ಕನ್ನಡಪ್ರಭ ವಾರ್ತೆ ದಾವಣಗೆರೆ
ಮಧ್ಯಾಹ್ನ 3 ಗಂಟೆಗೆ ಇ.ಎಂ.ಮಂಜುನಾಥ ಅಧ್ಯಕ್ಷತೆಯಲ್ಲಿ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾನಿಲಯದ ಶಿವಮೊಗ್ಗ ಸಂಚಾಲಕಿ ರಾಜಯೋಗಿನಿ ಬ್ರಹ್ಮಕುಮಾರಿ ಅನುಸೂಯಾಜಿ ಸಾನ್ನಿಧ್ಯದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಸಮಾರಂಭ ಉದ್ಘಾಟಿಸುವರು. ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಮಾಧ್ಯಮ ಮಾಣಿಕ್ಯ ಪ್ರಶಸ್ತಿ ಪ್ರದಾನ ಮಾಡುವರು. ಜಿಲ್ಲಾ ಉಸ್ತುವಾರಿ ಸಚಿವ ಎಸ್.
ಎಸ್.ಮಲ್ಲಿಕಾರ್ಜುನ ಸಾಧಕರಿಗೆ ಗೌರವಾರ್ಪಣೆ ಮಾಡುವರು. ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಪ್ರತಿಭಾ ಪುರಸ್ಕಾರ ಪ್ರದಾನ ಮಾಡುವರು. ಕೊಪ್ಪಳ ವಿವಿ ಕುಲಪತಿ ಪ್ರೊ.ಬಿ.ಕೆ.ರವಿ ವಿಶೇಷ ಉಪನ್ಯಾಸ ನೀಡುವರು ಎಂದು ಹೇಳಿದರು.ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ, ಜಿಲ್ಲಾ ವಾರ್ತಾಧಿಕಾರಿ ಬಿ.ಧನಂಜಯಪ್ಪ, ಸಂಘದ ರಾಜ್ಯ ಕಾರ್ಯದರ್ಶಿ ನಿಂಗಪ್ಪ ಚಾವಡಿ ಮುಖ್ಯ ಅತಿಥಿಯಾಗಿ ಭಾಗವಹಿಸುವರು.
ದಾವಣಗೆರೆ ವಿವಿ ಬಿ.ಎಸ್.ಸಿ. ಪಠ್ಯಕ್ಕೆ ಹಿರಿಯ ಪತ್ರಕರ್ತರೂ ಆದ ಸಾಹಿತಿ ಬಿ.ಎನ್.ಮಲ್ಲೇಶ್ರರ ‘ಉತ್ತರೆ ಮಳೆ’ ಕವಿತೆ ಆಯ್ಕೆಯಾಗಿದ್ದು, ದಾವಣಗೆರೆ ವಿವಿ ಗೌರವ ಡಾಕ್ಟರೇಟ್ ಪುರಸ್ಕಾರಕ್ಕೆ ಪಾತ್ರರಾದ ಹಿರಿಯ ವ್ಯಂಗ್ಯ ಚಿತ್ರಕಾರ ಎಚ್.ಬಿ.ಮಂಜುನಾಥ, ಜಿಲ್ಲಾ ವರದಿಗಾರರ ಕೂಟದ ನೂತನ ಅಧ್ಯಕ್ಷ, ‘ಕನ್ನಡಪ್ರಭ’ ಜಿಲ್ಲಾ ಹಿರಿಯ ಪ್ರಧಾನ ವರದಿಗಾರ ನಾಗರಾಜ ಎಸ್.ಬಡದಾಳ್, ಸಂಘದ ಚನ್ನಗಿರಿ ನೂತನ ಅಧ್ಯಕ್ಷ ವಿ. ಲಿಂಗರಾಜು ಅವರನ್ನು ಗೌರವಿಸಲಾಗುತ್ತಿದೆ ಎಂದು ತಿಳಿಸಿದರು.
ಮುದ್ರಣ ಮಾಧ್ಯಮ ವಿಭಾಗದಿಂದ ‘ಸಂಯುಕ್ತ ಕರ್ನಾಟಕ’ದ ಹಿರಿಯ ಉಪ ಸಂಪಾದಕ ಮಂಜುನಾಥ ಪಿ.ಕಾಡಜ್ಜಿ, ವಿದ್ಯುನ್ಮಾನ ಮಾಧ್ಯಮದಿಂದ ಟಿವಿ-9 ಜಿಲ್ಲಾ ಹಿರಿಯ ವರದಿಗಾರ ಬಸವರಾಜ ದೊಡ್ಮನಿ, ಛಾಯಾಗ್ರಹಣ ವಿಭಾಗದಲ್ಲಿ ‘ಸುವರ್ಣ ಟೈಮ್ಸ್ ಆಫ್ ಕರ್ನಾಟಕ’ದ ವಿಜಯಕುಮಾರ ಜಾಧವ್, ಡಿಟಿಪಿ-ಡಿಸೈನರ್ ವಿಭಾಗದಲ್ಲಿ ‘ವಿಜಯ ಕರ್ನಾಟಕ’ದ ಕೆ.ಜೆ. ದಾನೇಶ್, ಕಚೇರಿ ಸಿಬ್ಬಂದಿ ವಿಭಾಗದಲ್ಲಿ ‘ಜನತಾವಾಣಿ’ ಕರಡು ತಿದ್ದುಪಡಿಯ ಎಚ್.ನಿಂಗಪ್ಪ, ಜಾಹೀರಾತು ವಿಭಾಗದಿಂದ ಶ್ವೇತಾ, ಅಡ್ವರ್ಟೈಸರ್ಸ್ನ ಎಚ್.ಜಿ.ರುದ್ರೇಶಿ ಕೋಲ್ಕುಂಟೆ, ಮುದ್ರಣ ವಿಭಾಗದಿಂದ ‘ನಗರವಾಣಿ’ಯ ಎಸ್.ಎನ್.ಮಹೇಶ ಕಾಶೀಪುರ, ಪತ್ರಿಕೆ ವಿತರಣಾ ವಿಭಾಗದಲ್ಲಿ ಹಿರಿಯ ಪತ್ರಿಕಾ ವಿತರಕ ಟಿ.ಕೆ. ದಿನೇಶ್ ಬಾಬು ಅವರಿಗೆ ಮಾಧ್ಯಮ ಮಾಣಿಕ್ಕ ಪ್ರಶಸ್ತಿ ಪ್ರದಾನ ಮಾಡಲಾಗುವುದು.