಬಲಿ ವ್ಯವಸ್ಥೆ ಮಾಡಲಾಗುತ್ತಿದೆ. ಮಹಿಳೆಯರು ಹಾಗೂ ಪುರುಷರಿಗೆ ಪ್ರಸಾದ ಬಡಿಸಲು ಪ್ರತ್ಯೇಕವಾಗಿ 25 ಕೌಂಟರ್ಗಳ ವ್ಯವಸ್ಥೆ ಮಾಡಲಾಗಿದೆ. ಒಟ್ಟು 300 ಸೇವಕರನ್ನು ಪ್ರಸಾದಕ್ಕೆ ಬಳಸಿಕೊಳ್ಳಲಾಗುತ್ತಿದೆ ಎಂದು ದಾಸೋಹ ಸೇವಾ ಸಮಿತಿ ಅಧ್ಯಕ್ಷ ಸಿದ್ದಯ್ಯ ಕಾವಡಿಮಠ, ಶರಣಪ್ಪ ಬಿರಾದಾರ ತಿಳಿಸಿದ್ದಾರೆ.
ಮಾಜಿ ಶಾಸಕ ಪ್ರಕಾಶ ಖಂಡ್ರೆ ಬಸವಗುರುವಿನ ಪೂಜೆ ನೆರವೇರಿಸಲಿದ್ದಾರೆ. ನಾರಂಜಾ ಸಹಕಾರ ಸಕ್ಕರೆ ಕಾರಖಾನೆ ಅಧ್ಯಕ್ಷ ಡಿ.ಕೆ.ಸಿದ್ರಾಮ ಅವರು ಗ್ರಂಥ ಬಿಡುಗಡೆ ಮಾಡಲಿದ್ದಾರೆ. ಖ್ಯಾತ ಚಿಂತಕ ಎಸ್ಜಿ ಸಿದ್ದರಾಮಯ್ಯ ಅನುಭಾವ ನೀಡಲಿದ್ದಾರೆ.
ಈ ಸಂದರ್ಭದಲ್ಲಿ ಪ್ರಮುಖರಾದ ಸಿದ್ದಯ್ಯ ಕವಡಿಮಠ, ವಿಶ್ವನಾಥಪ್ಪ ಬಿರಾದಾರ, ಶಶಿಧರ ಕೋಸಂಬೆ, ಗಣಪತಿ ಬಾವುಗೆ, ಧನರಾಜ ಬಂಬುಳಗೆ, ಶರಣಪ್ಪ ಬಿರಾದಾರ, ನಾಗಶೆಟೆಪ್ಪ ಲಂಜವಾಡೆ, ಶಂಕರ ಮದರಗಾಂವೆ, ಶಾಂತಯ್ಯ ಸ್ವಾಮಿ, ರಾಜು ಜುಬರೆ, ಪ್ರಶಾಂತ ರೆಡ್ಡಿ, ಜಗನ್ನಾಥ ಚಿಟ್ಮೆ, ಚನ್ನಬಸವ ನಾಗೂರ, ಶಾಮರಾವ ಡೊಂಗರಗಿ, ವಿಜಯಕುಮಾರ ಇದ್ದರು.